ಹಾವೇರಿ | ಸಾಹಿತ್ಯವು ಸಮಾಜಮುಖಿ ಚಿಂತನೆಗಳನ್ನು ಪ್ರತಿಪಾದಿಸಬೇಕು: ಡಾ.ಎಂ.ಈ.ಶಿವಕುಮಾರ

Date:

ಖ್ಯಾತ ಕವಿ ದೇವರಾಜ್ ಹುಣಸಿಕಟ್ಟಿ ಅವರ ಹಕೀಮನೊಬ್ಬನ ತಕರಾರು ಎಂಬ ಕವನ ಸಂಕಲನ ಬಿಡುಗಡೆ ಹಾಗೂ ಜಿಲ್ಲಾಮಟ್ಟದ ಕವಿಗೋಷ್ಠಿಯು ಮಾತೋಶ್ರೀ ಮಹದೇವಕ್ಕ ಮಂಗಳ ವಾದ್ಯ ಮತ್ತು ಸಂಗೀತ ತರಬೇತಿ ಸಂಸ್ಥೆ ಮತ್ತು ನಲ್ಬೆಳಗು ಪ್ರಕಾಶನ ಸಂಯುಕ್ತಾಶ್ರಯದಲ್ಲಿ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ನಡೆಯಿತು.

ಖ್ಯಾತ ಬರಹಗಾರರಾದ ಡಾ. ಎಂ.ಈ. ಶಿವಕುಮಾರ ಹೊನ್ನಾಳಿಯವರು ಕೃತಿ ಬಿಡುಗಡೆ ಮಾಡಿ ಮಾತನಾಡುತ್ತಾ, ಕವಿಗಳಲ್ಲಿ ತಾಳ್ಮೆ ಅಗತ್ಯ. ಕವಿಗಳು ಸಾರ್ವತ್ರಿಕವಾಗಿರಬೇಕು. ಸಾಹಿತ್ಯ ಸಮಾಜಮುಖಿಯಾದ ಚಿಂತನೆಗಳನ್ನು ಪ್ರತಿಪಾದಿಸಿದಾಗ ಮಾತ್ರ ಜನ ಮಾನಸದಲ್ಲಿ ಉಳಿದುಕೊಳ್ಳಲು ಸಾಧ್ಯ. ಅಸಹನೆಗಳನ್ನು ಬೇರುಸಮೇತ ಕಿತ್ತುಹಾಕಬೇಕು” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಾಹಿತ್ಯ ಕ್ಷೇತ್ರದ ಮೂಲಕ ಸಮಾಜದ ಓರೆಕೋರೆಗಳನ್ನ ತಿದ್ದುವ ಶಕ್ತಿ ಬರುತ್ತದೆ. ಇಂತಹ ಸಾಧ್ಯತೆಗಳನ್ನು ಕವಿ ದೇವರಾಜ ತಮ್ಮ ಕೃತಿಯ ಕವನಗಳ ಮೂಲಕ ವ್ಯಕ್ತ ಪಡಿಸಿದ್ದಾರೆ. ಇಂದಿನ ಬರಹಗಾರರು, ಸಾಹಿತಿಗಳು ಈ ನಿಟ್ಟಿನಲ್ಲಿ ಗಂಭೀರ ಚಿಂತನೆ ನಡೆಸಬೇಕು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಜಿಲ್ಲೆಯ ಹಿರಿಯ ಸಾಹಿತಿಗಳಾದ ಸತೀಶ ಕುಲಕರ್ಣಿ ಮಾತನಾಡುತ್ತಾ, “ಕವಿತೆಗಳಲ್ಲಿ ನಿರಂತರ ಸಾಹಿತ್ಯ ಕೃಷಿ ಇರಬೇಕು. ಮೊನಚು, ನೇರ, ದಿಟ್ಟತನ, ವೈಚಾರಿಕ ಪ್ರಜ್ಞೆಯು ದೇವರಾಜ್ ಹುಣಸಿಕಟ್ಟಿಯವರ ಕಾವ್ಯದಲ್ಲಿದೆ. ಬಂಡಾಯ ಸಾಹಿತ್ಯದ ಮುಂದಣ ಹೆಜ್ಜೆಗಳನ್ನು ಇವರ ಕವನದಲ್ಲಿ ನಾವು ಕಾಣಲು ಸಾಧ್ಯ” ಎಂದು ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ಈ ರೀತಿಯ ಸಾಮಾಜಿಕ ಬದ್ಧತೆ ಕ್ಷೀಣಿಸುತ್ತಿದೆ ಎಂದು ವಿಷಾದಿಸಿದ ಅವರು, ಸಮಾಜಮುಖಿ ಆಗಿರಬೇಕಾದ ಇಂದಿನ ಅನೇಕ ಸಾಹಿತಿಗಳಲ್ಲಿ ಸಾಮಾಜಿಕ ಬದ್ಧತೆ ಕಾಣದಾಗಿದೆ. ಕೆಟ್ಟಿರುವ ಸಮಾಜದ ವ್ಯವಸ್ಥೆ ಬಗ್ಗೆ ಮಾತನಾಡುವಲ್ಲಿ ನಿಷ್ಕ್ರಿಯರಾಗಿದ್ದಾರೆ ಎಂದರು.

ಯಾವುದೇ ಕವನ ಸಾಹಿತ್ಯವಾಗಲಿ ಸ್ವಯಂಪ್ರೇರಿತವಾಗಿ ಅಭ್ಯಾಸ ಮಾಡುವುದರಿಂದ ಮತ್ತು ಅನುಭವದಿಂದ ಮಾತ್ರ ಬರಲು ಸಾಧ್ಯವೆಂದು ತಿಳಿಸಿದರು.

ಕಾವ್ಯ ಮತ್ತು ಸಾಹಿತ್ಯಗಳ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡಬಹುದು. ಕವಿಗಳನ್ನು, ಲೇಖಕರನ್ನು ಓದಿನಲ್ಲಿ ತೊಡಗಿಸುವುದು ಇಂತಹ ಕವಿಗೋಷ್ಠಿಗಳ ಉದ್ದೇಶವಾಗಿದೆ. ಆಧುನಿಕ ಯುಗದಲ್ಲಿ ಎಲ್ಲರೂ ಆಕರ್ಷಣೆಗೆ ಒಳಗಾಗಿರುವುದರಿಂದ ಕವನಗಳನ್ನು ಕೇಳುವವರ ಸಂಖ್ಯೆಯೇ ಕಡಿಮೆಯಾಗಿದೆ ಎಂದು ವಿಷಾದಿಸಿದರು.

ಸಾಹಿತಿಗಳಾದ ದೀಪಾ ಗೋನಾಳ ಕೃತಿ ಪರಿಚಯ ಮಾಡಿದರು. ಜಿಲ್ಲಾಮಟ್ಟದ ಕವಿಗೋಷ್ಠಿಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ 20ಕ್ಕೂ ಹೆಚ್ಚು ಕವಿಗಳು ತಮ್ಮ ಸ್ವರಚಿತ ಕವನ ವಾಚಿಸಿ ಎಲ್ಲರ ಗಮನ ಸೆಳೆದರು.

ಕಾರ್ಯಕ್ರಮದ ಮೊದಲು ನಾಗರತ್ನ ಚಲವಾದಿ ಮತ್ತು ಪೂರ್ಣಿಮಾ , ಗೌತಮ್ ಹಾಗೂ ಪ್ರೀತಮ್ಮ ಸಾವಕ್ಕನವರ ಇವರುಗಳ ಮನಮೋಹಕ ಸ್ಯಾಕ್ಸೋಫೋನ್ ವಾದನ ಮೆರಗು ನೀಡಿತು.

ಕಾರ್ಯಕ್ರಮದಲ್ಲಿ ಅಭಿಲಾಷ್.ಕೆ ಬ್ಯಾಡಗಿ, ಕಲಾವಿದ ಬಸವರಾಜ ಸಾವಕ್ಕನವರ, ಕವಿ ಶಕುಂತಲಾ. ಎಫ್. ಕೆ. ಸೋಮಣ್ಣ ಲಮಾಣಿ, ಕಸಾಪ ನಿಕಟಪೂರ್ವ ಅಧ್ಯಕ್ಷರಾದ ವೀರೇಶ್ ಜಂಬಗಿ, ಕೃತಿಕಾರ ದೇವರಾಜ ಹುಣಸಿಕಟ್ಟಿ, ಕಲಾವಿದ ನಾಮದೇವ ಕಾಗದಗಾರ, ಕವಿ ಮಾರುತಿ ತಳವಾರ, ದಾಕ್ಷಾಯಣಿ ಉದಗಟ್ಟಿ, ಮುಂತಾದವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...