ರಾಣೇಬೆನ್ನೂರು | ಸೇವಾ ನಿವೃತ್ತಿ: ಎಂ ಎಚ್ ಬಜ್ಜಿ ಗುರುಗಳಿಗೆ ಗೌರವಪೂರ್ವಕ ಸನ್ಮಾನ

Date:

ರಾಣೇಬೆನ್ನೂರು ತಾಲೂಕಿನ ಹುಲಿಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟು ವರ್ಷಗಳ ಕಾಲ ಸೇವೆಸಲ್ಲಿಸಿ ನಿವೃತ್ತಿಯಾಗುತ್ತಿರುವ ಎಂ ಎಚ್ ಬಜ್ಜಿ ಗುರುಗಳಿಗೆ ಎಸ್‌ಡಿಎಂಸಿ ಅಧ್ಯಕ್ಷರು ಗ್ರಾಮ ಪಂಚಾಯಿತಿ ಸದಸ್ಯರು ಶಿಕ್ಷಕರ ಗುರುಬಳಗದೊಂದಿಗೆ ಹಾಗೂ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಸಮಸ್ತ ಪದಾಧಿಕಾರಿಗಳು ಗ್ರಾಮಸ್ಥರು ಸೇರಿ ಸನ್ಮಾನಿಸಿ ಗೌರವಿಸಿ ಅಭಿನಂದನಾ ಪತ್ರ ನೀಡಲಾಯಿತು.

ಗ್ರಾಮ ಪಂಚಾಯಿತಿ ಸದಸ್ಯರು ಭೀಮಪ್ಪ ಕುಡಪಲಿ ಮಾತನಾಡಿ, “ಎಂ ಎಚ್ ಬಜ್ಜಿ ಗುರುಗಳು ನಮ್ಮ ಹುಲಿಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 8 ವರ್ಷ ನಮ್ಮ ಶಾಲೆಯ ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ನೀಡಿ ನಮ್ಮ ಶಾಲೆಯ ಹೆಮ್ಮೆಯ ಗುರುಗಳಾಗಿದ್ದಾರೆ. ಇವತ್ತಿನ ದಿನ ನಮ್ಮ ಶಾಲೆಯಲ್ಲಿ ಅವರಿಗೆ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದ್ದು, ಅವರಿಗೆ ಗ್ರಾಮ ಪಂಚಾಯಿತಿ ಸದಸ್ಯರಿಂದ, ಎಸ್‌ಡಿಎಂಸಿ ಸದಸ್ಯರಿಂದ ಹಾಗೂ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆಯಿಂದ, ಶಾಲಾ ಶಿಕ್ಷಕರ ವತಿಯಿಂದ ಸನ್ಮಾನಿಸಿ ಗೌರವಿಸಿ ಅಭಿನಂದನೆ ಪತ್ರ ಹಾಗೂ ಸವಿನೆನಪಿನ ಉಡುಗುರೆ ಕೊಟ್ಟು ಬೀಳ್ಕೊಡುತ್ತಿದ್ದೇವೆ. ಮುಂದೆ ಅವರು ನಮ್ಮ ಶಾಲೆಯನ್ನು ಮರೆಯದೆ ಶಾಲೆಯ ಶುಭ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಹಾಗೂ ನಮ್ಮ ಊರಿನ ಜಾತ್ರೆ ಹಬ್ಬಗಳಲ್ಲಿ ಭಾಗವಹಿಸಬೇಕು. ಗುರುಗಳು ಶಾಲೆಗೆ ಬಂದಾಗ ಮಕ್ಕಳು, ಗ್ರಾಮಸ್ಥರು ಗುರುಗಳಿಗೆ ಗೌರವಗಳೊಂದಿಗೆ ನಮಸ್ಕರಿಸುವಂತಹ ಮನೋಭಾವನೆ ಬಂದಾಗ ಮಾತ್ರ ಸುದೀರ್ಘವಾಗಿ ಸೇವೆಸಲ್ಲಿಸಿದ್ದಕ್ಕೂ ಸಾರ್ಥಕವಾಗುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ಮಂಗಳೂರು | ಡಿವೈಎಫ್ಐ ಮನವಿಗೆ ಬಿಇಒ ಸ್ಪಂದನೆ: ಜಾರದಗುಡ್ಡೆ ಶಾಲೆಯ ಅವ್ಯವಸ್ಥೆ ಸರಿಪಡಿಸುವ ಭರವಸೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಸ್‌ಡಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನಯ್ಯ ಹನಗೋಡಿಮಠ, ಮುಖ್ಯೋಪಾಧ್ಯಾಯ ಕಾಳಿಂಗಪ್ಪ ಆಲದಗೇರಿ, ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ನಾಗರಾಜ ಬಣಕಾರ, ಸ್ವಾಕರವೇ ತಾಲೂಕ ಅಧ್ಯಕ್ಷ ಚಂದ್ರಪ್ಪ ಬಣಕಾರ, ಚಂದ್ರುಗೌಡ, ಕೆಂಚನಗೌಡ್ರು, ಸಾಕಮ್ಮ, ಸುಮಾ ಕೋಲಕಾರ ಸೇರಿದಂತೆ ಶಾಲೆಯ ಸಹ ಶಿಕ್ಷಕರು, ಸುತ್ತಮುತ್ತಲಿನ ಶಾಲೆಯ ಸಹ ಶಿಕ್ಷಕರು, ಗ್ರಾಮಸ್ಥರು ಶಾಲೆಯ ವಿದ್ಯಾರ್ಥಿಗಳು ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...