ರಾಣೆಬೆನ್ನೂರು | ಸಮರ್ಪಕ ಬಸ್ ವ್ಯವಸ್ಥೆ, ಹಾಸ್ಟೆಲ್ ಮಂಜೂರಿಗೆ ಆಗ್ರಹಿಸಿ ಎಸ್‌ಎಫ್‌ಐಯಿಂದ ಪ್ರತಿಭಟನೆ

Date:

ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಹಾಗೂ ಹಾಸ್ಟೆಲ್ ಮಂಜೂರು ಮಾಡಲು ಶಾಸಕರ ಮಧ್ಯಪ್ರವೇಶಕ್ಕೆ ಆಗ್ರಹಿಸಿ ಎಸ್ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ ನಡೆಸಿದರು.

ರಾಣೆಬೆನ್ನೂರು ಪಟ್ಟಣದ ಮಾರುತಿ ನಗರದ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಿಂದ ಬಸ್ ನಿಲ್ದಾಣ ಮುಂದೆ ಬೃಹತ್ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು, ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಎಸ್ಎಫ್ಐ ಜಿಲ್ಲಾ ಸಹ ಕಾರ್ಯದರ್ಶಿ ಬಸವರಾಜ ಎಸ್, “ವಿದ್ಯಾರ್ಥಿಗಳ ಅನುಕೂಲಕ್ಕೆ ತಕ್ಕಂತೆ ಬಸ್ಸಿನ ಸಮಸ್ಯೆಗಳ ಪರಿಹಾರಕ್ಕಾಗಿ ಶಾಸಕರ ನೇತೃತ್ವದಲ್ಲಿ ಕೆ.ಎಸ್.ಆರ್.ಟಿ.ಸಿ ಡಿಪೋ ಮ್ಯಾನೇಜರ್ ವಿದ್ಯಾರ್ಥಿಗಳೊಂದಿಗೆ ಸಭೆ ಮಾಡಬೇಕು. ಎಸ್ಎಫ್ಐ ಹೋರಾಟದ ಪ್ರತಿಫಲವಾಗಿ ಜಿಲ್ಲೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 4 ಹಾಸ್ಟೆಲ್ ಮಂಜೂರು ಆಗಿವೆ. ಅದರಲ್ಲಿ ಕನಿಷ್ಠ ಎರಡು ಹಾಸ್ಟೆಲ್ ರಾಣೆಬೆನ್ನೂರು ನಗರಕ್ಕೆ ಕೊಡಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಣೆಬೆನ್ನೂರು 1

ಉಪಾಧ್ಯಕ್ಷ ನಿಹಾಲ್ ಖಾನ್ ಗಂಗಾವತಿ ಮಾತನಾಡಿ, “ವಿದ್ಯಾರ್ಥಿಗಳು ಪ್ರತಿದಿನ ವಿದ್ಯಾಭ್ಯಾಸದ ಉದ್ದೇಶದಿಂದ ತಾಲೂಕಿನ ವಿವಿಧ ಗ್ರಾಮೀಣ ಪ್ರದೇಶಗಳಿಂದ ತಾಲೂಕು ಕೇಂದ್ರದ ಕಾಲೇಜುಗಳಿಗೆ ಬರುತ್ತಾರೆ. ತಾಲೂಕು ಕೇಂದ್ರ ಬಸ್ ನಿಲ್ದಾಣದಿಂದ ಬಹುತೇಕ ಶಾಲಾ-ಕಾಲೇಜುಗಳು, ಹಾಸ್ಟೆಲ್‌ಗಳು ನಗರದಿಂದ ಸರಿಸುಮಾರು ದೂರದಲ್ಲಿದೆ. ಇದರಿಂದಾಗಿ ದಿನ ನಿತ್ಯವೂ ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರು ನಡೆದುಕೊಂಡು ಹೋಗುವ ಪರಿಸ್ಥಿತಿ ಎದುರಾಗಿದೆ. ಸರಿಯಾಗಿ ಬಸ್‌ಗಳನ್ನು ಬಿಡದೆ ವಿದ್ಯಾರ್ಥಿಗಳಿಗೆ ಸೇರಿದಂತೆ ಸಾರ್ವಜನಿಕರಿಗೂ ಅನಾನುಕೂಲವಾಗಿದೆ” ಎಂದರು.

ವಿದ್ಯಾರ್ಥಿ ಮುಖಂಡ ಗೌತಮ್ ಸಾವಕ್ಕನವರ್ ಮಾತನಾಡಿ, “ಸಾರಿಗೆ ಸೌಲಭ್ಯವಿಲ್ಲದೆ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಹಿನ್ನಡೆಯಾಗುತ್ತಿದೆ. ಆದ್ದರಿಂದ ಕಾಲೇಜಿಗೆ ಬಸ್ ವ್ಯವಸ್ಥೆ ಸೇರಿದಂತೆ ನಗರ ಸಾರಿಗೆ ಬಸ್ ಬಿಡಲು ಅನೇಕ ಬಾರಿ ಹೋರಾಟ ಮಾಡಿ ಮನವಿ ಕೊಟ್ಟಿದ್ದೇವೆ. ಈ ಹಿಂದೆ ಎಸ್ಎಫ್ಐ ಹೋರಾಟ ಪ್ರತಿಫಲವಾಗಿ ಬಸ್ ನಿಲ್ದಾಣದಿಂದ ಮಾರುತಿ ನಗರ ಮಾರ್ಗವಾಗಿ ಕಾಲೇಜು ತನಕ ಬಸ್ ಬರುತ್ತಿತು. ಆ ಯೋಜನೆಯನ್ನು ಮುಂದುವರೆಸಬೇಕೆಂದು ಹಾಗೂ ನಗರ ಸಾರಿಗೆ ಸೇರಿದಂತೆ ಅನೇಕ ಗ್ರಾಮೀಣ ಪ್ರದೇಶಗಳಿಗೆ ಈ ಕೂಡಲೇ ಕೆಎಸ್ಆರ್‌ಟಿಸಿ ಸಂಸ್ಥೆಯು ಸಮರ್ಪಕವಾಗಿ ಬಸ್ ಸೌಲಭ್ಯ ಒದಗಿಸಬೇಕು” ಎಂದು ಒತ್ತಾಯಿಸಿದರು.

ranibennur 1

ಪ್ರತಿಭಟನಾ ಸ್ಥಳಕ್ಕೆ ಶಾಸಕ ಪ್ರಕಾಶ್ ಕೋಳಿವಾಡ ಆಗಮಿಸಿ ಮನವಿ ಪತ್ರ ಸ್ವೀಕರಿಸಿದರು. ಈ ವೇಳೆ ಮಾತನಾಡಿದ ಅವರು, “ಕೂಡಲೇ ವಿದ್ಯಾರ್ಥಿ ಮುಖಂಡರ ಜೊತೆಗೆ ಡಿಪೋ ಮ್ಯಾನೇಜರ್ ಹಾಗೂ ಸಂಬಂಧಿಸಿದ ಅಧಿಕಾರಿಗಳ ಸಭೆ ನಡೆಸಿ, ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗಳನ್ನು ಪೂರೈಸಲು ಕ್ರಮ ಕೈಗೊಳ್ಳುತ್ತೇನೆ” ಎಂದು ಭರವಸೆ ನೀಡಿದರು.

ಪ್ರತಿಭಟನೆಯ ಸಂದರ್ಭದಲ್ಲಿ ಎಸ್ಎಫ್ಐ ಮುಖಂಡರಾದ ಮಹೇಶ್ ಮರೋಳ, ಶಾಂಭವಿ ಆಡಿನವರ, ಶಕುಂತಲಾ ಬಿ, ಬಿಂದು ವಿ ಎಚ್, ನಿಂಗರಾಜ್ ದಾನಮ್ಮನವರ, ಅರುಣ ಕೆ ಲಮಾಣಿ, ನಾಗರಾಜ್ ಭಾಗಲರ, ಸಿಂಧು ಆ ಚಲವಾದಿ, ಭವಾನಿ ಬಣಕಾರ್, ನಂದಿತಾ ರಿತ್ತಿ, ಪೂಜಾ ಜೆ ಸಿದ್ದನಕೋಟೆ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ranibennur

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...