ರನ್ನ ವೈಭವ: ಸಾಂಸ್ಕೃತಿಕ ಮಹಾ ಉತ್ಸವಕ್ಕೆ ಸಜ್ಜಾದ ಬಾಗಲಕೋಟೆ

Date:

ಕವಿ ಚಕ್ರವರ್ತಿ ರನ್ನನ ಗತ ವೈಭವ ಸಾರುವ ನಾಡಿನ ಮಹಾ ಉತ್ಸವ ರನ್ನ ವೈಭವಕ್ಕೆ ದಿನಗಣನೆ ಶುರುವಾಗಿದೆ. ರನ್ನನ ನಾಡು ಮುಧೋಳ ಹಾಗೂ ರನ್ನ ಬೆಳಗಲಿಗಳು ಸಾಂಸ್ಕೃತಿಕ ಮಹಾ ಹಬ್ಬಕ್ಕೆ ಸಕಲ ತಯಾರಿಗಳೊಂದಿಗೆ ಸಜ್ಜಾಗಿ ನಿಂತಿವೆ.

ಮುಧೋಳದಲ್ಲಿ ರನ್ನ ವೈಭವ-2025 ನಾಳೆಯೇ, ಅಂದರೆ ಫೆ.22 ರಿಂದ ಶುರುವಾಗಿ ಮೂರು ದಿನ ಅದ್ದೂರಿಯಾಗಿ ನಡೆಯಲಿದೆ. 22ರಂದು ರನ್ನ ಬೆಳಗಲಿಯಲ್ಲಿ ಹಾಗೂ 23, 24ರಂದು ಮುಧೋಳದಲ್ಲಿ ಸಾಂಸ್ಕೃತಿಕ ವೈಭವವೇ ಧರೆಗಿಳಿಯಲಿದೆ.

ಸಿನಿ ತಾರೆಯರು, ಖ್ಯಾತ ಗಾಯಕರು, ಸಂಗೀತ ನಿರ್ದೇಶಕರ ತಂಡಗಳೇ ಮೇಳೈಸಲಿದ್ದು, ಉತ್ಸವವನ್ನು ಕಣ್ತುಂಬಿಕೊಳ್ಳಲು ಕನ್ನಡದ ಮನಸ್ಸುಗಳು, ಕನ್ನಡಾಭಿಮಾನಿಗಳು ಕುತೂಹಲದಿಂದ ಎದುರು ನೋಡುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕಾರ್ಯಕ್ರಮಕ್ಕೆ ಜನಪ್ರಿಯ ಚಿತ್ರ ನಟಿ ರಚಿತಾ ರಾಮ್, ಖ್ಯಾತ ನಿರೂಪಕಿ ಅನುಶ್ರೀ, ಗಾಯಕ ಗುರುಕಿರಣ್, ರಾಜೇಶ್ ಕೃಷ್ಣನ್, ವಿಜಯ್ ಪ್ರಕಾಶ್, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ, ಆರ್ ಜಿ ರಶೀದ್, ಹಿರಿಯ ನಟ, ಗಾಯಕ ಗುರುರಾಜ ಹೊಸಕೋಟೆ, ಕಿರುತೆರೆ ತಾರೆ ಹನುಮಂತ ಲಮಾಣಿ, ಮಾಳು ನೀಪನಾಳ, ಗಾಯಕಿ ಅನುಪಮ ಭಟ್ ಸೇರಿದಂತೆ ಹಲವು ಸಹ ಕಲಾವಿದರು, ನಾಯಕರು ಆಗಮಿಸಲಿದ್ದಾರೆ.

ರನ್ನ ವೈಭವದ ಮೆರವಣಿಗೆ ಈ ಬಾರಿ ಆಕರ್ಷಣೀಯವಾಗಿರಲಿದೆ. ಕುದರೆ, ಸಾರೋಟು, ಛತ್ರ ಚಾಮರ, ಕೀರ್ತಿ ಧ್ವಜ, ಕೊಂಬು ಕಹಳೆ, ಜಾಗಟೆ, ಪೂರ್ಣ ಕುಂಭ ಮೆರವಣಿಗೆಗಳು ಕಾರ್ಯಕ್ರಮಕ್ಕೆ ಕಳೆ ತುಂಬಲಿವೆ. ಇನ್ನು ಮುಧೋಳ್ ಸಾರಿಗೆ ಡಿಪೋದಿಂದ ಸ್ಥಬ್ಧಚಿತ್ರ, ವೈವಿಧ್ಯಮಯ ಕಲೆಗಳು, ಜಾನಪದ ಕಲಾತಂಡಗಳು ಭಾಗವಹಿಸಲಿದ್ದು, ಮತ್ತಷ್ಟು ಮೆರಗು ನೀಡಲಿವೆ.

ಈ ಸುದ್ದಿ ಓದಿದ್ದೀರಾ?: ಸೌಹಾರ್ದತೆಯ ಹೊಸ ಹೆಜ್ಜೆ; ನವನಗರ ಬಾಗಲಕೋಟೆಗೆ ವಿಸ್ತರಿಸಿದ ಸದ್ಭಾವನ ಮಂಚ್

ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ ನೇತೃತ್ವದಲ್ಲಿ ರಾಜ್ಯದ 18ಕ್ಕೂ ಹೆಚ್ಚು ಸಚಿವರು, ಇಪ್ಪತ್ತಕ್ಕೂ ಹೆಚ್ಚು ಶಾಸಕರು, ನಿಗಮದ ಅಧ್ಯಕ್ಷರು, ಮೇಲ್ಮನೆ ಸದಸ್ಯರು ಈ ವೈಭವಕ್ಕೆ ಸಾಕ್ಷಿಯಾಗಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...