ಉಡುಪಿ ಘಟನೆ | ಟ್ವಿಟರ್‌ನಲ್ಲಿ ಯೋಗಿ ಆದಿತ್ಯನಾಥ್ ಜೊತೆಗಿದ್ದ ಫೋಟೋ ‘ಡಿಲೀಟ್’ ಮಾಡಿದ ರಶ್ಮಿ ಸಮಂತ್!

Date:

ಉಡುಪಿಯ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಮು ಆಯಾಮ ನೀಡಿದ್ದ ಸ್ವಯಂ ಘೋಷಿತ ಹಿಂದೂ ಹೋರಾಟಗಾರ್ತಿ ರಶ್ಮಿ ಸಮಂತ್, ತನ್ನ ಟ್ವಿಟರ್‌ನಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಜೊತೆಗಿದ್ದ ಫೋಟೋವನ್ನು ಡಿಲೀಟ್ ಮಾಡಿದ್ದಾರೆ.

ಘಟನೆಯನ್ನು ಕಳೆದ ಜು.24ರಂದು ಟ್ವೀಟ್ ಮಾಡಿದ್ದ ಸಂದರ್ಭದಲ್ಲಿ ಉಡುಪಿ ಮೂಲದ ರಶ್ಮಿ ಸಮಂತ್ ಅವರ ಟ್ವಿಟರ್‌ನ ಪ್ರೊಫೈಲ್‌ನಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೊತೆಗಿದ್ದ ಫೋಟೋ ಕೂಡ ಇತ್ತು. ಘಟನೆಗೆ ಹಿಂದೂ-ಮುಸ್ಲಿಂ ಆಯಾಮವನ್ನು ಕೊಟ್ಟಿದ್ದೂ ಅಲ್ಲದೇ, ವಿಡಿಯೋವನ್ನು ಮುಸಲ್ಮಾನರ ವಾಟ್ಸಾಪ್ ಗ್ರೂಪ್‌ಗಳಿಗೆ ಹರಿಬಿಡಲಾಗಿದೆ ಎಂದು ಹಲವು ದಾರಿ ತಪ್ಪಿಸುವ ಸುಳ್ಳು ಮಾಹಿತಿಯನ್ನೂ ಹಂಚಿಕೊಂಡಿದ್ದರು.

ಇದನ್ನು ಓದಿದ್ದೀರಾ? ಉಡುಪಿ ವಿಡಿಯೋ ಪ್ರಕರಣಕ್ಕೆ ಕೋಮು ಆಯಾಮ ಬೆರೆಸಿದ ರಶ್ಮಿ ಸಮಂತ್ ಯಾರು ಗೊತ್ತೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಶ್ಮಿಯವರ ಟ್ವೀಟ್ ಅನ್ನು ಗಮನಿಸಿ ಬಿಜೆಪಿ ಮತ್ತು ಸಂಘಪರಿವಾರದವರು ಮಾತನಾಡತೊಡಗಿದರು. ಬಿಜೆಪಿ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ, ರಶ್ಮಿಯವರ ಮನೆಗೆ ಪೊಲೀಸರು ಹೋಗಿದ್ದು ಯಾಕೆ ಎಂಬ ಪ್ರಶ್ನೆಯನ್ನೂ ಕೂಡ ಎತ್ತಿದ್ದರು. ಪ್ರಕರಣದ ಬಗ್ಗೆ ಮಾಧ್ಯಮಗಳು ಕೂಡ ಮಾತನಾಡಿದಾಗ, ಅದು ದೇಶಾದ್ಯಂತ ಸುದ್ದಿಯಾಗತೊಡಗಿತು.

WhatsApp Image 2023 07 27 at 4.38.50 PM

ಈ ಎಲ್ಲ ಬೆಳವಣಿಗೆಗಳ ನಡುವೆಯೇ ರಶ್ಮಿ ಸಮಂತ್ ಅವರ ಟ್ವಿಟರ್‌ನ ಪ್ರೊಫೈಲ್‌ನಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೊತೆಗಿದ್ದ ಫೋಟೋ ಮಾಯವಾಗಿದೆ. ಆದರೆ ಈ ಫೋಟೋ ಗೂಗಲ್‌ನಲ್ಲಿ ಇನ್ನೂ ಕೂಡ ಲಭ್ಯವಿದೆ.

‘ಯಾಕೆ ಮೇಡಂ ಫೋಟೋ ಡಿಲೀಟ್ ಮಾಡಿದ್ದೀರಿ’ ಎಂದು ಹಲವು ಮಂದಿ ಪ್ರಶ್ನಿಸಿದ್ದರೂ, ಆಕೆಯಿಂದ ಇನ್ನೂ ಉತ್ತರ ಬಂದಿಲ್ಲ. ಆದರೆ ಉಡುಪಿ ಪ್ರಕರಣಕ್ಕೆ ಸಂಬಂಧಿಸಿ ‘ಗೋದಿ ಮೀಡಿಯಾ’ಗಳಲ್ಲಿ ಸಂದರ್ಶನ ಮತ್ತು ತಮ್ಮ ಅನುಮಾನಗಳನ್ನು ತಿಳಿಸುವಲ್ಲಿಯೇ ನಿರತರಾಗಿದ್ದಾರೆ.

ಇಷ್ಟೆಲ್ಲ ಬೆಳವಣಿಗೆಗಳಾಗಿಯೂ ರಶ್ಮಿ ಸಮಂತ್ ಅವರು ಸುಳ್ಳು ಸುದ್ದಿ ಹರಡಿರುವುದು ಸ್ಪಷ್ಟವಾಗಿದ್ದರೂ ಅವರ ಮೇಲೆ ಯಾಕೆ ದೂರು ದಾಖಲಾಗಿಲ್ಲ ಎಂಬ ಪ್ರಶ್ನೆಯೂ ಸಾರ್ವಜನಿಕರಿಂದ ಕೇಳಿಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...