ಉಡುಪಿ | ವೇಷ ತೊಟ್ಟು ಅನಾರೋಗ್ಯ ಪೀಡಿತ ಮಕ್ಕಳ ಚಿಕಿತ್ಸೆಗೆ ನೆರವಾಗುವ ರವಿ ಕಟಪಾಡಿ

Date:

ಜಾತಿ, ಧರ್ಮ, ಮತವೆಂದು ಬೀದಿ ಬೀದಿಯಲ್ಲಿ ಹೆಣ ಉರುಳುವ ಈ ಕಾಲದಲ್ಲೂ ಯಾವುದೇ ಸ್ವಾರ್ಥ ಇಲ್ಲದೆ ವೇಷ ತೊಟ್ಟು ಬಡವರ ಮಕ್ಕಳ ಗಂಭೀರ ಕಾಯಿಲೆಯ ಚಿಕಿತ್ಸೆಯ ನೆರವಿಗೆ ನಿಂತು ಅವರ ಜೀವ ಉಳಿಸಿ ಮನುಕುಲದ ಮಾನವೀಯತೆಗೆ ಸಾಕ್ಷಿ ಎಂಬಂತೆ ನಮ್ಮ ನಡುವೆ ಅಪರೂಪದಲ್ಲೊಬ್ಬ ಅಪರೂಪ ವ್ಯಕ್ತಿಯೇ ರವಿ ಕಟಪಾಡಿ.

ಉಡುಪಿ ಜಿಲ್ಲೆಯ ಕಟಪಾಡಿಯ ರವಿ ಕೂಲಿ ಕೆಲಸ ಮಾಡಿಕೊಂಡು ತನಗೆ ಸರಿಯಾದ ಸೂರಿಲ್ಲದೆ ಇತರರ ಸೇವೆಗೆ ಕಳೆದ ಹಲವಾರು ವರ್ಷಗಳಿಂದ ಕಾರ್ಯಪ್ರವೃತ್ತರಾಗಿದ್ದಾರೆ.

ವೇಷಧಾರಿ

ಬಡವರ, ಅನಾರೋಗ್ಯ ಪೀಡಿತ, ಯಾವುದೇ ಜಾತಿ ಧರ್ಮ ನೋಡದೆ ಪ್ರತಿ ವರ್ಷ ಅಷ್ಠಮಿಯ ದಿನ ವಿಶಿಷ್ಟ ವೇಷವನ್ನು ಧರಿಸಿ ಜನರ ಬಳಿ ತೆರಳಿ ಇವರ ತಂಡ ಸಹಾಯವನ್ನು ಯಾಚಿಸುತ್ತದೆ. ಹೀಗೆ ಯಾಚಿಸಿ ಸಾರ್ವಜನಿಕರರಿಂದ ಸಂಗ್ರಹಿಸಿದ್ದು ಒಂದು ಕೋಟಿ ಹದಿಮೂರು ಲಕ್ಷ. ಇಷ್ಟು ಹಣದಿಂದ ಈಗಾಗಲೇ ಅನಾರೋಗ್ಯ ಪೀಡಿತ ಮಕ್ಕಳಿಗೆ ನೆರವನ್ನು ನೀಡಿದ್ದಾರೆ. ರವಿ ಕಟಪಾಡಿ ಈಗ ಊರಿಗೆ ಮಾತ್ರವಲ್ಲದೆ ನಾಡಿನಾದ್ಯಂತ ತನ್ನ ವಿಶಿಷ್ಟ ಮಾನವೀಯ ಸೇವೆಯಿಂದಾಗಿ ಚಿರಿಪರಿಚಿತರಾಗಿದ್ದಾರೆ. ಈಗಾಗಲೇ ನೂರಾರು ಸನ್ಮಾನಗಳೂ ಬಂದಿವೆ. ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗ ಕರೋಡ್ ಪತಿಯಲ್ಲಿಯೋ ವಿಶೇಷ ಆಹ್ವಾನಿತರಾಗಿ ಅದರಿಂದ ಗಳಿಸಿದ ಹಣವನ್ನೂ ಕೂಡ ಬಡ ನಿರ್ಗತಿಕರಿಗೆ ನೆರವು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಮಕ್ಕಳ ನೆರವಿಗೆ ವೇಷ

ವಿಶಿಷ್ಟ ವೇಷ ಧರಿಸಿ ಜನರನ್ನು ರಂಜಿಸುತ್ತಿದ್ದ ಸಮಾಜ ಸೇವಕ ರವಿ ಕಟಪಾಡಿ ಅವರು ಈ ಬಾರಿ ವಿಶಿಷ್ಟ ವೇಷದೊಂದಿಗೆ ಜನರನ್ನು ರಂಜಿಸಲು ಸಜ್ಜಾಗಿದ್ದಾರೆ. ಸೀ ಫೋಕ್ ಎಂಬ ಆಂಗ್ಲ ಚಲನಚಿತ್ರದ ವೇಷವನ್ನು ಹಾಕಿ ತಿರುಗಾಟ ನಡೆಸಲಿದ್ದಾರೆ.

ರವಿ ಕಟಪಾಡಿ 1

ಪ್ರತಿ ವರ್ಷ ಅನಾರೋಗ್ಯ ಪೀಡಿತ ಮಕ್ಕಳ ಚಿಕಿತ್ಸೆಗಾಗಿ ವೇಷ ಧರಿಸುತ್ತಿದ್ದ ರವಿ ಕಟಪಾಡಿ ಅವರು, ಈ ಬಾರಿಯೂ ಅದನ್ನು ಮುಂದುವರಿಸಿದ್ದಾರೆ. ಕುಂದಾಪುರದ 2 ವರ್ಷದ ಮಗುವಿನ ಚಿಕಿತ್ಸೆಗಾಗಿ ಹಣ ಸಂಗ್ರಹ ಮಾಡಲು ನಿರ್ಧಾರ ಮಾಡಿದ್ದಾರೆ. ಆದರೆ ಈ ಬಾರಿ ರವಿ ಕಟಪಾಡಿ ಫ್ರೆಂಡ್ಸ್ ತಂಡ ಜನರ ಬಳಿಗೆ ಹೋಗಿ ಬಾಕ್ಸ್‌ಗಳನ್ನು ಹಿಡಿದು ಹಣ ಸಂಗ್ರಹ ಮಾಡದಿರಲು ತೀರ್ಮಾನಿಸಿದೆ.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಭಾರೀ ಮಳೆ; ಕೃಷಿ ಹೊಂಡ ಭರ್ತಿ

ಈ ದಿನ.ಕಾಮ್ ಜೊತೆ ಮಾತನಾಡಿದ ರವಿ ಕಟಪಾಡಿ, “ಪ್ರತಿ ವರ್ಷದಂತೆ ಈ ಬಾರಿಯೂ ವೇಷ ಹಾಕುತ್ತಿದ್ದೇನೆ. ವೇಷದವರನ್ನು ನೋಡಿ ಬಾಗಿಲು ಹಾಕುತ್ತಿದ್ದರು. ಆದರೆ ನಮ್ಮ ತಂಡವನ್ನು ನೋಡಿ‌ ಬಾಗಿಲು ತೆಗೆದು ಅವರಾಗಿಯೇ ಬಂದು ಹಣವನ್ನು ನೀಡಿ ಅನಾರೋಗ್ಯ ಪೀಡಿತ ಮಕ್ಕಳ ಚಿಕಿತ್ಸೆಗೆ ನೆರವಾಗುತ್ತಿದ್ದಾರೆ. ಉದ್ಯಾವರ, ಉಡುಪಿ, ಮಲ್ಪೆ, ಪಡುಕೆರೆ ಮತ್ತು ಇತರ ಪ್ರದೇಶಗಳಲ್ಲಿ ತಮ್ಮ ಫ್ರೆಂಡ್ಸ್ ತಂಡ ತಿರುಗಾಟ ನಡೆಸಲಿದೆ. ಈ ಬಾರಿ ವೇಷ ಹಾಕಿದರೂ ಕೂಡಾ ಜನರ ಬಳಿಗೆ ತೆರಳಿ ಬಾಕ್ಸ್‌ನಲ್ಲಿ ಹಣ ಸಂಗ್ರಹ ಮಾಡುವುದಿಲ್ಲ. ಬದಲಾಗಿ ಯಾರಿಗಾದರೂ ನಮ್ಮ ಉದ್ದೇಶಕ್ಕೆ ಸಹಕಾರ ನೀಡಲು ಇಚ್ಚಿಸಿದ್ದಲ್ಲಿ ನಮ್ಮ ವಾಹನದ ಬಳಿಗೆ ಬಂದು ತಮ್ಮ ಧನಸಹಾಯವನ್ನು ನೀಡಬಹುದು” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಶಾರೂಕ್ ತೀರ್ಥಹಳ್ಳಿ
ಶಾರೂಕ್ ತೀರ್ಥಹಳ್ಳಿ
ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...