ಉಡುಪಿ | ದ್ವೇಷ ಭಾಷಣ, ಹಿಂದು ಐಕ್ಯ ವೇದಿಕೆಯ ರವೀಶ ತಂತ್ರಿ ವಿರುದ್ಧ ಪ್ರಕರಣ ದಾಖಲು

Date:

ಕಾರ್ಕಳದಲ್ಲಿ ನಿನ್ನೆ ದಿನ ಶ್ರೀ ಕ್ಷೇತ್ರ ಧರ್ಮಸ್ಥಳ ಅಭಿಮಾನಿಗಳ ವೇದಿಕೆ ವತಿಯಿಂದ ನಡೆದ ಜನಾಗ್ರಹ ಸಭೆಯಲ್ಲಿ ದ್ವೇಷ ಭಾಷಣ ಮಾಡಿದ ಅರೋಪದ ಮೇರೆಗೆ ಹಿಂದು ಐಕ್ಯ ವೇದಿಕೆ ಕೇರಳ ಇದರ ರವೀಶ ತಂತ್ರಿ ಕುಂಟಾರು ವಿರುದ್ಧ ಪ್ರಕರಣ ದಾಖಲಾಗಿದೆ.

ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕುಕ್ಕುಂದೂರು ಗ್ರಾಮದ ಕುಕ್ಕುಂದೂರು ಗ್ರಾಮ ಪಂಚಾಯತ್‌ ಎದುರುಗಡೆ ಮೈದಾನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಅಭಿಮಾನಿಗಳ ವೇದಿಕೆ ಕಾರ್ಕಳ ತಾಲೂಕು, ಉಡುಪಿ ಜಿಲ್ಲೆ ಇವರ ವತಿಯಿಂದ ಜನಾಗ್ರಹ ಸಭೆ ನಡೆದಿದ್ದು, ಈ ಸಭೆಯಲ್ಲಿ ರವೀಶ ತಂತ್ರಿ ಕುಂಟಾರು ಹಿಂದೂ ಐಕ್ಯ ವೇದಿಕೆ ಕೇರಳ ಇವರು ದಿಕ್ಸೂಚಿ ಭಾಷಣಗಾರರಾಗಿ ಭಾಗವಹಿಸಿದ್ದರು.

ಇವರು ಸಭೆಯಲ್ಲಿ ಸಾರ್ವಜನಿರನ್ನು ಉದ್ದೇಶಿಸಿ ಉದ್ದೇಶಪೂರ್ವಕವಾಗಿ ಶಾಂತಿಭಂಗ ಕೃತ್ಯದಲ್ಲಿ ತೊಡಗಿ ದ್ವೇಷಾಸೂಯೆಗೆ ವೈಮನಸಿಗೆ, ಶತ್ರುತ್ವಕ್ಕೆ ಪ್ರಚೋದನೆ ನೀಡಿ ದ್ವೇಷಪೂರಿತ ಭಾಷಣ ಮಾಡಿರುತ್ತಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣಾ ಅಪರಾದ ಕ್ರಮಾಂಕ : 114/2025. ಕಲಂ. 353(2) 196(1)(a) BNS 2023ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...