ಉಡುಪಿ | ಆರ್.ಸಿ.ಬಿ ಸಂಭ್ರಮಾಚರಣೆ-ಕಾಲ್ತುಳಿತ, 11 ಜನರ ಸಾವು – ಸರ್ಕಾರದ ನಿರ್ಲಕ್ಷ್ಯಕ್ಕೆ ಸಿಪಿಐ(ಎಂ) ಖಂಡನೆ

Date:

ಆರ್.ಸಿ.ಬಿ. ತಂಡದ ಗೆಲುವಿನ ಸಂಭ್ರಮಾಚರಣೆಗೆ ಸಾವಿರಾರು ಜನರು ಸೇರುವುದನ್ನು ರಾಜ್ಯ ಸರ್ಕಾರ ಅಂದಾಜಿಸಿ ಸರಿಯಾದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲ್ಲದ ಪರಿಣಾಮ ಭದ್ರತಾ ವೈಫಲ್ಯದಿಂದ ಕಾಲ್ತುಳಿತ ಸಂಭವಿಸಿ 11 ಜನರ ಸಾವು ಮತ್ತು ಹಲವಾರು ಮಂದಿ‌ ಗಂಭೀರವಾದ ಸ್ಥಿತಿಗೆ ದೂಡುವಂತೆ ಮಾಡಿರುವುದನ್ನು ಸಿಪಿಐ(ಎಂ) ಉಡುಪಿ ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ ಎಂದು ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂನ್ 3ರ ರಾತ್ರಿ ನಡೆದ ಐಪಿಎಲ್ ಪೈನಲ್ ಪಂದ್ಯದಲ್ಲಿ ಆರ್.ಸಿ.ಬಿ. ತಂಡವು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ವಿರುದ್ಧ ಗೆಲುವು ಪಡೆದು ಟ್ರೋಫಿ ತನ್ನದಾಗಿಸಿಕೊಂಡಿತ್ತು. ಈ ಗೆಲುವಿನ ಸಂಭ್ರಮಾಚರಣೆಯನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್.ಸಿ.ಬಿ. ಫ್ರಾಂಚೈಸಿ ಮತ್ತು ವಿಧಾನ ಸೌಧ ಮುಂಭಾಗ ರಾಜ್ಯ ಸರ್ಕಾರ ಆಯೋಜಿಸಿದ್ದವು. ಈ ಸಂಭ್ರಮಾಚರಣೆಗೆ ಕನಿಷ್ಡ ವ್ಯವಸ್ಥೆಗಳನ್ನು ಮಾಡಿಕೊಳ್ಳದೆ ಎರಡು ಕಡೆ ಕಾರ್ಯಕ್ರಮಕ್ಕೆ ಅವಕಾಶ ‌ನೀಡಿದ್ದು ಸರಿಯಾದ ಕ್ರಮವಲ್ಲ.

ಎರಡು ಕಡೆ ಕಾರ್ಯಕ್ರಮವನ್ನು ಆಯೋಜಿಸಿದ ಮೇಲೆ ಅದಕ್ಕೆ ತಕ್ಕಂತಹ ಸಿದ್ಧತೆಯನ್ನು ರಾಜ್ಯ ಸರ್ಕಾರ ಮಾಡಬೇಕಿತ್ತು. ಆರ್.ಸಿ.ಬಿ. ಫ್ರಾಂಚೈಸಿ ಮಾಲೀಕರು ಸಹ ಸೂಕ್ತ ಭದ್ರತೆ ಪಡೆಯಬೇಕಿತ್ತು. ಇಡೀ ಪೋಲೀಸ್ ಇಲಾಖೆಯ ಭದ್ರತೆ ವಿಧಾನ ಸೌಧ ಕಾರ್ಯಕ್ರಮಕ್ಕೆ ನೀಡಿ, ಚಿನ್ನಸ್ವಾಮಿ ಸ್ಟೇಡಿಯಂ ಕಾರ್ಯಕ್ರಮದ ಭದ್ರತಾ ಕೆಲಸಗಳಿಗೆ ನಿರ್ಲಕ್ಷ್ಯತೆ ವಹಿಸಿದಂತೆ ಕಾಣುತ್ತದೆ.‌ ಅಲ್ಲದೆ ಚಿನ್ನಸ್ವಾಮಿ ಸ್ಟೇಡಿಯಂನ ಗೇಟ್ ನ್ನು ಒಮ್ಮೆಲೆ ತೆರೆದಿದ್ದು ನೂಕುನುಗ್ಗಲು ಹೆಚ್ಚಾಗಿ ಈ ದುರಂತಕ್ಕೆ ಎಡೆಮಾಡಿಕೊಟ್ಟಂತಿದೆ. ಇದು ರಾಜ್ಯ ಗೃಹ ಇಲಾಖೆಯ ವೈಫಲ್ಯವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತ ಕ್ರಿಕೆಟ್ ತಂಡ ಟಿ20 ವಿಶ್ವಕಪ್ ಗೆದ್ದಾಗ, ಕರ್ನಾಟಕ ತಂಡ ರಣಜಿ ಟ್ರೋಫಿ ಗೆದ್ದಾಗ ನೀಡದಿರುವ ಮಹತ್ವ ಹಾಗೂ ಕ್ರೀಡೆಗಳಿಗೆ ಪ್ರೋತ್ಸಾಹ, ಅನುದಾನ ನೀಡಿದ ರಾಜ್ಯ ಸರ್ಕಾರ ಆರ್.ಸಿ.ಬಿ. ಫ್ರಾಂಚೈಸಿ ತಂಡ ಗೆಲುವಿಗೆ ಮಹತ್ವ ನೀಡಿ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮ ಆಯೋಜಿಸಿದ್ದು ದುರದೃಷ್ಟಕರವಾಗಿದೆ.

ಘಟನೆಯಲ್ಲಿ ನ ಎಲ್ಲಾ ಗಾಯಾಳುಗಳ ಚಿಕಿತ್ಸೆ ವೆಚ್ಚಗಳು ಮತ್ತು ಆರೈಕೆ ಅವಧಿಯ ವೆಚ್ಚಗಳನ್ನು ಹಾಗೂ ಮೃತ ವ್ಯಕ್ತಿಗಳ ಕುಟುಂಬಗಳಿಗೆ ಸೂಕ್ತ ಪರಿಹಾರವನ್ನು ರಾಜ್ಯ ಸರ್ಕಾರ ಹಾಗೂ ಆರ್.ಸಿ.ಬಿ. ಫ್ರಾಂಚೈಸಿ ಮಾಲಿಕರು ಘೋಷಿಸಬೇಕೆಂದು ಸಿಪಿಐ(ಎಂ) ಉಡುಪಿ ಜಿಲ್ಲಾ ಸಮಿತಿಯು ಒತ್ತಾಯಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...