ಸಹ ಪ್ರಾಧ್ಯಾಪಕರ ನೇಮಕಾತಿ |‌ ನ್ಯಾಯಾಲಯದ ತೀರ್ಪು ನೋಡಿ ನಿರ್ಧಾರ: ಸಚಿವ ಎಂ ಸಿ ಸುಧಾಕರ್

Date:

  • ಹೋರಾಟ ನಿರತ ಸಹ ಪ್ರಾಧ್ಯಾಪಕ ಆಕಾಂಕ್ಷಿಗಳ ಭೇಟಿ ಮಾಡಿದ ಸಚಿವರು
  • ‘ಎರಡು ವರ್ಷ ಕಾದಿದ್ದೀರಿ, ಕೆಲವೇ ದಿನಗಳಲ್ಲಿ ನಿಮ್ಮ ಸಮಸ್ಯೆಗೆ ಪರಿಹಾರ’

ಎರಡು ವರ್ಷಗಳ ಹಿಂದೆ 2021ರಲ್ಲಿ ನೇಮಕಗೊಂಡು ಹುದ್ದೆ ನಿರೀಕ್ಷೆಯಲ್ಲಿರುವ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಕುರಿತಂತೆ ನ್ಯಾಯಾಲಯದ ನಾಳಿನ ತೀರ್ಪು ನೋಡಿಕೊಂಡು ರಾಜ್ಯ ಸರ್ಕಾರ ಸೂಕ್ತ ತೀರ್ಮಾನಕ್ಕೆ ಬರಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ ಸಿ ಸುಧಾಕರ್ ಹೇಳಿದರು.

ಸ್ವತಂತ್ರ ಉದ್ಯಾನವನದಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಂಡಿರುವ 2021ರ ಸಹ ಪ್ರಾಧ್ಯಾಪಕರ ನೇಮಕಾತಿ ನಿರೀಕ್ಷೆಯಲ್ಲಿರುವ ಹೋರಾಟ ನಿರತರನ್ನು ಭೇಟಿ ನೀಡಿದ ಸಚಿವರು, “ರಾಜ್ಯ ಸರ್ಕಾರ ನಿಮ್ಮ ನ್ಯಾಯಯುತ ಬೇಡಿಕೆ ಈಡೇರಿಸಲು ಮುಕ್ತವಾಗಿದೆ” ಎಂದರು.

“ಪರೀಕ್ಷೆ ಫಲಿತಾಂಶದ ನಂತರ ಉಂಟಾಗಿರುವ ಪ್ರಶ್ನೆ ಪತ್ರಿಕೆ ಬಯಲು ಪ್ರಕರಣ ಒಂದು ವಿಷಯಕ್ಕೆ ಮಾತ್ರ ಸೀಮಿತವಾಗಿದೆ. ಈಗಾಗಲೇ ಈ ಬಗ್ಗೆ ತಪ್ಪಿತಸ್ಥರ ಮೇಲೆ ಕಾನೂನಿನ ಕ್ರಮ ಕೈಗೊಳ್ಳಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಸಿ.ಸಿ.ಬಿ ಪೊಲೀಸರು ಈಗಾಗಲೇ ಚಾರ್ಚ್‍ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಆದರೆ, ತನಿಖೆ ಮುಗಿದಿದೆಯೇ, ಇಲ್ಲವೋ ಎಂಬುದರ ಬಗ್ಗೆ ಅಂತಿಮ ವರದಿ ನೀಡಿಲ್ಲ. ಹಾಗಾಗಿ ವಿಳಂಬವಾಗಿದೆ. ಈ ಬಗ್ಗೆ ವರದಿ ನೀಡುವಂತೆ ಸೂಚಿಸಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮತ್ತೊಂದು ಕಲ್ಯಾಣ ಕರ್ನಾಟಕದ 371ಜೆ ಸಂಬಂಧಿಸಿದಂತೆ ಹಿಂದಿನ ಸರ್ಕಾರ ಪರೀಕ್ಷೆ ಸಮಯದಲ್ಲಿ ಒಂದು ಮಾರ್ಗದರ್ಶನ ನೀಡಿ, ಆನಂತರ ಮತ್ತೊಂದು ಆದೇಶವನ್ನು ಹೊರಡಿಸಿದ್ದು ಕೂಡ ಈಗ ಗೊಂದಲಕ್ಕೆ ಕಾರಣವಾಗಿದೆ ಎಂದು ವಿವರಿಸಿದರು. ಎರಡು ವರ್ಷ ಕಾದಿದ್ದೀರಿ. ಇನ್ನು ಕೆಲವೇ ದಿನಗಳಲ್ಲಿ ನಿಮ್ಮ ಸಮಸ್ಯೆ ಪರಿಹಾರವಾಗಲಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜ್ಯದಲ್ಲಿ ಮತ್ತೆ ಶುರುವಾಯಿತು ಹೆಣ ರಾಜಕಾರಣ

“ಸಿ.ಸಿ.ಬಿ ವರದಿ ಹಾಗೂ 371ಜೆ ಪ್ರಕರಣಗಳು ಮುಖ್ಯವಾಗಿವೆ. ಈ ಹಿನ್ನೆಲೆಯಲ್ಲಿ ನಾಳೆ ನ್ಯಾಯಾಲಯ ಯಾವ ನಿರ್ಧಾರ ಕೈಗೊಳ್ಳುತ್ತದೆ ಎಂಬುದನ್ನು ಸರ್ಕಾರ ನಿರೀಕ್ಷಿಸುತ್ತಿದ್ದು, ತೀರ್ಪಿನ ನಂತರ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ನೇಮಕಾತಿಗೊಂಡಿರುವ 1242 ವಿದ್ಯಾರ್ಥಿಗಳಿಗೆ ಅನ್ಯಾಯವಾಗದಂತೆ ಸರ್ಕಾರ ನ್ಯಾಯ ದೊರಕಿಸಿಕೊಡಲು ಬದ್ಧವಾಗಿದೆ” ಎಂದು ಸಚಿವರು ಭರವಸೆ ನೀಡಿದರು.

“ಅತ್ಯಂತ ಕಠಿಣ ಪರೀಕ್ಷೆಯನ್ನು ಎದುರಿಸಿ ಆಯ್ಕೆಯಾಗಿರುವ ನಿಮ್ಮೆಲ್ಲರ ನೋವಿಗೆ, ಆತಂಕಕ್ಕೆ ನನ್ನ ಸಹಮತವಿದೆ. ಆದರೆ, ವ್ಯವಸ್ಥೆಯಲ್ಲಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಅಷ್ಟೇ ಮುಖ್ಯ. ದುಡುಕಿನ ನಿರ್ಧಾರ ಕೈಗೊಂಡರೆ ಮತ್ತೆ ನಿಮಗೆ ತೊಂದರೆ ಆಗಬಾರದೆಂಬ ನಿಲುವಿನಿಂದ ಸಿ.ಸಿ.ಬಿ ಅಂತಿಮ ವರದಿ ಹಾಗೂ ನ್ಯಾಯಾಲಯದ ತೀರ್ಪನ್ನು ಸರ್ಕಾರ ನಿರೀಕ್ಷಿಸುತ್ತಿದೆ. ಹಾಗಾಗಿ ಮುಷ್ಕರಕ್ಕಾಗಿ ನೂರಾರು ಮೈಲಿ ದೂರದ ಊರುಗಳಿಂದ ಬಂದಿರುವ ನೀವುಗಳು ಮುಷ್ಕರ ಕೈಬಿಟ್ಟು ನಮ್ಮೊಡನೆ ಸಹಕರಿಸಿ” ಎಂದು ವಿನಂತಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...