ಬಂಟ್ವಾಳ | ನಗರ ಪುನರ್ವಸತಿ ಕಾರ್ಯಕರ್ತರ ನೇಮಕಾತಿ; ವಿಕಲಚೇತನರಿಂದ ಅರ್ಜಿ ಆಹ್ವಾನ

Date:

ವಿಕಲಚೇತನರಿಗೆ ವಿಕಲಚೇತನರ ಮೂಲಕವೇ ಅವರು ವಾಸಿಸುವ ವ್ಯಾಪ್ತಿಯಲ್ಲಿ ಶೈಕ್ಷಣಿಕ ಉದ್ಯೋಗ ತರಬೇತಿ, ಆರ್ಥಿಕ ಪುನರ್ವಸತಿ ಮತ್ತು ಸಾಮಾಜಿಕ ಭದ್ರತೆ ಸೌಲಭ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಪುನರ್ವಸತಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ನಗರ ಪುನರ್ವಸತಿ ಕಾರ್ಯಕರ್ತರನ್ನು ನೇಮಕ ಮಾಡುವ ಸಲುವಾಗಿ ವಿಟ್ಲ ಪಟ್ಟಣ ಪಂಚಾಯತ್, ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ವಾಸಿಸುವ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಶಕ್ತಿ ಯೋಜನೆ: ಮಹಿಳಾ ಸಬಲೀಕರಣಕ್ಕೆ ಹೊಸ ದಿಕ್ಕು

ಅರ್ಹತೆ: ನಗರ ಪುನರ್ವಸತಿ ಕಾರ್ಯಕರ್ತರು ಸ್ಥಳೀಯರಾಗಿರಬೇಕು. ವಯೋಮಿತಿ 18-45 ವರ್ಷ. ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ. ಪಾಸ್/ಫೇಲ್ ಆದವರು ಅರ್ಜಿ ಸಲ್ಲಿಸಬಹುದು. ಅಂಗವಿಕಲರಾಗಿರಬೇಕು, ಭಾಗಶಃ ಅಂಧರಿಗೆ/ ಭಾಗಶಃ ಶ್ರವಣದೋಷವುಳ್ಳವರಿಗೆ (ಮೈಲ್ಡ್ ಮತ್ತು ಮಾಡರೇಟ್) ಮತ್ತು ದೈಹಿಕ ಅಂಗವಿಕಲರಿಗೆ ಅವಕಾಶ ಕಲ್ಪಿಸಲಾಗುತ್ತದೆ. ಅಂಗವಿಕಲತೆಯು ಶೇ. 40 ರಷ್ಟಿರಬೇಕು. ಅಂಗವಿಕಲತೆಯ ಬಗ್ಗೆ ವೈದ್ಯಕೀಯ ಮಂಡಳಿಯ ಪ್ರಮಾಣ ಪತ್ರ/ ಗುರುತಿನ ಚೀಟಿಯ ದಾಖಲೆ ಒದಗಿಸಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಮಂಗಳೂರು | ಕಟ್ಟಡ ನಿರ್ಮಾಣಕ್ಕೆ ಲೈಸೆನ್ಸ್‌ ಕಡ್ಡಾಯ, ತಪ್ಪಿದರೆ ಸೌಲಭ್ಯ ಕಟ್:‌ ಮನಪಾ

ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ  ದಿನ. ಅರ್ಜಿ ನಮೂನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾ ಕಚೇರಿ, ವಿಟ್ಲ ಕುಲಾಲ ರಜತ ಭವನ ಕಟ್ಟಡ, ಸಮುದಾಯ ಆರೋಗ್ಯ ಕೇಂದ್ರದ ಬಳಿ ವಿಟ್ಲ ಕಚೇರಿಗೆ ನೀಡಬೇಕು.

ಹೆಚ್ಚಿನ ಮಾಹಿತಿಗೆ (ದೂರವಾಣಿ ಸಂಖ್ಯೆ 08255-238080) ಮತ್ತು ಅರ್ಜಿ ನಮೂನೆಗಳಿಗೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಕಚೇರಿ ಸಂಪರ್ಕಿಸಬಹುದು ಎಂದು ವಿಕಲಚೇತನರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...