ನಿವೇಶನಕ್ಕಾಗಿ ಎದುರು ನೋಡುತ್ತಿದ್ದಾರೆ ಕಾಫಿನಾಡಿನ ನಿರಾಶ್ರಿತರು

Date:

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ನೂರಾರು ನಿರಾಶ್ರಿತರು ಬದುಕಲು ಸೂರಿಲ್ಲದೆ, ಸ್ವಂತ ಮನೆಯಿಲ್ಲದೆ ನಾನಾ ಸಮಸ್ಯೆಗಳೊಂದಿಗೆ ಕಷ್ಟದ ಜೀವನ ದೂಡುತ್ತಿದ್ದಾರೆ. ಸರ್ಕಾರ ತಮಗೆ ನಿವೇಶನ ನೀಡಿದರೆ, ಬದುಕು ಕಟ್ಟಿಕೊಂಡು, ಜೀವನ ನಡೆಸುತ್ತೇವೆಂದು ಎದುರು ನೋಡುತ್ತಿದ್ದಾರೆ. ಜಿಲ್ಲೆಯ ಆಲ್ದೂರು ಹೋಬಳಿಯ ಬೆಳಗೊಡು ಗ್ರಾಮದಲ್ಲಿ ವಾಸಿಸುತ್ತಿರುವ ನಿರಾಶ್ರಿತರ ಬದುಕು ಅಸ್ತವ್ಯಸ್ತವಾಗಿದ್ದು, ಹೇಳತೀರಲಾಗಿದೆ.

ಗ್ರಾಮದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಸುಮಾರು 45ಕ್ಕಿಂತ ಹೆಚ್ಚು ಕುಟುಂಬಗಳು ಹಲವಾರು ದಶಕಗಳಿಂದ ವಾಸುತ್ತಿವೆ. ಆ ಕುಟುಂಬಗಳಿಗೆ ಇದೂವರೆಗೆ ಯಾವುದೇ ಮೂಲಭೂತ ಸೌಲಭ್ಯಗಳು ದೊರೆತಿಲ್ಲ. ಗ್ರಾಮದ ಸರ್ವೆ ನಂ.197ರಲ್ಲಿರುವ ಕಂದಾಯ ಭೂಮಿಯಲ್ಲಿ ತಮಗೆ ನಿವೇಶನ ನೀಡಬೇಕೆಂದು 1990ರಿಂದಲೂ ಈ ಕುಟಂಬಗಳು ಅರ್ಜಿ ಸಲ್ಲಿಸುತ್ತಿವೆ. ಆದರೆ, ಅವರ ಅಳಲಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ.

1993-94ರಲ್ಲಿ ಈ ನಿರಾಶ್ರಿತರಿಗೆ ಮನೆ, ಭೂಮಿ ಒದಗಿಸಲು 5 ಎಕ್ಕರೆ ಜಾಗವನ್ನು ಕೊಡಬೇಕೆಂದು ಅಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿತ್ತು. ಆದರೂ, ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿ ಧೋರಣೆಯಿಂದಾಗಿ ಅವರಿಗೆ ನಿವೇಶನದ ಹಕ್ಕುಪತ್ರ ದೊರೆತಿಲ್ಲ. ಕೆಲವರಿಗೆ ಮಾತ್ರ ಹಕ್ಕುಪತ್ರ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮಕ್ಕೆ ಸರಿಯಾದ ರಸ್ತೆಯೂ ಇಲ್ಲ. ಸುಮಾರು 7-8 ಕಿ.ಮೀ ದೂರದಲ್ಲಿರುವ ಪಟ್ಟಣಕ್ಕೆ ಇಲ್ಲಿನ ಮಕ್ಕಳು ಹೋಗಬೇಕು. ಅದರೆ, ರಸ್ತೆ ಸರಿಯಿಲ್ಲದ ಕಾರಣ, ಸಾರಿಗೆ ವ್ಯವಸ್ಥೆಯೂ ಇಲ್ಲ. ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯೂ ಇಲ್ಲ ಎಂದು ಗ್ರಾಮಸ್ಥರು ಹೇಳುತ್ತಾರೆ.

ಮಳೆಗಾಲದಲ್ಲಿ ಗುಡಿಸಲುಗಳು ಜಲಾವೃತವಾಗುತ್ತವೆ. ಮಣ್ಣು ಕುಸಿತದಿಂದ ಮನೆಗಳೂ ಕುಸಿದೋಗಿವೆ. ಜೀವನ ಸಾಗಿಸುವುದೇ ಕಷ್ಟಕರವಾಗಿದೆ ಎಂದು ಗ್ರಾಮದ ನಿವಾಸಿ ಸಂದೀಪ್ ಹೇಳಿದ್ದಾರೆ.

ಈದಿನ.ಕಾಮ್ ಜೊತೆ ಮಾಡಿತನಾಡಿದ ಅವರು, “ಸೌದೆ ತರಲು ಕಾಡಿಗೆ ಹೋಗಬೇಕು. ಹಳ್ಳ, ಹೊಂಡಗಳನ್ನು ದಾಟಿ ಹೋಗಬೇಕು. ತಂದ ಸೌದೆಯಲ್ಲೆ ಅಡುಗೆ ಮಾಡಿಕೊಂಡು ತಿನ್ನಬೇಕು. ನಮಗೆ ಮನೆ ಇಲ್ಲ. ಜಾಗ ಇಲ್ಲ. ಬೀದಿ ಪಾಲಾಗಿದ್ದೇವೆ. ಚುನಾವಣೆ ಇದ್ದಾಗ ಮಾತ್ರ ಜನಪ್ರತಿನಿಧಿಗಳು ಬರ್ತಾರೆ, ಆಶ್ವಾಸನೆ ಕೊಟ್ಟು ಹೋಗುತ್ತಾರೆ. ಚುನಾವಣೆ ಮುಗಿದ ಬಳಿಕ, ನಮ್ಮೆಡೆಗೆ ಯಾರೂ ತಿರುಗಿನೋಡುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸರಿಯಾದ ಬಸ್ ಸೌಲಭ್ಯವಿಲ್ಲದೆ ಗ್ರಾಮದ ವಿದ್ಯಾರ್ಥಿಗಳು ಪರೀಕ್ಷೆ ಸಮಯದಲ್ಲಿ ಸರಿಯಾದ ಸಮಯಕ್ಕೆ ಪರೀಕ್ಷೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಪರೀಕ್ಷೆ ಬರೆಯಲಾಗದೆ ನಮ್ಮ ಭವಿಷ್ಯ ಹಾಳಾಗಿದೆ. ಅದೆಷ್ಟೊ ಮಕ್ಕಳು ವಿದ್ಯಾಭ್ಯಾಸದಿಂದ ವಂಚಿತರಾಗಿದ್ದಾರೆ” ಎಂದು ಗ್ರಾಮದ ಪೂರ್ಣೆಶ್ ತಿಳಿಸಿದ್ದಾರೆ.

“ಪಟ್ಟಣಕ್ಕೆ ಹೋಗಬೇಕೆಂದರೆ ಮೂರ್ನಾಲ್ಕು ಕಿ.ಮೀ ಕಾಡಿನ ಅಂಚಿನಲ್ಲಿ ನಡೆದುಕೊಂಡು ಹೋಗಬೇಕು. ಕಾಡಾನೆ, ಹಂದಿ, ಕಾಡುಕೋಣ, ಚಿರತೆ, ಹುಲಿಗಳ ದಾಳಿಯ ಆತಂಕದಲ್ಲೇ ನಡೆದಾಡಬೇಕು. ಪುಟ್ಟ ಮಕ್ಕಳು ಜೀವ ಭಯದಲ್ಲೇ ಶಾಲೆಗೆ ಹೋಗುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

“ವಯಸ್ಸಾದ ವೃದ್ಧರು ಆಸ್ಪತ್ರೆಗೆ ಹೋಗಲು ಯಾವುದೇ ವಾಹನ ಬರುವುದಿಲ್ಲ. ರಸ್ತೆ ಸರಿಯಿಲ್ಲವೆಂದು ಗ್ರಾಮದತ್ತ ವಾಹನಗಳು ಸುಳಿಯುವುದಿಲ್ಲ. ಆಸ್ಪತ್ರೆಗೆ ಗಾಡಿ ತರಿಸಿದ್ರೆ ಎಸ್ಟೇಟ್ ಮಾಲೀಕರು ಬಿಡುತ್ತಿಲ್ಲ. ಕಳೆದ ವರ್ಷ ಗ್ರಾಮಕ್ಕೆ ವಿದ್ಯುತ್ ಸಂಪರ್ಕ ದೊರೆಯಿತು. ಆದರೆ, ವಿದ್ಯುತ್ ಸೇವೆಗೆ ಎಸ್ಟೇಟ್ ಮಾಲೀಕರು ಬಿಟ್ಟಿಲ್ಲ. ಈಗ ಕತ್ತಲಲ್ಲೇ ಬದುಕುತ್ತಿದ್ದೇವೆ. ಆದಷ್ಟು ಬೇಗ ಸರ್ಕಾರದ ಆದೇಶದಂತೆ ಜಾಗ ಮಂಜೂರು ಮಾಡಿ, ಹಕ್ಕುಪತ್ರ ಕೊಡಬೇಕು. ಮೂಲಸೌಕರ್ಯ ಒದಗಿಸಬೇಕು” ಎಂದು ಗ್ರಾಮದ ಮುದ್ದಣ್ಣ ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ: ಸಿಬಿಐ ಕೋರ್ಟ್‌ ನಿರ್ದೋಷಿ ಎಂದಿದ್ದ ಸಂತೋಷ್‌ ರಾವ್‌ಗೆ ಹೈಕೋರ್ಟ್ ನೋಟಿಸ್

“ಹಿಂದೆ ಆಶ್ರಯ ನಿವೇಶನಕ್ಕೆಂದು ಕಾಯ್ದಿರಿಸಿದ ಜಾಗವನ್ನು ಸಾವಿರಾರು ಎಕರೆ ಜಮೀನು ಹೊಂದಿರುವ ಎಸ್ಟೇಟ್ ಭೂಮಾಲೀಕ ಸ್ವರೂಪ ಅರವಿಂದ ಎಂಬವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ. ಆ ಭೂಮಿಯಲ್ಲಿ ಸಾಗುವಳಿ ಮಾಡುತ್ತಿದ್ದಾರೆ. ಆ ಭೂಮಿ ತನ್ನದೆಂದು ಹೇಳುತ್ತಿದ್ದಾರೆ. ಪ್ರಶ್ನಿಸಿದರ ವಿರುದ್ಧ ಜಾತಿ ದೌರ್ಜನ್ಯದ ಪ್ರಕರಣ ದಾಖಲಿಸಿ ಅಮಾಯಕರಿಗೆ ತೊಂದರೆ ಕೊಡುತ್ತಿದ್ದಾರೆ” ಎಂದು ದೂರಿದ್ದಾರೆ.

“ಇತ್ತೀಚಿಗೆ ನಿವೇಶನಕ್ಕಾಗಿ ಸರ್ವೆ ನಂ.491ರಲ್ಲಿ ಭೂಮಿ ಗುರುತಿಸಲಾಗಿದೆ. ಆದರೆ, ಆ ಭೂಮಿ ಮನೆ ಕಟ್ಟಲು ಯೋಗ್ಯವಾಗಿಲ್ಲ. ಹೀಗಾಗಿ, ಅದನ್ನು ರದ್ದುಗೊಳಿಸಿ, ಭೂಮಾಲೀಕರು ಒತ್ತುವರಿ ಮಾಡಿಕೊಂಡಿರುವ ಸರ್ಕಾರಿ ಜಾಗವನ್ನು ಹಿಂಪಡೆದು ಆ ಭೂಮಿಯಲ್ಲಿ ನಿವೇಶನ ಹಂಚಿಕೆ ಮಾಡಬೇಕು” ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಗಿರಿಜಾ ಎಸ್‌ ಜಿ
ಗಿರಿಜಾ ಎಸ್‌ ಜಿ
ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ, ಮಹಿಳಾ ಪರ ಹೋರಾಟಗಾರ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...