ಹಾವೇರಿ | ಬರಪರಿಹಾರ ಮತ್ತು ಬೆಳೆವಿಮೆ ಹಣ ಬಿಡುಗಡೆ ರೈತ ಸಂಘ ಒತ್ತಾಯ

Date:

ಯಡಿಯೂರಪ್ಪ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಗೋಲಿಬಾರ್‌ನಲ್ಲಿ ಮರಣ ಹೊಂದಿದ್ದ ರೈತ ಚೂರಿ ಸಿದ್ಲಿಂಗಪ್ಪ ಹಾಗೂ ಪುಟ್ಟಪ್ಪ ಹೊನ್ನತ್ತಿಯವರ ಅವರ 17ನೇ ವರ್ಷದ ಹುತಾತ್ಮ ದಿನಾಚರಣೆಯನ್ನು ರೈತಸಂಘ ಹಾವೇರಿಯಲ್ಲಿ ಆಚರಿಸಿದೆ. ರೈತರಿಗೆ ಬೆಳೆ ಪರಿಹಾರ, ಬೆಳೆ ವಿಮೆ ಹಾಗೂ ವಿವಿಧ ಹಾಕ್ಕೋತ್ತಾಯಗಳನ್ನು ಈಡೇರಿಯುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದೆ.

ಹುತಾತ್ಮ ದಿನಾಚರಣೆ ಆಚರಿಸಿ,  ಸಿದ್ದಪ್ಪ ಸರ್ಕಲ್‌ನಲ್ಲಿ ರಸ್ತೆ ತಡೆ ಚಳುವಳಿ ಹಾಗೂ ಬೃಹತ್ ಪ್ರತಿಭಟಿಸಿದ ರೈತ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಪ್ರತಿಭಟನಾಕಾರರ ಹಕ್ಕೊತ್ತಾಯಗಳು;

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

1) 2022-23 ಹಾಗೂ 2023-24 ರ ಮುಂಗಾರು ಬೆಳೆ ವಿಮಾ ವಿತರಣೆಯಲ್ಲಿ ತಾರತಮ್ಯವಾಗಿದ್ದು, 2023- 24ರಲ್ಲಿ ಭೀಕರ ಬರಗಾಲದಿಂದ ಬೆಳೆ ನಷ್ಟವಾಗಿದೆ. ಬೆಳೆ ವಿಮಾ ಮಧ್ಯಂತರ ಪರಿಹಾರ ನೀಡಲಾಗಿದ್ದು, ಇನ್ನೂ 75%ರಷ್ಟು ವಿಮಾ ಪರಿಹಾರ ವಿತರಣೆ ಬಾಕಿ ಇದೆ. ಪಾರದರ್ಶಕವಾಗಿ ಸಮೀಕ್ಷೆ ನಡೆಸದೆ ರೈತರಿಗೆ ಅನ್ಯಾಯವಾಗಿದೆ. ಸಮೀಕ್ಷೆಯನ್ನು ಮರು ಪರಿಶೀಲನೆ ಮಾಡಿ ರೈತರಿಗೆ ನ್ಯಾಯ ಒದಗಿಸಬೇಕು.

2) ಬರಗಾಲದಿಂದ ಬೆಳೆ ನಷ್ಟ ಹೊಂದಿದ ರೈತರಿಗೆ ಸಮರ್ಪಕವಾಗಿ ಬೆಳೆ ಹಾನಿ ಪರಿಹಾರ ಕೊಟ್ಟಿಲ್ಲ. ಸಮರ್ಪಕವಾಗಿ ಬೆಳೆ ಪರಿಹಾರ ಕೊಡಬೇಕು ಹಾಗೂ ರಾಜ್ಯ ಸರ್ಕಾರದ ಎಸ್, ಡಿ, ಆರ್, ಎಫ್ ಪ್ರಕಾರ ಪ್ರತಿ ಹೆಕ್ಟೇರ್ ಗೆ 8500 ರೂ ಬರ ಪರಿಹಾರ ಕೊಡಬೇಕು.

3) ಹಾವೇರಿ ಜಿಲ್ಲೆಯಲ್ಲಿ ಬಿತ್ತನೆ ಬೀಜದ ಬೆಲೆ ದುಪ್ಪಟ್ಟು ಹೆಚ್ಚಾಗಿದ್ದು ಕೃಷಿ ಇಲಾಖೆ ಬೆಲೆ ನಿಯಂತ್ರಿಸಬೇಕು. ಹಾಗೂ ರಸಗೊಬ್ಬರ ಡಿ.ಎ.ಪಿ ಯೂರಿಯಾ ಗೊಬ್ಬರ ಕೊರತೆ ಇದ್ದು ವ್ಯವಸಾಯ ಸಂಘ ಹಾಗೂ ರೈತ ಉತ್ಪಾದಕ ಕಂಪನಿಗಳಿಂದ ಕೂಡಲೇ ಗೊಬ್ಬರ ಕೊರತೆಯಾಗದಂತೆ ಪೂರೈಸಬೇಕು.

4) ಜಿಲ್ಲೆಯ ಬಹುದಿನದ ಬೇಡಿಕೆಯಾದ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಮಂಜೂರು ಮಾಡಬೇಕು. ಕಾರಣ ಸರ್ಕಾರ 5 ಲಕ್ಷ ಈವರೆಗೆ ಬಡ್ಡಿ ರೈತ ಸಾಲ ಪಡೆಯುವಲ್ಲಿ ಹಾವೇರಿ ಗದಗ ಧಾರವಾಡ ಜಿಲ್ಲೆಯ ರೈತರು ಅವಕಾಶ ವಂಚಿತರಾಗಿದ್ದು ಕೂಡಲೇ ಬ್ಯಾಂಕ್ ಮಂಜೂರು ಮಾಡಬೇಕು.

5) ಹಾವೇರಿ ಜಿಲ್ಲೆಯ ರೈತರಿಗೆ ಕೆ.ಎಂ.ಎಫ್ ಸಹಾಯಧನ ಕಳೆದ 8 ತಿಂಗಳಿನಿಂದ ರೈತರ ಖಾತೆಗೆ ಜಮಾ ಮಾಡಿಲ್ಲ ರೈತರು ಸಂಕಷ್ಟದಲ್ಲಿ ಇರುವುದರಿಂದ ಈ ಕೂಡಲೇ ಸಹಾಯಧನ ಕೊಡಬೇಕು.

6) ರೈತರ ಜೀವನಾಡಿಯಾದ ಕೆರೆಗಳಿಗೆ ಕುಮದ್ವತಿ ತುಂಗಭದ್ರ ವರದಾ ನದಿಯಿಂದ ನೀರು ತುಂಬಿಸುವ ಯೋಜನೆ ಮಂಜೂರಾಗಿದ್ದು ಕಾಮಗಾರಿ ಕುಂಟುತ್ತ ಸಾಗಿದ್ದು ತ್ವರಿತ ಗತಿಯಲ್ಲಿ ನೀರು ತುಂಬಿಸಬೇಕು.

7) ಹಾವೇರಿ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆಯಲ್ಲಿ ತಜ್ಞ ವೈದ್ಯರು ಹಾಗೂ ವೈದ್ಯರ ಕೊರತೆ ಇದ್ದು ಮುಖ್ಯವಾಗಿ ರಟ್ಟಿಹಳ್ಳಿ. ಹಿರೇಕೇರೂರು ತಾಲೂಕುಗಳಲ್ಲಿ ಹೆರಿಗೆ ತಜ್ಞರು ಎಲುಬು ಮೂಳೆ ತಜ್ಞರ ಕೊರತೆಯಿದ್ದು ಸಾರ್ವಜನಿಕರಿಗೆ ಬಹಳ ತೊಂದರೆಯಾಗಿದ್ದು ಕೂಡಲೇ ವೈದ್ಯರನ್ನು ನೇಮಕ ಮಾಡಬೇಕು.

8) ಅಕ್ರಮ ಸಕ್ರಮ ಯೋಜನೆ ಅಡಿ ರೈತರಿಂದ ಹಣ ತುಂಬಿಸಿಕೊಂಡು ನಾಲ್ಕು ವರ್ಷ ಗತಿಸಿದೆ ಸಕಾಲಕ್ಕೆ ಕಂಬ ವಯರ್. ಟಿ.ಸಿ ಕೊಡಬೇಕು ಮತ್ತು ಮಂಜೂರಾದ ಗ್ರೀಡ್ ಗಳನ್ನು ತ್ವರಿತವಾಗಿ ಕಾಮಗಾರಿ ಮುಗಿಸಿ ಲೋಕಾರ್ಪಣೆ ಮಾಡಬೇಕು.

9) ನೀರಾವರಿಗೆ ಬೇಕಾದ ಹನಿ ನೀರಾವರಿ ತುಂತುರು/ ಸ್ಪಿಂಕ್ಲರ್ ತೋಟಗಾರಿಕೆ ಹಾಗೂ ಕೃಷಿ ಇಲಾಖೆಗೆ ಪೂರೈಸುತ್ತಿದ್ದು ಎರಡರಷ್ಟು ಬೆಲೆ ಹೆಚ್ಚಾಗಿದ್ದು ಹಳೆಯ ದರದಲ್ಲಿ ಪೂರೈಸಬೇಕು.

10) ರೈತರ ಜಮೀನುಗಳಿಗೆ ಎರಡು ಸರ್ವೆ ನಂಬರ್ ಮಧ್ಯ ಜಮೀನು ವಶಪಡಿಸಿಕೊಂಡು ರಸ್ತೆ ನಿರ್ಮಾಣ ಮಾಡಬೇಕು.

11) ಬ್ಯಾಂಕುಗಳಲ್ಲಿ ಸಾಲ ಪಡೆದು ಕಟ್ ಬಾಕಿ ಹೊಂದಿದ ರೈತರಿಗೆ ಓ.ಟಿ.ಎಸ್. ನಲ್ಲಿ ಸಾಲ ಮರುಪಾವತಿ ಮಾಡಬೇಕು ಮತ್ತು ಅದೇ ಬ್ಯಾಂಕಿನಲ್ಲಿ ಕೃಷಿ ಸಾಲಕ್ಕೆ ಸಿಬಿಲ್ ಅನ್ವಯಿಸಬಾರದು.

ಪ್ರತಿಭಟನೆಯಲ್ಲಿ ಜಿಲ್ಲಾ ಅಧ್ಯಕ್ಷ ರಾಮಣ್ಣ ಕೆಚಳ್ಳೆರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ, ಮೊಹಮ್ಮದ್ ಗೌಸ್ ಪಾಟೀಲ್, ಅಡಿವೆಪ್ಪ ಆಲದಕಟ್ಟಿ, ಗಂಗಣ್ಣ ಎಲಿ, ಮಾಲತೇಶ ಪೂಜಾರ, ಶಿವಯೋಗಿ ಹೊಸಗೌಡ್ರ, ಎಚ್.ಎಚ್ ಮುಲ್ಲಾ, ಶಿವಬಸಪ್ಪ ಗೋವಿ, ಮಂಜುನಾಥ ಕದಂ, ಮರಿಗೌಡ್ರ ಪಾಟೀಲ್,  ರುದ್ರಗೌಡ ಕಾಡನಗೌಡ್ರ, ಪ್ರಭುಗೌಡ ಪ್ಯಾಟಿ, ದಿಳ್ಳೆಪ್ಪ ಮಣ್ಣೂರ, ಮುತ್ತಪ್ಪ ಗುಡಗೇರಿ, ಸುರೇಶ್ ಹೊನ್ನಪ್ಪನವರ, ಸುರೇಶ್ ಚಲವಾದಿ, ಮಾಲತೇಶ ಪರಪ್ಪನವರ, ಬಸನಗೌಡ ಗಂಗಪ್ಪನವರ, ಚನ್ನಪ್ಪ ಮರಡೂರ ರಾಜು ತರ್ಲಗಟ್ಟ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...