ಮಂಗಳೂರು | ಫಲ್ಗುಣಿ ನದಿಗೆ ತ್ಯಾಜ್ಯ; ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ಲೋಕಾಯುಕ್ತ

Date:

ಮಂಗಳೂರು ನಗರದ ಹೊರವಲಯದ ಫಲ್ಗುಣಿ ನದಿಗೆ ಕೈಗಾರಿಕಾ ತ್ಯಾಜ್ಯ ಬಿಡುಗಡೆಯಾಗುವುದನ್ನು ತಡೆಯಲು ವಿಫಲವಾದ ಮಂಗಳೂರು ಮಹಾನಗರಪಾಲಿಕೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ಕರ್ನಾಟಕ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

ಜೂನ್ 4ರಂದು ಸುದ್ದು ಮಾಧ್ಯಮಗಳಲ್ಲಿ ಪ್ರಕಟಗೊಂಡ ವರದಿಗಳನ್ನು ಆಧಾರಿಸಿ ಲೋಕಾಯುಕ್ತ ಕಾಯಿದೆಯ ಸೆಕ್ಷನ್ 7(2) ಮತ್ತು 9(3-ಎ) ಅಡಿಯಲ್ಲಿ ಪ್ರಕರಣ ಕೈಗೆತ್ತಿಕೊಂಡಿರುವ ಉಪ ಲೋಕಾಯುಕ್ತ ಕೆ ಎನ್ ಫಣೀಂದ್ರ ಅವರು, ಮುಂದಿನ 15 ದಿನಗಳೊಳಗೆ ವರದಿ ಸಲ್ಲಿಸುವಂತೆ ಪಾಲಿಕೆ ಉಪಾಯುಕ್ತ (ಆಡಳಿತ), ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಹಾಗೂ ಕೆಐಎಡಿಬಿ ಕಾರ್ಯಕಾರಿ ಅಭಿಯಂತರರಿಗೆ ಸೂಚನೆ ನೀಡಿದ್ದಾರೆ.

ಆದೇಶ ದೊರೆತ 15 ದಿನಗಳ ಒಳಗೆ ವಿವರವಾದ ವರದಿ ಸಲ್ಲಿಸುವಂತೆಯೂ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಉಪ ಲೋಕಾಯುಕ್ತರು ಸೂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಮಂಗಳೂರು - ಪತಂಜಲಿ
ಬಾಬಾ ರಾಮ್ ದೇವ್ ಮಾಲೀಕತ್ವದ ಪತಂಜಲಿ ಫುಡ್ಸ್ (ರುಚಿ ಸೋಯಾ) ಫಲ್ಗುಣಿ ನದಿಗೆ ಕೈಗಾರಿಕಾ ತ್ಯಾಜ್ಯ ಹರಿಸುವ ಕೊಳವೆ ಪತ್ತೆಯಾದ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಹೋರಾಟಗಾರರು ಭೇಟಿ ನೀಡಿ ಪ್ರತಿಭಟನೆ ನಡೆಸಿದ್ದರು.

ಒಳಚರಂಡಿಗಳ ಮೂಲಕ ನದಿಗೆ ತ್ಯಾಜ್ಯ ಬಿಡುಗಡೆಯಾಗುತ್ತಿರುವುದು ಜಲಚರಗಳಿಗೆ ಮಾತ್ರವಲ್ಲ ಆ ನೀರನ್ನು ಬಳಸುವ ಮನುಷ್ಯರಿಗೆ, ಪ್ರಾಣಿಗಳಿಗೂ ಹಾನಿಕರವಾಗಿದೆ ಎಂದು ಸುದ್ದಿ ಮಾಧ್ಯಮ ವರದಿಗಳನ್ನು ಉಪಲೋಕಾಯುಕ್ತರು ಉಲ್ಲೇಖಿಸಿದ್ದಾರೆ.

ಪಣಂಬೂರು ಮತ್ತು ಬೈಕಂಪಾಡಿ ಪರಿಸರದಲ್ಲಿ ಕಾರ್ಯಾಚರಣೆ ನಡೆಸುವ ಹಲವು ಕೈಗಾರಿಕೆಗಳು ತ್ಯಾಜ್ಯ ಸಂಸ್ಕರಣೆ ನಡೆಸದೆ ನೇರವಾಗಿ ನದಿಗೆ ಬಿಡುಗಡೆಗೊಳಿಸುತ್ತಿವೆ. ಇದರಿಂದಾಗಿ ಸುತ್ತಮುತ್ತಲಿನ ಹಲವು ಬಾವಿ ನೀರು ಕಲುಷಿತಗೊಂಡಿದೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ಕೊಂಬಿಗೆ ಬಲೆ ಸಿಲುಕಿಕೊಂಡು ಜಿಂಕೆ ನರಳಾಟ

ಮಂಗಳೂರಿನ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಬಾಬಾ ರಾಮ್ ದೇವ್ ಮಾಲೀಕತ್ವದ ಪತಂಜಲಿ ಫುಡ್ಸ್ (ರುಚಿ ಸೋಯಾ) ತುಳುನಾಡಿನ ಜೀವನದಿ ಫಲ್ಗುಣಿಗೆ ಮಾರಕ ಕೈಗಾರಿಕಾ ತ್ಯಾಜ್ಯ ಹರಿಸುವ ಕೊಳವೆಗಳು ಪತ್ತೆಯಾದ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ರೈತ, ದಲಿತ, ಕಾರ್ಮಿಕ, ಜನಪರ ಸಂಘಟನೆಗಳು ಹಾಗೂ ಎಡಪಕ್ಷಗಳ ಜಂಟಿ ನಿಯೋಗ ಬುಧವಾರ ಭೇಟಿ ನೀಡಿ ಆಗಿರುವ ಹಾನಿ ವೀಕ್ಷಿಸಿ. ಕಾನೂನು ಕ್ರಮಕ್ಕೆ ಆಗ್ರಹಿಸಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...