ಗದಗ ವಿವಿಗೆ ಮಹಾತ್ಮಾ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಮರು ನಾಮಕರಣ

Date:

ಮಹಾತ್ಮಾಗಾಂಧೀಜಿಯವರ ಗ್ರಾಮೀಣಾಭಿವೃದ್ಧಿ ಹಾಗೂ ಗ್ರಾಮ ಸ್ವರಾಜ್ಯದ ಪರಿಕಲ್ಪನೆಯನ್ನು ಸಾಕಾರಗೊಳಿಸಲು ರಾಜ್ಯದ ಗದಗ ನಗರದಲ್ಲಿ ಸ್ಥಾಪನೆಯಾಗಿರುವ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯಕ್ಕೆ ‘ಮಹಾತ್ಮಾ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ’ ಎಂದು ಬೆಳಗಾವಿಯಲ್ಲಿ ಇಂದು ಮರು ನಾಮಕರಣ ಮಾಡಲಾಯಿತು.

ಮಹಾತ್ಮ ಗಾಂಧೀಜಿಯವರು ಬೆಳಗಾವಿಯಲ್ಲಿ 1924ರಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದ ಮಹೋನ್ನತ ಸಂದರ್ಭದ ಶತಮಾನೋತ್ಸವ ಐತಿಹಾಸಿಕ ಕಾರ್ಯಕ್ರಮದಲ್ಲಿ ‘ಮಹಾತ್ಮಾ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ’ ಮರು ನಾಮಕರಣ ಮಾಡಲಾಯಿತು.

ಡಾ. ಹೆಚ್. ಕೆ.ಪಾಟೀಲ ಅವರ ಪರಿಕಲ್ಪನೆಯಂತೆ ಗದಗದಲ್ಲಿ ನಾಗಾವಿ ಬಳಿ 353 ಎಕರೆ ವಿಸ್ತಿರಣದಲ್ಲಿ ಕಪ್ಪತಗುಡ್ಡ ತಪ್ಪಲಿನ ನಿಸರ್ಗದಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಅಧಿನಿಯ 2016 ರಡಿಯಲ್ಲಿ ಸ್ಥಾಪಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಶ್ವವಿದ್ಯಾಲಯವು ಭಾರತದ ಶ್ರೇಷ್ಠ ಸಮಾಜ ಸುಧಾರಕರು, ದೇಶ ಭಕ್ತರು, ತತ್ವಜ್ಞಾನಿಗಳು ಹಾಗೂ ಚಿಂತಕರುಗಳಾದ ಮಹಾತ್ಮಾ ಗಾಂಧಿಜೀ ರವರ ಮೂಲಭೂತ ತತ್ವಗಳ ಮೇಲೆ ತನ್ನ ಚಟುವಟಿಕೆಗಳನ್ನು ನಡೆಸುತ್ತಿದೆ. ವಿಶ್ವವಿದ್ಯಾಲಯದ ಆವರಣದಲ್ಲಿರುವ ಸಬರಮತಿ ಆಶ್ರಮವು ಒಂದು ಪ್ರೇರಣಾ ಕೇಂದ್ರವಾಗಿದ್ದು, ಇಲ್ಲಿ ಗಾಂಧಿಜೀಯವರ ಚಿಂತನೆ ಮತ್ತು ಕೃತಿಗಳ ಕುರಿತು ಅಧ್ಯಯನ ಹಾಗೂ ಸತ್ಸಂಗ ಕಾರ್ಯಕ್ರಮಗಳು ನಿರಂತರವಾಗಿ ಜರಗುತ್ತಿವೆ. ವಿಶ್ವವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದರ ಭವ್ಯವಾದ ಪುತ್ಥಳಿಯನ್ನು ಸ್ವಾಪಿಸಲಾಗಿದೆ.

ವಿಶ್ವವಿದ್ಯಾಲಯದಿಂದ ಪ್ರತಿ ತಿಂಗಳು ಗ್ರಾಮೀಣಾಭಿವೃದ್ಧಿ ವಿಷಯಗಳನ್ನೊಳಗೊಂಡು ಶೈಕ್ಷಣಿಕ, ಸಂಶೋಧನೆ, ತರಬೇತಿ, ಸಮ್ಮೇಳನ, ಕೃಷಿ, ಪಶುಸಂಗೋಪನೆ, ತೋಟಗಾರಿಕೆ, ಆರೋಗ್ಯ ಇತರೆ ವಿಷಯಗಳ ಹಲವಾರು ಜನೋಪಯೋಗಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ವಿಶ್ವವಿದ್ಯಾಲಯದಿಂದ ಪದವಿ ಪಡೆದ ಅನೇಕರು ಗ್ರಾಮೀಣ ಅಭಿವೃದ್ಧಿ ಹಾಗೂ ಇತರೆ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ” ಎಂದು ವಿಶ್ವವಿದ್ಯಾಲಯದ ಕುಲಪತಿಗಳು (ಪ್ರಬಾರ) ಹಾಗೂ ಕುಲಸಚಿವ ಪ್ರೊ. ಡಾ. ಸುರೇಶ ವಿ. ನಾಡಗೌಡರ ತಿಳಿಸಿದ್ದಾರೆ.

”ಈ ವಿಶ್ವವಿದ್ಯಾಲಯದಿಂದ ಹೊರ ಬರುವ ಪದವೀಧರರು ಮಹಾತ್ಮ ಗಾಂಧೀಜಿಯವರ ಆಶಯದಂತೆ ಗ್ರಾಮೀಣ ಪರಿಸರದಲ್ಲಿ ಈ ನಾಡನ್ನು ನಿರ್ಮಾಣ ಮಾಡುವ ಹೊಸ ಆಶಯಗಳನ್ನು ಹೊಂದಿರುತ್ತಾರೆ. ಗಾಂಧಿ ಅವರ ತತ್ತ್ವ ಆದರ್ಶಗಳನ್ನು ಇಂದಿನ ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ವಿಶ್ವವಿದ್ಯಾಲಯ ಮಾಡುತ್ತಿದೆ” ಎಂದು ಗ್ರಾಮಿಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಏಟಿಎಂ ಕಾರ್ಡ್ ಬದಲಿಸಿ ಹಣ ಲೂಟಿ ಮಾಡುತ್ತಿದ್ದ ಆರೋಪಿ ಪೊಲೀಸರಿಂದ ಬಂಧನ

ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯರಾದ ಮಲ್ಲಿಕಾರ್ಜುನ ಖರ್ಗೆ, ಲೋಕಸಭಾ ಸದಸ್ಯರಾದ ಪ್ರಿಯಾಂಕಾ ಗಾಂಧಿ ವಾರ್ಧಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...