ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿರುವ ಅನುಗ್ರಹ ಮಹಿಳಾ ಕಾಲೇಜಿನಲ್ಲಿ 77ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಅನುಗ್ರಹ ಮಹಿಳಾ ಕಾಲೇಜಿನ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಅಬ್ದುಲ್ಲಾ ಚೆಂಡಾಡಿಯವರು ಧ್ವಜಾರೋಹಣ ನೆರವೇರಿಸಿದರು.
ಗಣಿತಶಾಸ್ತ್ರ ಉಪನ್ಯಾಸಕಿ ಕುಮಾರಿ ನಿಮಿಷ ಗಣರಾಜ್ಯ ದಿನದ ಮಹತ್ವ ಮತ್ತು ಸಂವಿಧಾನದ ಬಗ್ಗೆ ವಿವರಣೆ ನೀಡಿದರು. ಅನುಗ್ರಹ ಮಹಿಳಾ ಕಾಲೇಜಿನ ಸಂಚಾಲಕರಾದ ಶ್ರೀಯುತ ಅಮಾನುಲ್ಲಾ ಖಾನ್ ಗಣರಾಜ್ಯ ದಿನಾಚರಣೆಯ ವಿಶೇಷತೆಯ ಕುರಿತು ಮಾತನಾಡುತ್ತಾ, ಗಣರಾಜ್ಯ ದಿನಾಚರಣೆಯನ್ನು ಆಚರಿಸುವುದು ಮಾತ್ರವಲ್ಲ ಯುವ ಜನರು ಅದರ ಉದ್ದೇಶ ಮತ್ತು ಮಹತ್ವವನ್ನು ತಿಳಿದಿರಬೇಕು . ನಾವೆಲ್ಲರೂ ಜಾತಿ ಮತ ಭೇದ ಭಾವವನ್ನು ಬಿಟ್ಟು ಸಂವಿಧಾನವನ್ನು ಗೌರವಿಸಬೇಕು ಎಂದು ತಿಳಿ ಹೇಳಿದರು.
ಕಾರ್ಯಕ್ರಮದಲ್ಲಿ ಅನುಗ್ರಹ ಆಡಳಿತ ಮಂಡಳಿಯ ಮಹಾ ಕಾರ್ಯದರ್ಶಿ ಶ್ರೀಯುತ ಇಮಾರತ್ ಅಲಿ, ಜೊತೆ ಕಾರ್ಯದರ್ಶಿ ಅಬ್ದುಲ್ಲ ಕುಂಞಿ, ಆಡಳಿತ ಮಂಡಳಿಯ ಸದಸ್ಯರಾದ ಆದಮ್ ಇಸ್ಮಾಯಿಲ್ ಮತ್ತು ಎನ್. ಕೆ ಇದ್ದಿನಬ್ಬ ನಂದಾವರ, ಪ್ರಾಂಶುಪಾಲೆ ಡಾ ಹೇಮಲತ ಬಿ.ಡಿ, ಅನುಗ್ರಹ ಸಲಹಾ ಸಮಿತಿಯ ಕಾರ್ಯದರ್ಶಿ ಶ್ರೀಮತಿ ತಾರಾಕ್ಷಿ, ಪದವಿ ಪೂರ್ವವಿಭಾಗದ ಸಂಯೋಜಕಿ ಶ್ರೀಮತಿ ಮಮಿತಾ ಎಸ್ ರೈ, ಪದವಿ ವಿಭಾಗದ ಸಂಯೋಜಕಿ ಶ್ರೀಮತಿ ಅಬಿದಾ .ಬಿ, ಉಪನ್ಯಾಸಕಿಯರಾದ ಸಲೀಮಾ, ನವ್ಯ ಸೇರಿದಂತೆ ಬೋಧಕ ಬೋಧಕೇತರ ವೃಂದದವರು ಉಪಸ್ಥಿತರಿದ್ದರು.
ಮೌಲ್ಯ ಶಿಕ್ಷಣ ವಿಭಾಗದ ಉಪನ್ಯಾಸಕಿ ಆಯಿಷ ಸಮೀಹ ಕಿರಾಅತ್ ಪಠಿಸಿದರು. ಆಂಗ್ಲ ಭಾಷಾ ವಿಭಾಗದ ಉಪನ್ಯಾಸಕಿ ಕುಮಾರಿ ಫರ್ ಹತ್ ಸುರಯ್ಯ ಸ್ವಾಗತಿಸಿ ,ವಂದಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.






