ಬೀದರ್‌ | ಲಿಂಗಾಯತ ಸ್ವತಂತ್ರ ಧರ್ಮ: ಕೇಂದ್ರಕ್ಕೆ ಪುನಃ ಶಿಫಾರಸು ಮಾಡಲು ಸಿಎಂಗೆ ಆಗ್ರಹ

Date:

ಲಿಂಗಾಯತಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ಹಾಗೂ ಲಿಂಗಾಯತ ಸಮುದಾಯದ ಎಲ್ಲ 102 ಒಳಪಂಡಗಳಿಗೆ (ವೀರಶೈವ ಸೇರಿ) ಧಾರ್ಮಿಕ ಅಲ್ಪಸಂಖ್ಯಾತರ ಸ್ಥಾನಮಾನ ನೀಡುವಂತೆ ರಾಜ್ಯ ಸರ್ಕಾರ ಪುನಃ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ಲಿಂಗಾಯತ ಸಂಘಟನೆಗಳ ಪ್ರಮುಖರು ಒತ್ತಾಯಿಸಿದ್ದಾರೆ.

ಬೀದರ್‌ನಲ್ಲಿ ಬೆಂಗಳೂರಿನ ಕುಂಬಳಗೂಡು ಚನ್ನಬಸವೇಶ್ವರ ಜ್ಞಾನಪೀಠದ ಪೀಠಾಧ್ಯಕ್ಷರಾದ ಜಗದ್ಗುರು ಚನ್ನಬಸವಾನಂದ ಸ್ವಾಮೀಜಿ ನೇತ್ರತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದರು.

ʼ12ನೇ ಶತಮಾನದಲ್ಲಿ ವಿಶ್ವಗುರು ಬಸವಣ್ಣನವರು ಸ್ಥಾಪಿಸಿರುವ ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಸಾಂವಿಧಾನಿಕ ಮಾನ್ಯತೆ ಹಾಗೂ ಲಿಂಗಾಯತ ಸಮುದಾಯಕ್ಕೆ ಧಾರ್ಮಿಕ ಅಲ್ಪಸಂಖ್ಯಾತರ ಸ್ಥಾನಮಾನ ನೀಡಬೇಕೆಂದು ಒತ್ತಾಯಿಸಿ ಕಳೆದ 3 ದಶಕಗಳಿಂದ ಲಿಂಗಾಯತ ಸಂಘಟನೆಗಳು ಹೋರಾಟ ನಡೆಸುತ್ತಿದೆ. ಆದರೆ ಕೇಂದ್ರ ಸರ್ಕಾರ ಲಿಂಗಾಯತ ಧರ್ಮವನ್ನು ಸ್ವತಂತ್ರ ಧರ್ಮವನ್ನಾಗಿ ಘೋಷಣೆಗೆ ಮುಂದಾಗುತ್ತಿಲ್ಲʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼ2017ರಲ್ಲಿ ಲಿಂಗಾಯತರ ಹೋರಾಟಕ್ಕೆ ಮಣಿದು ನೀವೇ (ಸಿದ್ದರಾಮಯ್ಯನವರು) ನಿವೃತ್ತ ನ್ಯಾಯಮೂರ್ತಿ ಡಾ. ನಾಗಮೋಹನದಾಸ ನೇತೃತ್ವದಲ್ಲಿ 7 ಜನ ತಜ್ಞರ ನಿಯೋಗ ರಚಿಸಿದ್ದೀರಿ. ಅದೇ ವರದಿ ಆಧರಿಸಿ ಲಿಂಗಾಯತ ಧರ್ಮ ಸ್ವತಂತ್ರ ಧರ್ಮ ಮತ್ತು ಲಿಂಗಾಯತ ಸಮುದಾಯಕ್ಕೆ ಧಾರ್ಮಿಕ ಅಲ್ಪಸಂಖ್ಯಾತರ ಸೌಲಭ್ಯ ನೀಡಬೇಕೆಂದು ಕೇಂದ್ರಕ್ಕೆ ಶಿಫಾರಸು ಮಾಡಿದ್ದೀರಿ. ಆದರೆ ತಾವು ಕಳುಹಿಸಿದ ಶಿಫಾರಸು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅದನ್ನು ವಾಪಸ್‌ ಕಳಿಹಿಸಿತುʼ ಎಂದರು.

ಈ ಹಿನ್ನಲೆಯಲ್ಲಿ ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಗೆ ಸಿದ್ದಪಿಡಿಸಿದ ಪ್ರಸ್ತಾವನೆಯನ್ನು ಮರು ಪರಿಶೀಲಿಸಿ, ಸೂಕ್ತ ಆಧಾರ ಹಾಗೂ ತಿದ್ದುಪಡಿಗಳೊಂದಿಗೆ ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕುʼ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರದ ಮೂಲಕ ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ವಿದ್ಯುತ್‌ ಸ್ಪರ್ಶ: ಸ್ಥಳದಲ್ಲೇ ವ್ಯಕ್ತಿ ಸಾವು

ಈ ಸಂದರ್ಭದಲ್ಲಿ ವಿಶ್ವಕ್ರಾಂತಿ ದಿವ್ಯಪೀಠದ ಅಧ್ಯಕ್ಷ ಓಂಪ್ರಕಾಶ ರೊಟ್ಟೆ ಹಾಗೂ ಪ್ರಮುಖರಾದ ಶಿವರಾಜ ಪಾಟೀಲ್‌ ಅತಿವಾಳ, ಸತ್ಯದೇವಿ ಮಾತಾಜಿ, ಡಾ.ಮಹೇಶ ಬಿರಾದರ್‌, ರಮೇಶ ಬಿರಾದರ್‌, ರವಿಕಾಂತ್‌ ಬಿರಾದರ್‌, ಬಿ.ವಿ.ಜಗದೀಶ್ವರ, ಶಿವಶರಣಪ್ಪಾ ಪಾಟೀಲ್ ಸೇರಿದಂತೆ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...