ಸೌಜನ್ಯ ಪರ ಹೋರಾಟಗಾರರ ಮೇಲೆ ಸುಳ್ಳು ಪ್ರಕರಣ ಆರೋಪ: ಕುಸುಮಾವತಿ ನೇತೃತ್ವದಲ್ಲಿ ತಹಶೀಲ್ದಾರ್‌ಗೆ ಮನವಿ

Date:

ಸೌಜನ್ಯ ಪರ ಹೋರಾಟಗಾರರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಿರುವುದನ್ನು ವಿರೋಧಿಸಿ ತಹಶೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲು ಹೋದ ಹಿಂದೂ ಜಾಗರಣ ವೇದಿಕೆಯ(ಹಿಂಜಾವೇ) ಕಾರ್ಯಕರ್ತರು, ಸೌಜನ್ಯ ಪರ ಹೋರಾಟಗಾರರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದೆ. ಪೊಲೀಸರು ಧರಣಿ ಕುಳಿತ ಕೆಲವು ಯುವಕರನ್ನು ವಶಕ್ಕೆ ಪಡೆಯಲಾಗಿದೆ.

ಇದಾದ ಬಳಿಕ ಬಳಿಕ ಸೌಜನ್ಯ ಪರ ಹೋರಾಟಗಾರ್ತಿ ಪ್ರಸನ್ನ ರವಿ ಹಾಗೂ ಸೌಜನ್ಯ ಅವರ ತಾಯಿ ಕುಸುಮಾವತಿ ನೇತೃತ್ವದಲ್ಲಿ ತಹಶೀಲ್ದಾರ್‌ಗೆ ಮನವಿ ನೀಡಲು ಹೋದ ತಂಡವನ್ನು ಪೊಲೀಸರು ತಡೆದು ಅವಕಾಶ ನೀಡಲ್ಲ ಎಂದಿದ್ದಾರೆ. ಈ ವೇಳೆ ತಾಲೂಕು ಕಚೇರಿ ಎದುರೇ ಧರಣಿ ಕೂರಲಾಗಿದ್ದು, ಬಳಿಕ ಪೊಲೀಸರು ಮೂವರಿಗೆ ಮಾತ್ರ ಮನವಿ ನೀಡಲು ಅವಕಾಶ ನೀಡಿದ್ದಾರೆ. ಬಳಿಕ ತಾಲೂಕು ಕಚೇರಿಯ ಟಪಾಲು ವಿಭಾಗದಲ್ಲಿ ಪ್ರಸನ್ನ ರವಿ, ಕುಸುಮಾವತಿ ಹಾಗೂ ಮೋಹನ್ ಶೆಟ್ಟಿ ತೆರಳಿ ಮನವಿ ಸಲ್ಲಿಸಿದರು.

ಇದನ್ನು ಓದಿದ್ದೀರಾ? ಚಿಕ್ಕಮಗಳೂರು l ಸೌಜನ್ಯ ಪರ ಹೋರಾಟ: ಪ್ರತಿಭಟನೆಗೆ ನಿರಾಕರಿಸಿದ ಪೊಲೀಸ್ ಇಲಾಖೆ SDPI ಆರೋಪ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮನವಿ ನೀಡಲು ಬಂದವರನ್ನು ಪೊಲೀಸರು ತಡೆದ ಬೆನ್ನಲ್ಲಿಯೇ ನೂರಾರು ಸಂಖ್ಯೆಯಲ್ಲಿ ಜನರು ಬೆಳ್ತಂಗಡಿ ತಾಲೂಕು ಕಚೇರಿಯ ಎದುರು ಜಮಾವಣೆಗೊಂಡಿದ್ದರು. ಬಳಿಕ ಪೊಲೀಸರು ಎಲ್ಲರಿಗೂ ಸ್ಥಳದಿಂದ ತೆರಳುವಂತೆ, ಇಲ್ಲವಾದಲ್ಲಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಇದಾದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಪ್ರಸನ್ನ ರವಿ, “ಉದ್ದೇಶಪೂರ್ವಕವಾಗಿ ಮನವಿ ನೀಡಲು ನಿರಾಕರಿಸಲಾಗಿದೆ. ಈ ಮೂಲಕ ಮೂಲಭೂತ ಹಕ್ಕು ಕಸಿದುಕೊಳ್ಳುವ ಯತ್ನ ಮಾಡಲಾಗಿದೆ. ನಾವು ಪ್ರತಿಭಟಿಸಿಲ್ಲ, ಗಲಾಟೆ ಮಾಡಿಲ್ಲ. ಮನವಿ ನೀಡಲು ಬಂದವರನ್ನು ತಡೆದಿದ್ದಾರೆ. ಬೆಳ್ತಂಗಡಿಯಲ್ಲಿ ಮಾತ್ರ ಹೊಸ ಕಾನೂನು ಇದೆಯೇ” ಎಂದು ಪ್ರಶ್ನಿಸಿದರು.

ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಅನಿಲ್ ಕುಮಾರ್ ಅಂತರ, ಪ್ರಜ್ವಲ್ ಗೌಡ ಕೆವಿ, ಪ್ರದೀಪ್, ರವೀಂದ್ರ ಶೆಟ್ಟಿ, ಶ್ರೀನಿವಾಸ, ಉದಯ ಕೊಯ್ಯೂರು ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಬಳಿಕ ಬಿಡುಗಡೆ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...