ಬೀದರ್‌ | ಉನ್ನತ ಶಿಕ್ಷಣದಲ್ಲಿ ಸಂಶೋಧನಾತ್ಮಕ ಅಧ್ಯಯನ ಹೆಚ್ಚು ಅಗತ್ಯ : ಪರಮೇಶ್ವರ ನಾಯಕ

Date:

ಕಾಲೇಜು ಶಿಕ್ಷಣದಲ್ಲಿ ಸಂಶೋಧನಾತ್ಮಕ, ಸೃಜನಾತ್ಮಕ ಅಧ್ಯಯನಗಳಿಗೆ ಹೆಚ್ಚು ಮಹತ್ವವಿರಲಿ. ಸಂಶೋಧನಾತ್ಮಕ ಅಧ್ಯಯನಗಳಿಂದ ಸಮಾಜದ ಮತ್ತು ದೇಶದ ಪ್ರಗತಿ ಸಾಧ್ಯ ಎಂದು ಬೀದರ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ. ಪರಮೇಶ್ವರ ನಾಯಕ ಹೇಳಿದರು.

ಬಸವಕಲ್ಯಾಣ ನಗರದ ಶ್ರೀ ಬಸವೇಶ್ವರ ದೇವಸ್ಥಾನ ಶಿಕ್ಷಣ ಸಂಸ್ಥೆಯ ಶ್ರೀ ಬಸವೇಶ್ವರ ಪದವಿ ಮತ್ತು ಸ್ನಾತಕೋತ್ತರ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ʼಉನ್ನತ ಶಿಕ್ಷಣದ ಸವಾಲು ಮತ್ತು ಸಾಧ್ಯತೆಗಳುʼ ಕುರಿತ ಉಪನ್ಯಾಸ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

“ಉನ್ನತ ಶಿಕ್ಷಣ ಎಲ್ಲರಿಗೂ ದಕ್ಕಲೆಂದು ಸರ್ಕಾರ ಹಲವು ವಿಶ್ವವಿದ್ಯಾಲಯಗಳು ಸ್ಥಾಪಿಸಿದೆ. ಸಕಾರಾತ್ಮಕ ಮನೋಭಾವದಿಂದ ಮನುಷ್ಯನಲ್ಲಿ ವಿಕಾಸವಾಗುತ್ತದೆ. ಧನಾತ್ಮಕ ಚಿಂತನೆಗಳಿದ್ದರೆ ಎಲ್ಲ ಸವಾಲುಗಳು ಮೆಟ್ಟಿ ನಿಲ್ಲಬಹುದು. ಉನ್ನತ ಶಿಕ್ಷಣದಲ್ಲಿ ಪಠ್ಯಕ್ರಮದ ಬೋಧನೆ, ವಿಮರ್ಶಾ ಮತ್ತು ಸಂಶೋಧನಾ ಕೇಂದ್ರಿತವಾಗಿರಲಿ. ಗುಣಮಟ್ಟದ ಬೋಧನೆ, ಪಾರದರ್ಶಕ ಪರೀಕ್ಷೆಗಳು. ಹೊಸ ದೃಷ್ಟಿ ಧೋರಣೆಯಿರುವ ಪಠ್ಯಕ್ರಮಗಳಿಂದ ವಿದ್ಯಾರ್ಥಿಗಳ ಬೆಳವಣಿಗೆ ಸಾಧ್ಯ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಸ್ಥೆಯ ಆಡಳಿತಾಧಿಕಾರಿ ಡಾ. ಮಲ್ಲಿಕಾರ್ಜುನ ಲಕಶೆಟ್ಟಿ ಮಾತನಾಡಿ, “ವಿದ್ಯಾರ್ಥಿಗಳ ಸರ್ವೊತೋಮುಖ ಬೆಳವಣಿಗೆಗೆ ಉನ್ನತ ಶಿಕ್ಷಣ ಬಹುದೊಡ್ಡ ದಾರಿಯಾಗಿದೆ. ವಿಜ್ಞಾನ-ತಂತ್ರಜ್ಞಾನ, ಕಲೆ ಮತ್ತು ವಾಣಿಜ್ಯ ವಿಭಾಗಗಳಲ್ಲಿ ಹೊಸ ಚಿಂತನೆ ಮೂಡಿಸಲು ವಿಚಾರ ಸಂಕೀರಣ ಮತ್ತು ಕಮ್ಮಟಗಳು ನಡೆಸಲು ನಮ್ಮ ಆಡಳಿತ ಮಂಡಳಿ ಚಿಂತನೆ ನಡೆಸಿದೆ. ಉನ್ನತ ಶಿಕ್ಷಣದ ಬೆಳವಣಿಗೆಗೆ ನಮ್ಮ ಸಂಸ್ಥೆ ಮತ್ತು ಆಡಳಿತ ಮಂಡಳಿ ನಿರಂತರವಾಗಿ ಶ್ರಮಿಸುತ್ತಿದೆ. ಬೀದರ ವಿಶ್ವವಿದ್ಯಾಲಯದ ನೆರವು ಮತ್ತು ಸಹಕಾರ ನೀಡಬೇಕಿದೆ” ಎಂದರು.

ಬಸವವೇಶ್ವರ ಪದವಿ ಕಾಲೇಜು ಪ್ರಾಚಾರ್ಯ ಡಾ.ಭೀಮಾಶಂಕರ ಬಿರಾದಾರ ಮಾತನಾಡಿ, “ಉದಾರಿಕರಣದ ಪ್ರಭಾವದಿಂದ ಶಿಕ್ಷಣ ವಲಯ ಖಾಸಗಿಕರಣಗೊಂಡಿದೆ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುವ ಗುಣಮಟ್ಟದ ಸಂಶೋಧನೆಗಳಿಂದ ದೇಶದ ಆರ್ಥಿಕ, ವಾಣಿಜ್ಯ ಉದ್ಯಮ, ಕೃಷಿ, ವಿಜ್ಞಾನ, ವೈದ್ಯಲೋಕದಲ್ಲಿ ಹಲವು ಬದಲಾವಣೆ ಮತ್ತು ಬೆಳವಣಿಗೆಗಳು ಕಂಡಿವೆ. ಜ್ಞಾನ ಸೃಷ್ಠಿಸಿ ವಿದ್ಯಾರ್ಥಿಗಳ ಬೌದ್ಧಿಕ ಬೆಳವಣಿಗೆ ಬಯಸುವ ಕ್ರಿಯಾಶೀಲ ಅಧ್ಯಾಪಕರಿಂದ ಉನ್ನತ ಶಿಕ್ಷಣಕ್ಕೆ ಹೊಸ ದಿಕ್ಕು ದೊರೆತಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಕಲ್ಯಾಣ ಕರ್ನಾಟಕದ 1,008 ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ

ಕಾರ್ಯಕ್ರಮದಲ್ಲಿ ಶ್ರೀನಿವಾಸ ಉಮಾಪುರೆ, ಅಶೋಕರೆಡ್ಡಿ ಗದಲೆಗಾಂವ, ಗುರುದೇವಿ ಕಿಚಡೆ, ನೀಲಮ್ಮ ಮೇತ್ರೆ, ಸಚಿನ ಬಿಡವೆ, ಪವನ ಪಾಟೀಲ, ಗಂಗಾಧರ ಸಾಲಿಮಠ, ರೋಶನ ಬಿ, ಸೌಮ್ಯಾ ಕರಿಗೌಡ, ಚನ್ನಬಸಪ್ಪ ಗೌರ, ಸಂಗೀತಾ ಮಹಾಗಾಂವೆ, ಜಗದೇವಿ ಜವಳಗೆ, ಪ್ರವೀಣ ಬಿರಾದಾರ, ಪ್ರಶಾಂತ ಬುಡಗೆ, ಗಣೇಶ ಮೇತ್ರೆ, ಎಂ.ಡಿ. ಜಬಿ, ಭಾಗ್ಯಶ್ರೀ ಶೀಲವಂತ, ಖದಿಜಾ ತಬಸ್ಸುಮ್, ಸುಧೀರ ಗೋದೆ, ಪ್ರಭಾಕರ ನವಗಿರೆ, ಶಶಿಧರ ಪಾಟೀಲ, ಬಸವರಾಜ ಗುಂಗೆ ಮುಂತಾದವರಿದ್ದರು. ಬಸವೇಶ್ವರ ಪಿಜಿ ಕಾಲೇಜು ಪ್ರಾಚಾರ್ಯ ಡಾ. ಶಾಂತಲಾ ಪಾಟೀಲ ಸ್ವಾಗತಿಸಿದರು. ಡಾ. ಬಸವರಾಜ ಖಂಡಾಳೆ ನಿರೂಪಿಸಿದರು. ವಿವೇಕಾನಂದ ಶಿಂಧೆ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...