ಬೀದರ್ | ಜನರ ಸಮಸ್ಯೆಗೆ ಸ್ಪಂದಿಸದಿದ್ದರೆ ಕ್ರಮ; ಶಾಸಕ ಶೈಲೇಂದ್ರ ಬೆಲ್ದಾಳೆ ಎಚ್ಚರಿಕೆ

Date:

ಜನಸಾಮಾನ್ಯರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸದೆ ನಿರ್ಲಕ್ಷ್ಯ ವಹಿಸಿದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ, ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಬೀದರ್ ದಕ್ಷಿಣ ಕ್ಷೇತ್ರದ ಮಂದಕನಳ್ಳಿ ಗ್ರಾಮದಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದ ಬಳಿಕ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು.

“ಹಿಂದೆ ಯಾವ ರೀತಿ ನೀವು ಕೆಲಸ ಮಾಡಿದ್ದೀರೊ ಗೊತ್ತಿಲ್ಲ, ಈಗ ನಾನು ಜನರ ಸೇವೆ ಮಾಡಲು ಶಾಸಕನಾಗಿದ್ದೇನೆ ನನಗೆ ನನ್ನ ಕ್ಷೇತ್ರದ ಜನರ ಹಿತ ಮುಖ್ಯ. ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ, ಸ್ವಚ್ಛತೆ ಮೂಲ ಸೌಕರ್ಯ ಕೊರತೆ ಕಂಡು ಬಂದರೆ ತಕ್ಷಣ ಪರಿಹರಿಸಬೇಕು” ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂದಕನಳ್ಳಿ ಗ್ರಾಮದಲಲ್ಲಿನ ಹನುಮಾನ ದೇವಸ್ಥಾನದ ಪಕ್ಕದಲ್ಲಿ ಹಲವು ದಿನಗಳಿಂದ ಚರಂಡಿ ನೀರು ಸರಾಗವಾಗಿ ಹರಿಯದೆ ಹಾಗೆ ನಿಂತಿರುವ ಕುರಿತು ಗ್ರಾಮಸ್ಥರು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ತಿಳಿಸಿದರು ಸ್ಪಂದನೆ ನೀಡಿಲ್ಲ. ಹೀಗಾಗಿ ಗ್ರಾಮಸ್ಥರು ಶಾಸಕರಿಗೆ ದೂರು ನೀಡಿರುವ ಕಾರಣ ಈ ಕುರಿತು ಸ್ವತಃ ಶಾಸಕರೆ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಗ್ರಾಮಸ್ಥರು ಸಹ ಸಹಕರಿಸಬೇಕು ಎಂದು ಮನವಿ ಮಾಡಿದರು.

ಬಳಿಕ ಗ್ರಾಮದ ಸ್ವಚ್ಛತೆ, ಕುಡಿಯುವ ನೀರು ಮೂಲ ಸೌಕರ್ಯ ಕುರಿತು ಪರಿಶೀಲನೆ ನಡೆಸಿ ಗ್ರಾಮಸ್ಥರ ಸಮಸ್ಯೆ ಕುರಿತು ಅಹವಾಲು ಸ್ವೀಕರಿಸಿದರು.

ಸಣ್ಣ ಪುಟ್ಟ ಸಮಸ್ಯೆಗಳನ್ನು ತಕ್ಷಣ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಂದಕನಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ವಿಧ್ಯಾರ್ಥಿಗಳ ಫಲಿತಾಂಶ ಕುರಿತು ಚರ್ಚೆ ನಡೆಸಿದರು. ಮಕ್ಕಳ ಪೋಷಕರೊಂದಿಗೆ ಸಲಹೆಗಳನ್ನು ಪಡೆದರು. ಶಿಕ್ಷಕರರು ಉತ್ತಮ ಶಿಕ್ಷಣ ನೀಡಲು ಶ್ರಮ ವಹಿಸುತ್ತಿಲ್ಲ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶಾಸಕರಿಗೆ ಪಾಲಕರು ಮನವಿ ಮಾಡಿದರು.

ವಿಧ್ಯಾರ್ಥಿಗಳ ಫಲಿತಾಂಶ ಉತ್ತಮವಾಗಿಸಲು ಶಿಕ್ಷಕರು ಇನ್ನೂ ಶ್ರಮ ಪಡಬೇಕು. ಈ ನಿಟ್ಟಿನಲ್ಲಿ ಶಿಕ್ಷಕರಿಗೆ ಖಡಕ್ ಸೂಚನೆ ನೀಡುವಂತೆ ಶಿಕ್ಷಣ ಅಧಿಕಾರಿಗಳಿಗೆ ತಿಳಿಸಿದರು.

ಈ ಸುದ್ದಿಓದಿದ್ದೀರಾ? ಬಳ್ಳಾರಿ | ಮನರೇಗಾ ಸಮಸ್ಯೆ ಪರಿಹಾರಕ್ಕೆ ಕಾರ್ಮಿಕರ ಆಗ್ರಹ

ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ ಪಾಟೀಲ್, ತಾ.ಪಂ ಸಹಾಯಕ ನಿರ್ದೇಶಕ ಸಂಜುಕುಮಾರ ಕಾಡವಾದ, ತಾ.ಪಂ ಸಹಾಯಕ ನಿರ್ದೇಶಕಿ ಲಕ್ಷ್ಮಿ, ಕ್ಷೇತ್ರ ಶಿಕ್ಷಣ ಅಧಿಕಾರಿ ಅಖೀಲಾಡೇಶ್ವರಿ, ಶಿಕ್ಷಣ ಸಂಯೋಜಕ ಸಚಿದಾನಂದ, ಶಿಕ್ಷಣ ಅಧಿಕಾರಿ ಗೋಪಾಲರಾವ, ಮುಖಂಡರಾದ ಕುಶಲರಾವ ಯಾಬಾ, ಗ್ರಾಮದ ಮುಖಂಡರಾದ ದತ್ತಾತ್ರಿ ಲಕ್ಕಾ, ಚಂದ್ರಕಾಂತ ಪಿಲ್ಲಿ, ಕಾಶಿನಾಥ ಚನ್ನಪ್ಪ ಗೌರಶೆಟ್ಟಿ, ಧರ್ಮಣ್ಣ ಲಕ್ಕಾ, ಮಲ್ಲಿಕಾರ್ಜುನ್ ಹಲಬುರ್ಗೆ, ರಾಜು ಮಹಾರಾಜ, ಅನೀಲ ಕೋಳಿ, ಅನೀನ ಶೇರಿಕಾರ, ಗಂಗಾಧರ ಗೌರಶೆಟ್ಟಿ, ಸಂತೋಷ ಗೌರಶೆಟ್ಟಿ, ನರ್ಸಿಂಗ್ ಪಾಂಚಳಾ, ಗಂಗಾಧರ ದಾಲಗುಂಡಿ, ವೈಜನಾಥ ಪಿಲ್ಲಿ, ಅನೀಲ್ ಮೇತ್ರೆ, ಅವೀನಾಶ, ಕರಬಸಪ್ಪ ಮತ್ತಿತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...