ಗದಗ | ಗುತ್ತಿಗೆ ನೌಕರರ ಹಿತ ಕಾಯುವುದು ಇಲಾಖೆ ಅಧಿಕಾರಿ ಹಾಗೂ ಏಜೆನ್ಸಿಗಳ ಜವಾಬ್ದಾರಿ

Date:

ಉದ್ದಿಮೆಗೆ ಸಂಬಂಧಿಸಿದ ಕಾನೂನಿನ ಎಲ್ಲ ನಿಯಮಗಳನ್ನು ಅರಿತುಕೊಂಡು ಮೂಲ ಮಾಲೀಕರು ಹಾಗೂ ಗುತ್ತಿಗೆದಾರರು ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸಬೇಕು. ಜೊತೆಗೆ ಕಾಲ-ಕಾಲಕ್ಕೆ ಸರಿಯಾದ ವೇತನವನ್ನು ಒದಗಿಸಬೇಕು ಎಂದು ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ ಗುರುಪ್ರಸಾದ್ ತಿಳಿಸಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವಾಗಳ ಪ್ರಾಧಿಕಾರ, ಇಪಿಎಫ್‌ಓ ಹಾಗೂ ಇಎಸ್‌ಐ ಇಲಾಖೆಗಳು ಜಂಟಿಯಾಗಿ ಸರ್ಕಾರದ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ನೌಕರರ ಶಾಸನಬದ್ಧ ಸೌಲಭ್ಯಗಳ ಕುರಿತು ಅರಿವು ಕಾರ್ಯಕ್ರಮ ಆಯೋಜಿಸಿದ್ದವು. ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಮೂಲ ಮಾಲೀಕರು ಮತ್ತು ಗುತ್ತಿಗೆದಾರರು ಕರ್ನಾಟಕ ಸರ್ಕಾರ ನೀಡಿರುವ ಅಧಿಸೂಚನೆಯ ಅನುಸೂಚಿತ ಉದ್ದಿಮೆಗೆ ಸಂಬಂಧಿಸಿದಂತೆ ಕಾನೂನಿನ ಎಲ್ಲ ನಿಯಮಾವಳಿಗಳನ್ನು ತಿಳಿದುಕೊಂಡಿರಬೇಕು. ಕಾನೂನಿಗೆ ಅನುಗುಣವಾಗಿ ಕಾರ್ಮಿಕರ ಸಮಸ್ಯೆಗಳನ್ನು ಅರಿತು, ಅವರಿಗೆ ದೊರೆಯಬೇಕಾದ ಎಲ್ಲ ಸೌಲಭ್ಯಗಳನ್ನು ಒದಗಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೆಲಸದ ಸಮಯದಲ್ಲಿ ಕಾರ್ಮಿಕರು ಅಪಘಾತಕ್ಕಿಡಾಗಿ ಗಾಯಗೊಂಡರೆ ಅಥವಾ ಸಾವಿಗಿಡಾದರೆ ಅಂತಹ ಕಾರ್ಮಿಕನಿಗೆ ಪರಿಹಾರ ನೀಡಬೇಕಾಗುತ್ತದೆ. ಕಾರ್ಮಿಕರು ಕಾರ್ಯನಿರ್ವಹಿಸುತ್ತಿರುವ ಸ್ಥಳದಲ್ಲಿ ಅಗತ್ಯದ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಅಗತ್ಯದ ಸುರಕ್ಷಾ ಸಾಮಗ್ರಿಗಳನ್ನೂ ದೊರಕಿಸಬೇಕು. ಅವುಗಳ ಬಳಕೆ ಕುರಿತು ಅರಿವು ನೀಡಬೇಕು. ಒಂದು ವೇಳೆ ಕಾರ್ಮಿಕರು ಕೆಲಸದ ಸಮಯದಲ್ಲಿ ಮಾಲೀಕರ ಸೂಚನೆ ಹಾಗೂ ಸುರಕ್ಷಾ ಸಾಮಗ್ರಿಗಳನ್ನು ಬಳಸದೇ ಅಪಘಾತಕ್ಕಿಡಾದಲ್ಲಿ ಅಂತಹ ಕಾರ್ಮಿಕರಿಗೆ ಪರಿಹಾರ ದೊರಕುವುದಿಲ್ಲ” ಎಂದು ಗುರುಪ್ರಸಾದ ಕೆ ಹೇಳಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, “ಸರ್ಕಾರಿ ಕಚೇರಿಗಳಲ್ಲಿ ಹೊರಗುತ್ತಿಗೆ ಕಾರ್ಮಿಕರಿಗೆ ನೀಡಬೇಕಾದ ಕನಿಷ್ಠ ವೇತನದ ಅಧಿಸೂಚನೆಗಳಂತೆ ವೇತನ ಪಾವತಿಸಬೇಕು. ಮೂಲ ಮಾಲೀಕರು ತಮ್ಮ ಗುತ್ತಿಗೆದಾರರು ಪಾವತಿಸಿರುವ ವೇತನದ ಕನಿಷ್ಠ ವೇತನದ ದರಕ್ಕಿಂತ ಕಡಿಮೆ ಇಲ್ಲದಂತೆ ಪಾವತಿಸಿರುತ್ತಾರೆಯೇ ಎಂದು ದಾಖಲೆಗಳ ಮೂಲಕ ಸರಿ ಪಡಿಸಿಕೊಳ್ಳಬೇಕು” ಎಂದು ತಿಳಿಸಿದರು.

“ಗುತ್ತಿಗೆ ನೌಕರರು ತಪ್ಪು ಮಾಡಿದಾಗ ಏಕಾಏಕಿ ಅವರನ್ನು ಕೆಲಸದಿಂದ ತೆಗೆಯಬಾರದು. ಒಂದೆರೆಡು ಸಲ ತಪ್ಪು ತಿದ್ದಿಕೊಳ್ಳಲು ಅವಕಾಶ ನೀಡಬೇಕು. ತಪ್ಪುಗಳು ಮರುಕಳಿಸಿದಾಗ ನಿಯಮಾನುಸಾರ ನೋಟಿಸ್ ಜಾರಿಗೊಳಿಸಿ, ವಿಚಾರಣೆಗೊಳಪಡಿಸಿ ಕೆಲಸದಿಂದ ವಜಾ ಮಾಡಬೇಕು. ಗುತ್ತಿಗೆ ನೌಕರರೂ ಸಹ ಸರ್ಕಾರಿ ನೌಕರರಗಿಂತ ಹೆಚ್ಚಿನ ಕಾರ್ಯ ಮಾಡುವವರಿದ್ದು, ಅವರನ್ನು ಪ್ರಶಂಸಿಸಬೇಕು” ಎಂದರು.

ಸರ್ಕಾರಿ ನೌಕರಿ ಸಂಘದ ಅಧ್ಯಕ್ಷ ರವಿ ಗುಂಜಿಕರ ಮಾತನಾಡಿ, “ಪಿಎಫ್ ಹಾಗೂ ಇಎಸ್‌ಐಗಳ ಬಗ್ಗೆ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ತಿಳಿದುಕೊಂಡಿರಬೇಕು. ಗುತ್ತಿಗೆ ನೌಕರನಿಗೆ ನಿಯಮಿತವಾಗಿ ಪಿಎಫ್‌ ಸಂದಾಯವಾಗುತ್ತಿರುವ ಕುರಿತು ನಿಗಾವಹಿಸಬೇಕು” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಬೆಳಗಾವಿ ಪ್ರಾದೇಶಿಕ ಉಪ ಕಾರ್ಮಿಕ ಆಯುಕ್ತರಾದ ಡಿ.ಜಿ ನಾಗೇಶ, ಇಪಿಎಫ್‌ಓ ಅನುಷ್ಠಾನಾಧಿಕಾರಿ ಅಲಿಸ್ಟಾರ ಬಿ.ಎಲ್, ಇಎಸ್‌ಐ ಶಾಖಾ ವ್ಯವಸ್ಥಾಪಕ ವೈ.ಎಸ್ ಪಾಟೀಲ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಸುಶೀಲಾ ಬಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಾಬಾಸಾಹೇಬ ನೇಮಗೌಡ, ಅಪರ ಜಿಲ್ಲಾಧಿಕಾರಿ ಮಾರುತಿ ಎಂ.ಪಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಭೀಮರಾವ್ ಜಾಧವ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...