ಯಾದಗಿರಿ | ಭ್ರಷ್ಟ, ಶೋಷಣೆ ಮುಕ್ತ ಸಮಾಜ ನಿರ್ಮಾಣಕ್ಕೆ ಕ್ರಾಂತಿಕಾರಕ ಹೋರಾಟ ಅಗತ್ಯ

Date:

  • ಎಸ್ ಯುಸಿಐ (ಸಿ) ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ ಸೋಮಶೇಖರ್ ಅಭಿಪ್ರಾಯ
  • ಎಸ್‌ಯುಸಿಐ (ಸಿ) ಪಕ್ಷದ 76ನೇ ಸಂಸ್ಥಾಪನಾ ದಿನದ ಅಂಗವಾಗಿ ಕಾರ್ಯಕ್ರಮ

ಭ್ರಷ್ಟ, ಶೋಷಣೆ ಮುಕ್ತ ಸಮಾಜ ನಿರ್ಮಾಣಕ್ಕೆ ಕ್ರಾಂತಿಕಾರಕ ಹೋರಾಟಗಳ ಅಗತ್ಯವಿದೆ ಎಂದು ಎಸ್ ಯುಸಿಐ (ಕಮ್ಯುನಿಸ್ಟ್) ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ ಸೋಮಶೇಖರ್ ಅಭಿಪ್ರಾಯಪಟ್ಟರು.

ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷದ 76ನೇ ಸಂಸ್ಥಾಪನಾ ದಿನದ ಅಂಗವಾಗಿ ಪಕ್ಷದ ಯಾದಗಿರಿ ಜಿಲ್ಲಾ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಸಮಾಜದಲ್ಲಿ ಮೂಲಭೂತ ಬದಲಾವಣೆಯ ಅಗತ್ಯವಿದೆ. ಬಂಡವಾಳಶಾಹಿ ವ್ಯವಸ್ಥೆ ಕಿತ್ತೊಗೆಯುವುದರ ಮೂಲಕ ಅವರ ಆಸ್ತಿ ದುಡಿಯುವ ವರ್ಗದ ಕೈ ಸೇರಬೇಕಿದೆ. ಇದಕ್ಕಾಗಿ ದೊಡ್ಡ ಮಟ್ಟದ ಕ್ರಾಂತಿಕಾರಿ ಹೋರಾಟಗಳ ಅಗತ್ಯವಿದೆ” ಎಂದು ಅಭಿಪ್ರಾಯಪಟ್ಟರು.

“ದೇಶದ ಶೋಷಿತ ಮತ್ತು ದುಡಿಯುವ ವರ್ಗ ಪ್ರಸ್ತುತ ರಾಜಕೀಯವನ್ನು ಅರ್ಥ ಮಾಡಿಕೊಳ್ಳಬೇಕು. ಭಾರತಕ್ಕೆ ಸ್ವಾತಂತ್ರ್ಯ ಬಂದಾಗ ರಾಜಕೀಯ ಅಧಿಕಾರವು ಬ್ರಿಟಿಷ್ ಸಾಮ್ರಾಜ್ಯಶಾಹಿಗಳಿಂದ ಭಾರತದ ಬಂಡವಾಳಶಾಹಿ ವರ್ಗದ ಕೈಗಳಿಗೆ ಹಸ್ತಾಂತರವಾಯಿತು. ಬಳಿಕ ರಾಜಕೀಯ ಪಕ್ಷಗಳು ಬಂಡವಾಳಶಾಹಿ ವರ್ಗದ ಏಜೇಂಟುಗಳಾದವು” ಎಂದು ವಿಶ್ಲೇಷಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜಕೀಯ ಪಕ್ಷಗಳು ಧರ್ಮದ ಬಗ್ಗೆ ಸಿಕ್ಕಾಪಟ್ಟೆ ಮಾತನಾಡುತ್ತವೆ. ಹಿಂದುತ್ವದ ಹೆಸರಿನಲ್ಲಿ ಕೋಮುವಾದ ಸೃಷ್ಟಿಸುತ್ತಿದ್ದಾರೆ. ಮುಸ್ಲಿಂರು ಮತ್ತು ಕ್ರಿಶ್ಚಿಯನ್ನರನ್ನು ಎತ್ತಿ ಕಟ್ಟುತ್ತಿರುವ ಬಿಜೆಪಿ, ಬ್ರಿಟಿಷರ ಕೆಲಸವನ್ನು ಮಾಡುತ್ತಿದ್ದಾರೆ. ಅದಕ್ಕೆ ಕಾಂಗ್ರೆಸ್ ಕೂಡಾ ಹೊರತಾಗಿಲ್ಲ” ಎಂದು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಗುಮಗೇರಿ ಗ್ರಾಮದಲ್ಲಿ ಮತದಾನ ಜಾಗೃತಿ

ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಸಮಿತಿಯ ಸದಸ್ಯ ಬಿ ಎನ್ ರಾಮಲಿಂಗಪ್ಪ ಮಾತನಾಡಿ, “ಪಕ್ಷದ ಸಂಸ್ಥಾಪಕರಾದ ಶಿವದಾಸ್ ಘೋಷ್ ಅವರು ದೇಶಕ್ಕೆ ನೈಜ ಸ್ವಾತಂತ್ರ್ಯ ಬೇಕೆಂದು ಮನಗಂಡು ಪಕ್ಷ ಸ್ಥಾಪಿಸಿದರು. ಪ್ರಸ್ತುತ ಪಕ್ಷ ಅವರ ವಿಚಾರದ ಆಧಾರದ ಮೇಲೆ ಬಲಿಷ್ಠ ಹೋರಾಟಗಳನ್ನು ಬೆಳೆಸುತ್ತಿದೆ. ಈ ಹಿನ್ನೆಲೆ ಕಾರ್ಮಿಕರು, ರೈತರು ಅರ್ಥ ಮಾಡಿಕೊಳ್ಳಬೇಕಾದ್ದು, ದುಡಿಯುವ ವರ್ಗದ ನೈಜ ಕಮ್ಯುನಿಸ್ಟ್ ಪಕ್ಷದ ಕಟ್ಟಿ ಬೆಳೆಸಬೇಕು” ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಸಮಿತಿಯ ಸದಸ್ಯರಾದ ಡಿ ಉಮಾದೇವಿ, ಬಿ ಎನ್ ರಾಮಲಿಂಗಪ್ಪ ಹಾಗೂ ಪಕ್ಷದ ಕಾರ್ಯಕರ್ತರಾದ ರಾಚನಗೌಡ, ಭೀಮರೆಡ್ಡಿ, ಬಿ ಕೆ ಶಿಲ್ಪಾ, ಬಿ ಕೆ ಸುಭಾಷ್ ಚಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...