ರಿವಾರ್ಡ್ ಯೋಜನೆ | ವಿಶ್ವಬ್ಯಾಂಕ್ ತಂಡದೊಂದಿಗೆ ವಿಸ್ತೃತ ಚರ್ಚೆ

Date:

  • ‘ಜಲಾನಯನ ಪ್ರದೇಶದ ಪುನಶ್ವೇತನಕ್ಕೆ 600 ಕೋಟಿಯ ನೆರವು’
  • ಕೃಷಿ ಉದ್ಯಮಗಳಿಗೆ ಪ್ರೋತ್ಸಾಹ ನೀಡಿ: ಸಚಿವ ಚಲುವರಾಯಸ್ವಾಮಿ

ವಿಶ್ವ ಬ್ಯಾಂಕಿನ ದಕ್ಷಿಣ ಏಷ್ಯಾ ಪ್ರಾದೇಶಿಕ ನಿರ್ದೇಶಕ ಜಾನ್ ರೂಮ್ ನೇತೃತ್ವದಲ್ಲಿ ಉನ್ನತ ಮಟ್ಟದ ನಿಯೋಗ ನಾಲ್ಕು ದಿನಗಳ ಕಾಲ ರಾಜ್ಯಕ್ಕೆ ಭೇಟಿ ನೀಡಿದ್ದು, ಕೃಷಿ ಸಚಿವ ಎನ್‌ ಚಲುವರಾಯಸ್ವಾಮಿ ಮತ್ತು ಸರ್ಕಾರದ ಉನ್ನತ ಅಧಿಕಾರಿಗಳ ಜತೆ ನಿಯೋಗ ಸಭೆ ನಡೆಸಿದೆ.

ಈ ಭೇಟಿಯ ಭಾಗವಾಗಿ, ವಿಶ್ವಬ್ಯಾಂಕ್ ತಂಡ ಪ್ರಸ್ತುತ ರಾಜ್ಯದಲ್ಲಿ ಅನುಷ್ಠಾನಗೊಳಿಸುತ್ತಿರುವ ವಿಶ್ವಬ್ಯಾಂಕ್ ಅನುದಾನಿತ ರಿವಾರ್ಡ್ ಯೋಜನೆ ಮತ್ತು ರಾಜ್ಯದಲ್ಲಿ ಜಲಾನಯನ ಅಭಿವೃದ್ಧಿಗಾಗಿ ಪರಸ್ಪರ ಸಹಯೋಗವನ್ನು ಮುಂದುವರೆಸುವ ಕುರಿತು ಚರ್ಚಿಸಲಾಯಿತು.

ಸಿರಿ ಧಾನ್ಯ ಬೆಳೆಗಳ ಸಂಸ್ಕರಣೆ, ಮೌಲ್ಯವರ್ಧನೆ, ಮಾರುಕಟ್ಟೆ ಹಾಗೂ ರಫ್ತು, ರಾಜ್ಯದ ವಿವಿಧ ವಲಯಗಳ ಕೃಷಿ ಮೂಲ ಸೌಕರ್ಯಗಳ ಅಭಿವೃದ್ಧಿ, ದೀರ್ಘಾವಧಿ ಉಪಚಾರಗಳಿಂದ ಮಣ್ಣಿನ ಸಾವಯವ ಇಂಗಾಲದ ಮರುಸ್ಥಾಪನೆ, ಕೃತಕ ಬುದ್ಧಿಮತ್ತೆ ಮತ್ತು ಯಂತ್ರಗಳಿಗೆ ವಿಧಾನ ಬಳಸಿ ಕ್ರಿಯಾತ್ಮಕ ಕೃಷಿ ಅಭಿವೃದ್ಧಿ, ರೈತ ಉತ್ಪಾದಕ ಸಂಸ್ಥೆಗಳ ಮೂಲಕ ಗ್ರಾಮೀಣ ಮಾರುಕಟ್ಟೆಗಳನ್ನು ಸ್ಥಾಪಿಸುವುದು ಹಾಗೂ ಕೃಷಿ ಉದ್ಯಮಗಳಿಗೆ ಪ್ರೋತ್ಸಾಹ ನೀಡಿ ಜಾಗತಿಕ ಮಾರುಕಟ್ಟೆಗೆ ಸಮೀಕರಿಸುವ ಬಗ್ಗೆ ಕೃಷಿ ಸಚಿವರು ವಿಶ್ವಬ್ಯಾಂಕ್ ತಂಡದ ಚರ್ಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಶ್ವಬ್ಯಾಂಕ್ ದಕ್ಷಿಣ ಏಷ್ಯಾ ಪ್ರಾದೇಶಿಕ ನಿರ್ದೇಶಕ ಜಾನ್ ರೂಮ್ ಮಾತನಾಡಿ, “ವೈಜ್ಞಾನಿಕವಾದ ಭೂ ಮತ್ತು ಜಲ ಸಂಪನ್ಮೂಲಗಳ ದತ್ತಾಂಶ ಹಾಗೂ ಡಿಜಿಟಲ್ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವಲ್ಲಿ ರಾಜ್ಯದ ಉಪಕ್ರಮಗಳ ಕುರಿತು ಪ್ರಶಂಸೆ ವ್ಯಕ್ತಪಡಿಸಿ, ಕರ್ನಾಟಕದ ಮಾದರಿಯನ್ನು ದೇಶದ ಇತರೆ ಭಾಗಗಳಲ್ಲಿಯೂ ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದರು. ಅಲ್ಲದೆ ರಾಜ್ಯವೂ ಸಹ ಕೃಷಿ ಕ್ಷೇತ್ರದಲ್ಲಿ ಇತರ ದೇಶಗಳ ಉತ್ತಮ ತಾಂತ್ರಿಕತೆ / ಮಾದರಿಗಳನ್ನು ಅಳವಡಿಸಿಕೊಂಡು ಪ್ರಗತಿಯನ್ನು ಸಾಧಿಸಬಹುದಾಗಿದೆ” ಎಂದು ತಿಳಿಸಿದರು.

600 ಕೋಟಿಯ ನೆರವು

“ರಾಜ್ಯದಲ್ಲಿ ಜಲಾನಯನ ಪ್ರದೇಶದ ಪುನಶ್ವೇತನಕ್ಕೆ 600 ಕೋಟಿಯ ನೆರವು ನೀಡಲು ವಿಶ್ವಬ್ಯಾಂಕ್ ಈಗಾಗಲೇ ಸಮ್ಮತಿಸಿದೆ. ಐದು ವರ್ಷಗಳ ‘ರಿವಾರ್ಡ್’ (ಜಲಾನಯನ ಪ್ರದೇಶ ಅಭಿವೃದ್ಧಿ ಯೋಜನೆ) ಮೂಲಕ ಜಲಾನಯನ ಪ್ರದೇಶವನ್ನು ಅಭಿವೃದ್ಧಿಗೊಳಿಸಲಾಗುವುದು’ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಸಭೆ ಬಳಿಕ ಸುದ್ದಿಗಾರರಿಗೆ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...