ಮೈಸೂರಿನ ಕುಮಾರನ್ ಜ್ಯುವೆಲರ್ಸ್ ಹಿಂಭಾಗದ ಕಾರಿಡಾರ್ ನಲ್ಲಿ ಟಿ ನರಸೀಪುರ ವಲಯ ಅರಣ್ಯ ಸಂರಕ್ಷಣಾಧಿಕಾರಿ ಕಾಂತರಾಜ್ ಚೌಹಾಣ್ ಶವ ಪತ್ತೆಯಾಗಿದೆ. ಇದರ ಬೆನ್ನಲ್ಲೇ ಜೊತೆಗಿದ್ದ ಸ್ನೇಹಿತ ಮಲ್ಲನಗೌಡ ಪಾಟೀಲ್ ನಾಪತ್ತೆಯಾಗಿರುವುದು ಅನುಮಾನಕ್ಕೆ ಎಡೆಮಾಡಿದೆ.
ಕಳೆದ 15 ದಿನಗಳ ಹಿಂದೆಯಷ್ಟೇ ಟಿ ನರಸೀಪುರಕ್ಕೆ ವರ್ಗಾವಣೆಯಾಗಿ ಬಂದಿದ್ದ ಕಾಂತರಾಜ್ ಚೌಹಾಣ್ ಸ್ನೇಹಿತ ಮಲ್ಲನಗೌಡ ಪಾಟೀಲ್ ಜೊತೆ ಸೇರಿ ಯುವರಾಜ್ ಗೆಲಾಕ್ಸಿ ಹೋಟೆಲ್ ನಲ್ಲಿ ರೂಮ್ ಬುಕ್ ಮಾಡಿಕೊಂಡಿದ್ದರು ಎನ್ನಲಾಗಿದೆ.
ಈ ಪ್ರಕರಣ ಸಂಬಂಧ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವಿನ ಪ್ರಕರಣ ದಾಖಲಾಗಿ, ನಾಪತ್ತೆಯಾಗಿರುವ ಸ್ನೇಹಿತನ ಪತ್ತೆಗಾಗಿ ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ ಎಂದು ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ಮೈಸೂರು-ಕುಶಾಲನಗರ ರೈಲು ಯೋಜನೆ ರದ್ದು; ಬಹುದಿನದ ಕನಸು ಭಗ್ನ
ಈ ಬಗ್ಗೆ ಪ್ರತಿಕ್ರಿಯಿಸಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಪ್ರಾಥಮಿಕ ವಿಚಾರಣೆ ನಡೆಸಿ, ಮರಣೋತ್ತರ ಪರೀಕ್ಷೆಗೆ ದೇಹ ರವಾನಿಸಲಾಗಿದೆ. ಬಿಜಾಪುರದ ಮೂಲದವಾರಗಿದ್ದ ಮೃತರ ತಂದೆ ತಾಯಿ ಆಗಮಿಸಿದ್ದು, ದೂರಿನನ್ವಯ ಕ್ರಮ ಕೈಗೊಳ್ಳಲಾಗುವುದು. ಇನ್ನೆರೆಡು ದಿನಗಳಲಿ ಪಿಎಂ ಮಾಹಿತಿ ಲಭ್ಯವಾಗಲಿದೆ ಅದನ್ನಾಧರಿಸಿ ಕ್ರಮಕ್ಕೆ ಮುಂದಾಗಲಿದ್ದೇವೆ ಎಂದು ಪತ್ರಿಕಾ ಹೇಳಿಕೆ ನೀಡಿರುತ್ತಾರೆ.





