ಬೀದರ್‌ | ʼಜೈಶ್ರೀರಾಮ್‌ʼ ಹಾಡು ಹಾಕಿದಕ್ಕೆ ಹಿಂದೂ-ಮುಸ್ಲಿಂ ವಿದ್ಯಾರ್ಥಿಗಳ ನಡುವೆ ಗಲಾಟೆ

Date:

ಧರ್ಮವೊಂದಕ್ಕೆ ಸಂಬಂಧಿಸಿದ ಗೀತೆಗೆ ನೃತ್ಯ ಮಾಡುತ್ತಿರುವಾಗ ಎರಡು ಸಮುದಾಯದ ವಿದ್ಯಾರ್ಥಿಗಳು ಪರಸ್ಪರ ಹೊಡೆದಾಡಿಕೊಂಡ ಘಟನೆ ಬೀದರ್‌ ನಗರದ ಮೈಲೂರ ಮಾರ್ಗದಲ್ಲಿರುವ ಗುರುನಾನಕ ದೇವ ಇಂಜಿಯರಿಂಗ್‌ ಕಾಲೇಜಿನಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ.

ಕಾಲೇಜಿನಲ್ಲಿ ಮೇ 30,31 ರಂದು ಎರಡು ದಿನಗಳ ಕಾಲ ತಾಂತ್ರಿಕ ವಾರ್ಷಿಕೋತ್ಸವ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು, ಕಾರ್ಯಕ್ರಮಕ್ಕೆ ಪೂರ್ವಭಾವಿ ತಯ್ಯಾರಿ ನಡೆಸುತ್ತಿದ್ದಾಗ ʼಜೈಶ್ರೀರಾಮʼ ಗೀತೆ ಹಾಕಿ ನೃತ್ಯ ಮಾಡುವ ವೇಳೆ ಅನ್ಯಕೋಮಿನ ವಿದ್ಯಾರ್ಥಿಗಳು ಆಕ್ಷೇಪಿಸಿದ್ದಾರೆ. ಈ ವೇಳೆ ಎರಡೂ ಕಡೆಯ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದೆ.

ವಿಷಯ ತಿಳಿದು ಸ್ಥಳಕ್ಕೆ ಗಾಂಧಿ ಗಂಜ ಪೊಲೀಸ್ ಠಾಣೆಯ ಪೋಲಿಸರು ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಗಲಾಟೆಯಲ್ಲಿ ಗಾಯಗೊಂಡ ಇಬ್ಬರು ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ನಂತರ ಗಾಂಧಿಗಂಜ ಠಾಣೆಯಲ್ಲಿ ಅನ್ಯಕೋಮಿನ 17 ಮತ್ತು ಇತರೆ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಇನ್ನೊಂದು ಸಮುದಾಯದ ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಠಾಣೆಗೆ ಬಂದು 2 ವಿದ್ಯಾರ್ಥಿಗಳು ಸೇರಿ ಇತರೆ 5-6 ವಿದ್ಯಾರ್ಥಿಗಳ ವಿರುದ್ಧ ಪ್ರತಿ ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂಜಾಗೃತ ಕ್ರಮವಾಗಿ ಎರಡು ಗುಂಪಿನವರ ಮೇಲೆ ಶಾಂತಿ ಕಾಪಾಡಲು ಸಿಆರ್‌ಪಿಸಿ ಕಲಂಗಳ ಅಡಿ ಪ್ರಕರಣ ದಾಖಲಿಸಿ ಕ್ರಮಕೈಗೊಳ್ಳಲಾಗುತ್ತಿದೆ. ಕಾಲೇಜಿನ ಆಡಳಿತ ಮಂಡಳಿರವರು ಇದೇ ತಿಂಗಳು 30 ಮತ್ತು 31 ರಂದು ನಡೆಯಬೇಕಾಗಿದ್ದ  ಸಾಂಸ್ಕೃತಿಕ ಕಾರ್ಯಕ್ರಮ ರದ್ದುಗೊಳಿಸಿರುವದಾಗಿ ತಿಳಿಸಿರುತ್ತಾರೆ. ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗಳು ಯಾವುದೇ ವದಂತಿಗಳಿಗೆ ಕಿವಿಗೊಡದೆ ಕಾಲೇಜಿನಲ್ಲಿ ಶಾಂತತೆ ಕಾಪಾಡಬೇಕು. ಕಾಲೇಜಿನ ಬಳಿ ಸೂಕ್ತ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಮಾಡಲಾಗಿದೆ. ಪ್ರಸ್ತುತ ಕಾಲೇಜಿನಲ್ಲಿ ಶಾಂತ ಪರಿಸ್ಥಿತಿ ಇದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್‌ ತಿಳಿಸಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...