ಚಾಮರಾಜನಗರ | ದಲಿತ ಸಮುದಾಯದ ರೈತರ ಜಮೀನಿನಲ್ಲಿ ರಸ್ತೆ ನಿರ್ಮಾಣ; ತಹಶೀಲ್ದಾರ್ ನಡೆಗೆ ಖಂಡನೆ

Date:

ಚಾಮರಾಜನಗರ ಜಿಲ್ಲೆ,ಗುಂಡ್ಲುಪೇಟೆ ತಾಲ್ಲೂಕು ಚಿಕ್ಕಾಟಿ ಗ್ರಾಮದ ದಲಿತ ಸಮುದಾಯದ ರೈತರ ಜಮೀನಿನಲ್ಲಿ ರಸ್ತೆ ನಿರ್ಮಾಣ ಮಾಡಲು ಸರ್ವೆ ಮಾಡಿರುವ ತಹಶೀಲ್ದಾರ್ ನಡೆ ಖಂಡಿಸಿ ತಾಲೂಕು ದಲಿತ ಸಂಘರ್ಷ ಸಮಿತಿ ಮುಖಂಡರು ಹಾಗೂ ಕಾರ್ಯಕರ್ತರು
ಪ್ರತಿಭಟನೆ ನಡೆಸಿದರು.

ತಾಲೂಕು ಕಚೇರಿ ಮುಂಭಾಗ ಜಮಾಯಿಸಿದ ದಸಂಸ ಪ್ರತಿಭಟನಾಕಾರರು ತಹಸೀಲ್ದಾರ್ ಮತ್ತು ಸರ್ವೆ ಇಲಾಖೆಯ ಭ್ರಷ್ಟ ಅಧಿಕಾರಿಗಳ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿ, ಉದ್ದೇಶ ಪೂರ್ವಕವಾಗಿ ದಲಿತ ಸಮುದಾಯದ ರೈತರ ಜಮೀನಿನ ಮೇಲೆ ರಸ್ತೆ ಮಾಡ ಹೊರಟಿರುವುದು ಖಂಡನಿಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಚಿಕ್ಕಾಟಿ ಗ್ರಾಮದ ರೈತ ಚಿಕ್ಕಮಾದಯ್ಯ ಮತ್ತು ಮಹದೇವಮ್ಮ ಎಂಬುವರ ಸರ್ವೆ ನಂಬರ್ 271/ 3 ರಲ್ಲಿ 0.28. ಗುಂಟೆ ಜಮೀನಿದ್ದು ಇದನ್ನೇ ನಂಬಿಕೂಡು ಎರಡು ಕುಟುಂಬಗಳು ಜೀವನ ನಡೆಸುತ್ತಿವೆ. ಅದೇ ಗ್ರಾಮದ ಚಿಕ್ಕೆಗೌಡ ಎಂಬುವರು ಜಮೀನಿಗೆ ಹೋಗಲು ದಾರಿ ಇಲ್ಲವೆಂದ ತಹಸೀಲ್ದಾರ್ ಅವರಿಗೆ ಅರ್ಜಿ ಸಲ್ಲಿಸಿದ್ದಾರೆ. ಚಿಕ್ಕೆಗೌಡ ಅವರ ಜಮಿನಿಗೆ ಹೋಗಲು ಬೇರೆ ದಾರಿ ಇದ್ದರೂ ಸಹ ದಲಿತ ರೈತರ ಜಮೀನಿನ ಮೇಲೆ ದಾರಿ ಮಾಡಲು ಸಂಬಂಧಪಟ್ಟ ಇಲಾಖೆಗೆ ನೋಟಿಸ್ ನೀಡಿ ಮಾರ್ಚ್ 18 ರಂದು ಏಕಾಏಕಿ ಪೊಲೀಸ್ ಸಿಬ್ಬಂದಿಗಳೊಂದಿಗೆ ಬಂದ ತಹಶೀಲ್ದಾರ್,ನಕ್ಷೆಯಲ್ಲಿ ಚಿಕ್ಕೆಗೌಡರ ಜಮೀನಿಗೆ ಹೋಗಲು ದಾರಿ ಇಲ್ಲದಿದ್ದುರೂ ಸಹ ಬಲವಂತವಾಗಿ ದಲಿತ ರೈತರ ಮೇಲೆ ದಬ್ಬಾಳಿಕೆ ನಡೆಸಿ ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಲಿತ ರೈತ ಕುಟುಂಬದ ಜಮೀನಿನ ಮೇಲೆ ದಾರಿ ಬಿಡಿಸುವ ಏಕಾಪಕ್ಷೀಯ ತೀರ್ಮಾನ ತೆಗೆದುಕೊಂಡಿರುವ ತಹಶೀಲ್ದಾರ್ ಅವರನ್ನು ಕೂಡಲೇ ಅಮಾನತುಪಡಿಸಿ ಎಸ್ಸಿ ಎಸ್ಟಿ ದೌರ್ಜನ್ಯದಡಿ ಪ್ರಕರಣವನ್ನು ದಾಖಲಿಸಿ ನೊಂದ ಕುಟುಂಬಕ್ಕೆ ನ್ಯಾಯ ದೂರಕಿಸಿ ಕೂಡಬೇಕೆಂದು ದಸಂಸ ಒತ್ತಾಯಿಸಿದೆ.

ಈ ಸುದ್ದಿ ಓದಿದ್ದೀರಾ? ಕೊಡಗು | ‘ ಲೈನ್ ಮನೆ ‘ ಜೀತ ಇಂದಿಗೂ ಜೀವಂತ

ಪ್ರತಿಭಟನೆಯಲ್ಲಿ ದಸಂಸ ಜಿಲ್ಲಾ ಸಂಚಾಲಕ ಯರಿಯೂರು ರಾಜಣ್ಣ, ಜಿಲ್ಲಾ ಸಂಘಟನಾ ಸಂಚಾಲಕ ನಂಜುಂಡ ಸ್ವಾಮಿ, ತಾಲೂಕು ಸಂಚಾಲಕ ಮಾಡ್ರಹಳ್ಳಿ ರಂಗಸ್ವಾಮಿ,ಹಿರಿಯ ರೈತ ಹೋರಾಟಗಾರ ಬೊಕ್ಕನಹಳ್ಳಿ ನಂಜುಂಡಸ್ವಾಮಿ, ನಾಗೇಂದ್ರ ಬಸವಟ್ಟಿಗೆ
ರಾಜ್ಯಾಧ್ಯಕ್ಷರು ಕರ್ನಾಟಕ ಅಂಬೇಡ್ಕರ್ ಸೇನೆ,ಪುಟ್ಟು ಚನ್ನವಡೆಯಪುರ,ಕುಮಾರ್ ಪಂಜನಹಳ್ಳಿ, ಪಿ ರಾಜು ಕುಂದಕೆರೆ, ಮರಿಯಯ್ಯ, ಪುತ್ತನಪುರ, ಚಿಕ್ಕೂಸಯ್ಯ ಹಂಗಳ, ಶಿವನಂಜ ಅಂಕಹಳ್ಳಿ, ಸಂಜು ನಂಜನಗೂಡು, ಮಾದಯ್ಯ ಇಂಗಲವಾಡಿ, ಮುಳ್ಳೂರು ಸ್ವಾಮಿ ತಾ ಅದ್ಯಕ್ಷ ಅಂಬೇಡ್ಕರ್ ಸೇನೆ, ಪ್ರಸಾದ್ ಕೂಡಸೋಗೆ, ನಾರಾಯಣ ಸ್ವಾಮಿ ವಡ್ಡಗೆರೆ, ಶಿವಣ್ಣ ಕೀಲಗೆರೆ, ಮಂಜುನಾಥ್ ಬರಗಿಕಾಲೋನಿ, ಮಹದೇವಸ್ವಾಮಿ ಚಿಕ್ಕಾಟಿ, ಕುಮಾರ್ ಅಂಕಹಳ್ಳಿ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...