ಮಳೆಯ ಅಬ್ಬರ; ಟೊಮೆಟೊ ಬೆಲೆ ಮತ್ತಷ್ಟು ಏರಿಕೆ!

Date:

ಇತ್ತೀಚಿನ ದಿನಗಳಲ್ಲಿ, ಬೆಂಗಳೂರಿನ ಬೀದಿ ಬದಿ ಮತ್ತು ತಳ್ಳುಗಾಡಿ ತರಕಾರಿ ವ್ಯಾಪಾರಿಗಳು ಟೊಮೆಟೊ ಮಾರಾಟದ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ತಮ್ಮ ಜೀವನ ನಿರ್ವಹಣೆಗೆ ಒಂದಷ್ಟು ದುಡ್ಡು ನೋಡಲು ಟೊಮೆಟೊ ಬೆಲೆ ನೆರವಾಗುತ್ತಿದೆ ಎಂಬು ಅವರು ಭಾವಿಸಿದ್ದಾರೆ. ಕಳೆದ ವಾರ 110ರಿಂದ 120 ರೂ.ಗೆ ಮಾರಾಟವಾಗುತ್ತಿದ್ದ ಟೊಮೆಟೊ, ಈ ವಾರ 140 ರೂ.ಗೆ ಏರಿಕೆಯಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ, ಟೊಮೆಟೊ ಬೆಲೆ ಮತ್ತಷ್ಟು ಏರಿಕೆಯಾಗಿದೆ ಎಂದು ತರಕಾರಿ ಮಾರಾಟಗಾರರು ಮತ್ತು ಕೃಷಿ ಮಾರುಕಟ್ಟೆ ಅಧಿಕಾರಿಗಳು ಹೇಳುತ್ತಿದ್ದಾರೆ.

ನಿರಂತರ ಮಳೆಯಿಂದಾಗಿ ಮೆಟೊಮೆ ಹೂವು ಮತ್ತು ಕಾಯಿಗಳ ಉದುರುತ್ತಿವೆ. ಜೊತೆಗೆ, ಕೊಯ್ಲು ಕೂಡ ಕಷ್ಟಕರವಾಗಿದೆ. ಈಗಾಗಲೇ ಟೊಮೆಟೊ ಬೇಡಿಕೆ ತಕ್ಕಂತೆ ಪೂರೈಕೆ ಇಲ್ಲವಾಗಿದ್ದು, ಈಗ ಪೂರೈಕೆ ಮತ್ತಷ್ಟು ಕಡಿಮೆಯಾಗಿದೆ. ಪರಿಣಾಮವಾಗಿ ಟೊಮೆಟೊ ಬೆಲೆಯಲ್ಲಿ ಮತ್ತೆ ಏರಿಕೆಯಾಗುತ್ತಿದೆ ಎಂದು ಅಧಿಕಾರಿಗಳು ಹೇಳುತ್ತಾರೆ.

“ಕಳೆದ ಒಂದು ತಿಂಗಳಿನಿಂದ ಕೋಲಾರ ಎಪಿಎಂಸಿಯಲ್ಲಿ 15 ಕೆ.ಜಿ ಟೊಮೆಟೊ ಬಾಕ್ಸ್‌ 2,000 ರೂ.ಗೆ ಮಾರಾಟವಾಗುತ್ತಿತ್ತು. ಕಳೆದ ವಾರ, ಬೆಲೆ ಇಳಿಕೆಯಾಗಿ, 1,400-1,900 ರೂಗೆ ಮಾರಾಟವಾಗಿತ್ತು. ಇದೀಗ, ಮತ್ತೆ 2,100 ರೂ.ಗೆ ಏರಿಕೆಯಾಗಿದೆ” ಎಂದು ಟೊಮೆಟೊ ಮಂಡಿಯಲ್ಲಿ ಹರಾಜು ನಡೆಸುವ ಹರೀಶ್‌ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೆಂಗಳೂರು ಎಪಿಎಂಸಿಗೆ ಬೆಂಗಳೂರು ಗ್ರಾಮಾಂತರದಿಂದ ಟೊಮೆಟೊ ಬರುತ್ತಿದ್ದು, ಪ್ರತಿ ಕೆಜಿ ಟೊಮೆಟೊ ದರ 84-92 ರೂ. ಇದೆ. ಕೋಲಾರದಿಂದ ಬರುತ್ತಿರುವ ಟೊಮೇಟೊ ಬೆಲೆ ಜಾಸ್ತಿಯಾಗಿದೆ. ಆ ಜಿಲ್ಲೆಯಲ್ಲಿ ಮಳೆಯಾಗುತ್ತಿರುವುದರಿಂದ ಬೆಲೆ ಏರಿಕೆಯಾಗಿದೆ. ಬೆಂಗಳೂರು ನಗರಕ್ಕೆ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕುಣಿಗಲ್, ರಾಮನಗರ, ಆನೇಕಲ್ ಮತ್ತು ಕನಕಪುರದಿಂದ ಟೊಮೆಟೊ ಪೂರೈಕೆಯಾಗುತ್ತಿದೆ. ಈ ಎಲ್ಲ ಕಡೆ ಎಡಬಿಡದೆ ಮಳೆಯಾಗುತ್ತಿದ್ದು, ಕಟಾವು ಕಷ್ಟಕರವಾಗಿದೆ. ಜೊತೆಗೆ, ಸಾಗಾಣಿಕೆಯೂ ವಿಳಂಬವಾಗುತ್ತಿದೆ” ಎಂದು ಬಿನ್ನಿಪೇಟೆ ಎಪಿಎಂಸಿ ಕಾರ್ಯದರ್ಶಿ ರಾಜಣ್ಣ ತಿಳಿಸಿದ್ದಾರೆ.

ಕರ್ನಾಟಕ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರದಂತಹ ರಾಜ್ಯಗಳಲ್ಲಿ ಮಾರುಕಟ್ಟೆ ದರದಲ್ಲಿ ಟೊಮೆಟೊಗಳನ್ನು ಖರೀದಿಸಲು ಮತ್ತು ಬೇಡಿಕೆಯನ್ನು ನಿರ್ವಹಿಸಲು ಉತ್ತರ ಭಾರತದ ನಗರಗಳಿಗೆ ಟೊಮೆಟೊ ರಫ್ತು ಮಾಡಲು ಕೇಂದ್ರ ಸರ್ಕಾರವು ಆದೇಶಿಸಿದೆ ಎಂದು ಕೃಷಿ ಮಾರುಕಟ್ಟೆ ಇಲಾಖೆಯ ಮೂಲಗಳು ತಿಳಿಸಿವೆ.

“ಟೊಮೆಟೊಗಳನ್ನು ದಕ್ಷಿಣದ ರಾಜ್ಯಗಳಿಂದ ಖರೀದಿಸಿದ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ ಮತ್ತು ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟದಿಂದ 30% ರಿಯಾಯಿತಿಯಲ್ಲಿ ಉತ್ತರದ ರಾಜ್ಯಗಳಿಗೆ ಮಾರಾಟ ಮಾಡಲಾಗುತ್ತಿದೆ. ಆದರೆ, ಕರ್ನಾಟಕದಲ್ಲಿ ಬೆಲೆ ಏರಿಳಿತವನ್ನು ನಿಯಂತ್ರಿಸಲು ಇದುವರೆಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ” ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...