ಜಿಂದಾಲ್ ಟೌನ್‌ಶಿಪ್‌ನಲ್ಲಿ ರೋಹಿಣಿ ಸಿಂಧೂರಿ ವಾಸ್ತವ್ಯ; ತನಿಖೆಗೆ ರೈತರ ಆಗ್ರಹ

Date:

ಬಳ್ಳಾರಿಯಲ್ಲಿ ಹೆಗ್ಗಿಲ್ಲದೆ ನಡೆಯುತ್ತಿರುವ ಗಣಿಗಾರಿಕೆಯಿಂದ ಕೃಷಿಗೆ ತೊಂದರೆಯಾಗುತ್ತಿದೆ ಎಂದು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ಅಳಲು-ಮನವಿ ಆಲಿಸಲು ಐಎಎಸ್‌ ಅಧಿಕಾರಿ, ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಬಳ್ಳಾರಿಗೆ ಭೇಟಿ ನೀಡಿದ್ದರು. ಈ ವೇಳೆ, ಅವರು ಸರ್ಕಾರಿ ಅತಿಥಿ ಗೃಹದಲ್ಲಿ ತಂಗುವ ಬದಲು, ಜಿಂದಾಲ್‌ ಸಂಸ್ಥೆಗೆ ಸೇರಿದ ಟೌನ್‌ಶಿಪ್‌ನಲ್ಲಿ ವಾಸ್ತವ್ಯ ಹೂಡಿದ್ದರು. ಅವರ ಈ ವಾಸ್ತವ್ಯವು ಚರ್ಚೆ ಮತ್ತು ಅನುಮಾನಗಳಿಗೆ ಕಾರಣವಾಗಿದೆ. ಅವರ ವಾಸ್ತವ್ಯದ ಕುರಿತು ತನಿಖೆ ನಡೆಸುವಂತೆ ಪ್ರತಿಭಟನಾನಿರತ ರೈತರು ಆಗ್ರಹಿಸಿದ್ದಾರೆ.

ಬಳ್ಳಾರಿಯಲ್ಲಿ ನಡೆಯುತ್ತಿರುವ ಗಣಿಗಾರಿಕೆಯಲ್ಲಿ ಜಿಂದಾಲ್ ಸಂಸ್ಥೆಯದ್ದೂ ಹೆಚ್ಚಿನ ಪಾಲಿದೆ. ಜಿಂದಾಲ್‌ ಕಂಪನಿಯು ಉಕ್ಕು ಉತ್ಪಾದನೆ ಜೊತೆಗೆ, ಸಂಡೂರಿನಲ್ಲಿ ಗಣಿಗಾರಿಕೆ ನಡೆಸುತ್ತಿದೆ. ಇತ್ತೀಚೆಗೆ ನಾಲ್ಕು ಗಣಿಗಳನ್ನು ಹರಾಜಿನಲ್ಲಿ ಖರೀದಿ ಮಾಡಿದೆ. ಗಣಿ ಹರಾಜಿನಲ್ಲಿ ಸುಪ್ರೀಂ ಕೋರ್ಟ್‌ ಆದೇಶಗಳ ಉಲ್ಲಂಘನೆಯಾಗಿದ್ದು, ಪ್ರಕರಣವು ಸುಪ್ರೀಂ ಕೋರ್ಟ್‌ನಲ್ಲಿದೆ. ಈ ಪ್ರಕರಣದಲ್ಲಿ ಜಿಂದಾಲ್ ಕಂಪನಿ, ರಾಜ್ಯ ಸರ್ಕಾರ ಹಾಗೂ ರೋಹಿಣಿ ಸಂಧೂರಿ ಕೂಡ ಪ್ರತಿವಾದಿಯಾಗಿದ್ದಾರೆ.

ಈ ಲೇಖನ ಓದಿದ್ದೀರಾ?: ಉನ್ನಾಂವ್ ಅತ್ಯಾಚಾರ ಹಗರಣ: ಕುಲದೀಪ್ ಸೆಂಗರ್‌ನ ಹೀನಕೃತ್ಯ; ಬಿಜೆಪಿ ನೈತಿಕ ದಿವಾಳಿತನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೀಗಾಗಿ, ರೈತರ ಪ್ರತಿಭಟನೆಯು ಜಿಂದಾಲ್ ಸಂಸ್ಥೆಯ ವಿರುದ್ಧವೂ ನಡೆಯುತ್ತಿದೆ. ಹೀಗಿರುವಾಗ, ರೈತರ ಮನವಿ ಆಲಿಸಲು ಡಿಸೆಂಬರ್ 25ರಿಂದ 27ರವರೆಗೆ ಬಳ್ಳಾರಿ ಜಿಲ್ಲಾ ಪ್ರವಾಸ ಕೈಗೊಂಡಿದ್ದ ರೋಹಿಣಿ ಸಿಂಧೂರಿ, ಜಿಂದಾಲ್ ಟೌನ್‌ಶಿಪ್‌ನಲ್ಲಿ ಉಳಿದುಕೊಂಡಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ರೋಹಿಣಿ ಸಿಂಧೂರಿ ಅವರು ಸರ್ಕಾರಿ ಅಧಿಕಾರಿಯಾಗಿದ್ದರೂ, ಸರ್ಕಾರದ ವಸತಿಗೃಹದಲ್ಲಿ ಉಳಿದುಕೊಳ್ಳದೆ, ಖಾಸಗಿ ಉದ್ದಿಮೆದಾರರ ಅತಿಥಿ ಗೃಹದಲ್ಲಿ ತಂಗಿದ್ದಾರೆ. ಮಾತ್ರವಲ್ಲದೆ, ತಮ್ಮ ರಜಾ ದಿನದಲ್ಲಿಯೂ ಸರ್ಕಾರಿ ಅಧಿಕಾರಿಗಳು ಮತ್ತು ಸರ್ಕಾರಿ ವಾಹನಗಳನ್ನು ರೋಹಿಣಿ ಬಳಸಿದ್ದಾರೆ. ಅವರು ಕರ್ನಾಟಕ ನಾಗರಿಕ ಸೇವೆಗಳು (ನಡವಳಿಕೆ) ನಿಯಮಗಳು– 1966 ಅನ್ನು ಉಲ್ಲಂಘಿಸಿದ್ದಾರೆ. ಅವರ ವಿರುದ್ಧ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ರೈತರು ಆಗ್ರಹಿಸಿದ್ದಾರೆ. ಸರ್ಕಾರದ ಮುಖ್ಯಕಾರ್ಯದರ್ಶಿ ಪತ್ರ ಬರೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...