ಉಡುಪಿ ಜಿಲ್ಲೆಯ ವಕೀಲರ ಸಂಘದ ಪದಾಧಿಕಾರಿಗಳ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ರೆನಾಲ್ಡ್ ಪ್ರವೀಣ್ ಕುಮಾರ್ ಜಯಭೇರಿ ಬಾರಿಸಿ ಮತ್ತೆ ಅಧ್ಯಕ್ಷ ಸ್ಥಾನಕ್ಕೆ ಏರಿದ್ದಾರೆ.
ಇವರು ಪ್ರತಿಸ್ಪರ್ಧಿ ಜಯಪ್ರಕಾಶ್ ಕೆದ್ಲಾಯ ಅವರ ಎದುರು ಜಯಗಳಿಸಿದ್ದಾರೆ. ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಆರೂರು ಸುಕೇಶ್ ಶೆಟ್ಟಿ ಅವರ ಎದುರು ಚಂದ್ರಶೇಖರ ಶೆಟ್ಟಿ ಜಯಗಳಿಸಿದ್ದಾರೆ. ಉಪಾಧ್ಯಕ್ಷರಾಗಿ ದೇವದಾಸ್ ಶೆಟ್ಟಿಗಾರ್ ಅವರು ಪ್ರವೀಣ್ ಎಂ. ಪೂಜಾರಿ ವಿರುದ್ಧ ಜಯಗಳಿಸಿದ್ದಾರೆ.




