ಚಂದ್ರನ ಮೇಲೆ ಮೂರು ಮೀಟರ್ ಚಲಿಸುವಾಗಲೇ ಪಥ ಬದಲಿಸಿದ ‘ಪ್ರಗ್ಯಾನ್ ರೋವರ್’: ‘ಇಸ್ರೋ’ ಹೇಳಿದ್ದೇನು?

Date:

  • ಚಂದ್ರನ ಮೇಲೆ ಪ್ರಗ್ಯಾನ್ ರೋವರ್‌ಗೆ ಎದುರಾದ 4 ಅಡಿ ಚದರ ವಿಸ್ತೀರ್ಣದ ಗುಂಡಿ
  • ಮಾರ್ಗ ಬದಲಿಸಿ, ಹೊಸ ಮಾರ್ಗದ ಬಗ್ಗೆ ಟ್ವಿಟರ್‌ನಲ್ಲಿ ಫೋಟೋ ಹಂಚಿಕೊಂಡ ಇಸ್ರೋ

ಆ.27ರಂದು ಚಂದ್ರನ ಮೇಲೆ ನಿರ್ಧರಿಸಲಾಗಿದ್ದ ಪಥದಲ್ಲಿ ಕೇವಲ ಮೂರು ಮೀಟರ್ ಚಲಿಸುತ್ತಿರುವಾಗಲೇ ಎದುರಿನಲ್ಲಿ ಗುಂಡಿಯೊಂದು ಎದುರಾದ ಪರಿಣಾಮ ‘ಪ್ರಗ್ಯಾನ್ ರೋವರ್’ ಪಥವನ್ನು ಬದಲಿಸಲಾಗಿದೆ.

ಈ ಕುರಿತಾಗಿ ಟ್ವಿಟ್ಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ), “ತನ್ನ ನಿರ್ಧರಿತ ಪಥದಲ್ಲಿ ಚಲಿಸುತ್ತಿರುವಾಗ ಸುಮಾರು 4 ಮೀಟರ್ ಸುತ್ತಳತೆ ಹೊಂದಿರುವ ಗುಂಡಿಯೊಂದು ಎದುರಾಗಿದೆ. ಈ ಬಗ್ಗೆ ರೋವರ್ ನೀಡಿದ ಮಾಹಿತಿಯನ್ನಾಧರಿಸಿ ಅದರ ಪಥ ಬದಲಾವಣೆ ಮಾಡಲಾಗಿದ್ದು, ಮರುಪಡಿಸಲಾದ ಹೊಸ ಮಾರ್ಗದಲ್ಲಿ ಚಲಿಸಲು ವ್ಯವಸ್ಥೆ ಕಲ್ಪಿಸಲಾಗಿದೆ’ ಎಂದು ತಿಳಿಸಿದೆ.

ಆ.27ರಂದು ಇಸ್ರೋ ನಿಯಂತ್ರಣ ಕೊಠಡಿಗೆ ಪ್ರಗ್ಯಾನ್ ರೋವರ್ ತನಗೆ ಗುಂಡಿಯೊಂದು ಎದುರಾಗಿರುವ ಕುರಿತಾಗಿ ಮಾಹಿತಿ ನೀಡಿತ್ತು. ಆ ನಂತರ ಸಕ್ರಿಯರಾದ ತಜ್ಞರ ತಂಡ, ರೋವರ್‌ಗೆ ಹೊಸ ಮಾರ್ಗವನ್ನು ಸೂಚಿಸಿದೆ. ನಂತರ ರೋವರ್‌ನ ಬದಲಾದ ಮಾರ್ಗ ಹಾಗೂ ದಾರಿಯಲ್ಲಿ ಕಂಡು ಬಂದ ಕುಳಿಯ ಫೋಟೋವನ್ನು ಇಸ್ರೋ ಹಂಚಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಮೂಲಕ ಇಸ್ರೋ ವಿಜ್ಞಾನಿಗಳು, ‘ಪ್ರಗ್ಯಾನ್ ರೋವರ್’ ಎಷ್ಟು ನಿಖರವಾಗಿ ಹಾಗೂ ಎಚ್ಚರಿಕೆಯಿಂದ ಚಂದ್ರನ ಮೇಲೆ ಕಾರ್ಯ ನಿರ್ವಹಿಸುತ್ತಿದೆ ಎಂಬುದನ್ನು ಜನರಿಗೆ ತೋರಿಸಿಕೊಟ್ಟಿದ್ದಾರೆ.

ಆರು-ಚಕ್ರಗಳ, ಸೌರ-ಚಾಲಿತ ‘ಪ್ರಗ್ಯಾನ್ ರೋವರ್’ ಈಗಾಗಲೇ ಚಂದ್ರ ಮೇಲೆ ತನ್ನ ಅಧ್ಯಯನ ಆರಂಭಿಸಿದೆ. ಇದು ಮ್ಯಾಪ್ ಮಾಡದ ಪ್ರದೇಶದಲ್ಲೂ ಸುತ್ತುವ ಸಾಮರ್ಥ್ಯವನ್ನೂ ಕೂಡ ಹೊಂದುವಂತೆ ಇದನ್ನು ತಯಾರು ಮಾಡಲಾಗಿದೆ.

ಚಂದ್ರಯಾನ-3ರ ವಿಕ್ರಮ್ ಲ್ಯಾಂಡರ್ ಮಾಡ್ಯೂಲ್‌ನಲ್ಲಿರುವ ಪೇಲೋಡ್‌ನಿಂದ ಅಳೆಯಲಾದ ಚಂದ್ರನ ಮೇಲ್ಮೈಯಲ್ಲಿರುವ ತಾಪಮಾನ ವ್ಯತ್ಯಾಸದ ಗ್ರಾಫ್ ಅನ್ನು ಇಸ್ರೋ ನಿನ್ನೆ ಬಿಡುಗಡೆ ಮಾಡಿತ್ತು.

50 ಸೆಲ್ಸಿಯಸ್​ನಿಂದ 10 ಸೆಲ್ಸಿಯಸ್​ವರೆಗೆ ಹಗಲಿನ ತಾಪಮಾನ ಇದೆ ಎಂದು ವರದಿ ಕಳುಹಿಸಿಕೊಟ್ಟಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಚಂದ್ರನ ಮೇಲಿರುವ ತಾಪಮಾನದ ಮಾಹಿತಿ ಬಹಿರಂಗಗೊಂಡಿದೆ.

ಇದನ್ನು ಓದಿದ್ದೀರಾ? ಚಂದ್ರಯಾನ-3 ಯಶಸ್ವಿ ಬೆನ್ನಲ್ಲೇ ಮಹತ್ವದ ಪ್ರಕಟಣೆ ಹೊರಡಿಸಿದ ಇಸ್ರೋ

ಭೂಮಿಯ 14 ದಿನಗಳು ಚಂದ್ರನ ಒಂದು ದಿನಕ್ಕೆ ಸಮ ಎಂದು ಲೆಕ್ಕ ಹಾಕಿರುವ ಇಸ್ರೋ ವಿಜ್ಞಾನಿಗಳು, ಸಂಪೂರ್ಣ ಅಧ್ಯಯನಕ್ಕೆ ಇನ್ನೂ 10 ದಿನಗಳು ಬಾಕಿ ಇವೆ. ಕಳೆದ ಆಗಸ್ಟ್ 23ರಂದು ಚಂದ್ರನ ಮೇಲೆ ವಿಕ್ರಮ್‌ ಲ್ಯಾಂಡರ್‌ ಅನ್ನು ಯಶಸ್ವಿಯಾಗಿ ‘ಸಾಫ್ಟ್‌ ಲ್ಯಾಂಡಿಂಗ್‌’ ಮಾಡಲಾಗಿತ್ತು.

ಭೂಮಿಯ 14 ದಿನಗಳ ಬಳಿಕ ಚಂದ್ರನಲ್ಲಿ ರಾತ್ರಿ ಸಂಭವಿಸಲಿದ್ದು, ಆಗ ಕೊರೆಯುವ ಚಳಿ ಕಾರಣ ರೋವರ್‌ ಹಾಗೂ ಲ್ಯಾಂಡರ್‌ಗಳು ನಿಷ್ಕ್ರಿಯಗೊಳ್ಳಲೂಬಹುದು ಎಂದು ತಂತ್ರಜ್ಞರು ಅಂದಾಜಿಸಿದ್ದಾರೆ. ಆದರೂ ಆ ಬಳಿಕವೂ ರೋವರ್‌ ಹಾಗೂ ಲ್ಯಾಂಡರ್‌ ಸುಸ್ಥಿತಿಯಲ್ಲಿ ಇರುವ ನಿರೀಕ್ಷೆಯಿದೆ ಎಂದು ಇಸ್ರೋ ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ.

ಈ ಎಲ್ಲ ಬೆಳವಣಿಗೆಗಳ ನಡುವೆಯೇ ಸೂರ್ಯನ ಬಗ್ಗೆ ಅಧ್ಯಯನ ನಡೆಸುವ ನಿಟ್ಟಿನಲ್ಲಿ ಆದಿತ್ಯ ಎಲ್‌-1 ನೌಕೆಯನ್ನು ಇಸ್ರೋ ಸೆ.2ರಂದು ಬೆಳಗ್ಗೆ 11.50ಕ್ಕೆ ಆಂಧ್ರದ ಶ್ರೀಹರಿಕೋಟಾದ ಸತೀಶ್‌ ಧವನ್‌ ಉಡಾವಣಾ ಕೇಂದ್ರದಿಂದ ಉಡಾವಣೆ ಮಾಡಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...