ಗದಗ | ಆರ್‌ಎಸ್‌ಎಸ್‌ನ ʼಹಿಂದೂ ರಾಷ್ಟ್ರʼ ಬಲೂನಿಗೆ ಜಾತಿಗಣತಿ ಸೂಜಿ ಚುಚ್ಚಿದೆ; ಮಾವಳ್ಳಿ ಶಂಕರ್

Date:

ಜನಗಣತಿ ಮೂಲಕ ರಾಜ್ಯದ ಜನತೆಗೆ ಸ್ಪಷ್ಟತೆ ಸಿಗುತ್ತದೆ. ಬ್ರಾಹ್ಮಣರು ಜನಸಂಖ್ಯೆ ಮೀರಿ ಹೇಗೆ ಅಧಿಕಾರ ಹಿಡಿಯುತ್ತಿದ್ದಾರೆ. ಇದರಿಂದ ದಲಿತರಿಗೆ, ಹಿಂದುಳಿದ ಸಮುದಾಯಗಳಿಗೆ ಸಾಕಷ್ಟು ಅನ್ಯಾಯವಾಗಿದೆ. ಹಾಗಾಗಿ ದಲಿತ ಚಳುವಳಿ ಮತ್ತೆ ಕಟ್ಟಬೇಕಿದೆ. ಅಂದು ಹೋರಾಡಿದ ಮಹನೀಯರ ಹೋರಾಟ ವ್ಯರ್ಥಮಾಡದೆ, ಎಲ್ಲರೂ ಚಳವಳಿಯಲ್ಲಿ ತೊಡಗಿಸಿಕೊಳ್ಳಿ ಎಂದು ಮಾವಳ್ಳಿ ಶಂಕರ್ ಕರೆ ಕೊಟ್ಟಿದ್ದಾರೆ.

ಗದಗ ಪಟ್ಟಣದ ಬಸವೇಶ್ವರ ಸಭಾ ಭವನನದಲ್ಲಿ ದಲಿತ ಸಂಘರ್ಷ ಸಮಿತಿಯು 67ನೇ ಧರ್ಮಚಕ್ರ ಪ್ರವರ್ತನ ದಿನಾಚರಣೆ ಮತ್ತು ಬೆಳಗಾವಿ ವಿಭಾಗ ಮಟ್ಟದ ಸಭೆಯನ್ನು ಹಮ್ಮಿಕೊಂಡಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಡಿಎಸ್ಎಸ್ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಒಂದು ಕಾಲದಲ್ಲಿ ದಲಿತರ ಮೇಲೆ ಹಲ್ಲೆ, ಅನ್ಯಾಯ, ಅಸ್ಪೃಶ್ಯತೆ ಸಹಜವಾಗಿತ್ತು. ಅನ್ಯಾಯಗಳ ವಿರುದ್ಧ, ಧೈರ್ಯ ತುಂಬಿದ ಸಾಕಷ್ಟು ಮಹನೀಯರಿಂದ, ಜನರು ದಲಿತ ಚಳವಳಿಗಳಲ್ಲಿ ತೊಡಗಿಸಿಕೊಂಡರು. ದಲಿತ ಚಳವಳಿಗಾಗಿ ರಕ್ತವನ್ನು ಹರಿಸಿದರು. ದಲಿತ ಸಮುದಾಯದ ಜನರಲ್ಲಿ ವೈಚಾರಿಕ ಪ್ರಜ್ಞೆ ಬೆಳೆಸಲು ಅನೇಕ ಚಳವಳಿಗಳನ್ನು ರೂಪಿಸಿಕೊಂಡು, ರಾಜಕೀಯ ಪ್ರಜ್ಞೆ ಬೆಳೆಸಲು ʼಇಂಡಿಪೆಂಡೆಂಟ್ ಲೇಬರ್ ಪಾರ್ಟಿʼಯನ್ನು ಅಂಬೇಡ್ಕರ್ ಅವರು ಸ್ಥಾಪಿಸಿದರು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ʼಧರ್ಮೋ ರಕ್ಷತಿ ರಕ್ಷಿತಃʼ ಎನ್ನುವುದನ್ನು ಈಗ ಬದಲಾಯಿಸಿ, ʼಸಂವಿಧಾನ ರಕ್ಷತಿ ರಕ್ಷತಿಃʼ  ಆಗಬೇಕು. ಸಂವಿಧಾನವನ್ನು ರಕ್ಷಣೆ ಮಾಡಿದರೆ, ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ. ಹಿಂದೂ ಧರ್ಮದ ಕೊಳಕು ಬಟ್ಟೆಯನ್ನು ಕಳಚಿ, ಶಾಂತಿಯ ಬೌದ್ಧ ಬಟ್ಟೆಯನ್ನು ಧರಿಸಬೇಕಿದೆ” ಎಂದು ಕರೆ ನೀಡಿದರು.

“ಮೋದಿ, ಶಾ ಜಾತಿಗಣತಿ ಮಾಡುವುದನ್ನು ವಿರೋಧಿಸುತ್ತಿದ್ದಾರೆ. ಯಾಕಂದ್ರೆ, ಆರ್‌ಎಸ್‌ಎಸ್ ಎರಡು ಸಾವಿರ ಇಪ್ಪತೈದಕ್ಕೆ ಹಿಂದೂ ರಾಷ್ಟ ಮಾಡ ಹೊರಟಿದ್ದ ಬಲೂನಿಗೆ, ಜಾತಿ ಗಣತಿ ಸೂಜಿ ಚುಚ್ಚಿದೆ” ಎಂದು ಮಾವಳ್ಳಿ ಶಂಕರ್ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಕಾಲೆಳೆದರು.

ಕಾರ್ಯಕ್ರಮದಲ್ಲಿ ದಲಿತ ಕಲಾ ಮಂಡಳಿಯ ಮುಖಂಡ ಶರೀಫ್ ಬಿಳಿಯಲಿ ಮಾತನಾಡಿ, “ಬಿ.ಆರ್. ಅಂಬೇಡ್ಕರ್ ಅವರು, ಲಕ್ಷಾಂತರ ಜನರೊಂದಿಗೆ ಭೌದ್ದ ಧರ್ಮ ಸ್ವೀಕರಿಸಿದರು. ನಂತರ ಲಕ್ಷಾಂತರ ಜನರು ಸ್ವ ಪ್ರೇರಣೆಯಿಂದ, ಬೌದ್ದ ಧರ್ಮವನ್ನು ಸ್ವಿಕಾರ ಮಾಡಿ ಬುದ್ದನ ಕಡೆ ಸಾಗಿದರು. ನಾವು ಕೂಡ ಭೌದ್ದ ಧರ್ಮವನ್ನು ಸ್ವೀಕಾರ ಮಾಡಲಿಕ್ಕೆ ತಯಾರಾಗಬೇಕು” ಎಂದರು.

ಕಾರ್ಯಕ್ರಮದ ಆರಂಭದಲ್ಲಿ ಸಂವಿಧಾನ ಪೂರ್ವ ಪೀಠಿಕೆ ಬೋಧಿಸಲಾಯಿತು. ಕಾರ್ಯಕ್ರಮದಲ್ಲಿ ಡಿಎಸ್ಎಸ್ ಹಿರಿಯ ಮುಖಂಡ ಎಚ್. ಡಿ. ಪೂಜಾರ, ಸಿದ್ದಣ್ಣ ಕಾಂಬಳೆ, ಬಾಗಲಕೋಟೆ ಜಿಲ್ಲಾ ಡಿಎಸ್ಎಸ್ ಮುಖಂಡ ಯುವರಾಜ ಬಂಡಿ ಸೇರಿದಂತೆ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...