ಬೀದರ್‌ | ಆಸ್ಪತ್ರೆಯಲ್ಲಿ ಮೂಲ ಸೌಕರ್ಯ ಕಲ್ಪಿಸುವಂತೆ ಆರ್‌ಟಿಐ ಕಾರ್ಯಕರ್ತರ ಆಗ್ರಹ

Date:

  • ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರು ಹಾಗೂ ಶೌಚಾಲಯ ವ್ಯವಸ್ಥೆ ಮಾಡಬೇಕು
  • ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ಸಂಘದಿಂದ ವೈದಾಧಿಕಾರಿಗಳಿಗೆ ಮನವಿ.

ಹುಮನಾಬಾದ್‌ ತಾಲೂಕು ಆಸ್ಪತ್ರೆಗೆ ಬರುವ ಸಾರ್ವಜನಿಕರ ಅನುಕೂಲಕ್ಕಾಗಿ ಮೂಲಭೂತ ಸೌಕರ್ಯ ಸೇರಿದಂತೆ ಕಚೇರಿಯ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಾಲೂಕು ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ಸಂಘ ಆಗ್ರಹಿಸಿದೆ.

ಈ ಸಂಬಂಧ ಹುಮನಾಬಾದ್‌ ತಾಲೂಕು ಸಾರ್ವಜನಿಕ ಆಸ್ಪತ್ರೆ ವೈದಾಧಿಕಾರಿಗಳಿಗೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದ ಕಾರ್ಯಕರ್ತರು, ಕಚೇರಿಯ ಸಿಬ್ಬಂದಿಗಳು ಕಡ್ಡಾಯವಾಗಿ ತಮ್ಮ ಐಡಿ ಕಾರ್ಡ್ ಧರಿಸಬೇಕು. ಸಾರ್ವಜನಿಕ ಸೇವೆಗಳ ಸಕಾಲ ಫಲಕವನ್ನು ಅಳವಡಿಸಬೇಕು. ಕಚೇರಿಯಲ್ಲಿ ಆಸನಗಳ ವ್ಯವಸ್ಥೆ ಮಾಡಬೇಕು. ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಹಾಗೂ ಶೌಚಾಲಯ ವ್ಯವಸ್ಥೆ ಮಾಡಬೇಕು” ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಆರ್.ಟಿ.ಇ. ಕಾರ್ಯಕರ್ತರ ಸಂಘದ ತಾಲೂಕಾಧ್ಯಕ್ಷ ವಿಜಯಕುಮಾರ ಜಂಜೀರ್‌ ಉಪಾಧ್ಯಕ್ಷ ಅರವಿಂದ ಮಾಶೆಟ್ಟಿ ಸೇರಿದಂತೆ ಕಾರ್ಯಕರ್ತರಾದ ಮಾಣಿಕ ಹಡಪದ, ಸತೀಷ ಗಡವಂತಿ, ಬಾಬುರಡ್ಡಿ ಕಮ್ಮಾ, ವಿಜಯಕುಮಾರ ಚೆಟ್ಟಿ, ಅಮರನಾಥ ಹಡಪದ, ಸೈಯಾದ್‌ ಯಾಸಿನ್‌ ಅಲಿ , ಶಿವಕುಮಾರ ಮಿತ್ರಾ ಸೇರಿದಂತೆ ಇತರರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೇಡಿಕೆಗಳು:

1 ಸಾರ್ವಜನಿಕ ಆಸ್ಪತ್ರೆ ಕಚೇರಿಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು.

2.ನಿಗದಿಪಡಿಸಿದ ಸಮಯಕ್ಕಿಂತಲೂ ಹೆಚ್ಚಿನ ಕೆಲಸ ಸಿಬ್ಬಂದಿ ಮಾಡುತ್ತಿದ್ದರೆ ಅವರ ಹಿರಿಯ ಅಧಿಕಾರಿಗಳ ಅನುಮತಿ ಪತ್ರ ಕಡ್ಡಾಯ ನೀಡಿರಬೇಕು.

3. ರೋಗಿಗಳ ತಪಾಸಣೆಗೆ ಟೋಕನ್ ವ್ಯವಸ್ಥೆ ಮಾಡಬೇಕು.

4. ಸಾರ್ವಜನಿಕ ಆಸ್ಪತ್ರೆಯ ಎಲ್ಲ ಸೌಲಭ್ಯಗಳ ದರಪಟ್ಟಿಯ ಫಲಕವನ್ನು ಕನ್ನಡದಲ್ಲಿ ಅಳವಡಿಸಬೇಕು.

5. ಮಹಿಳಾ ಹಾಗೂ ಪುರಷರಿಗೆ ಪ್ರತ್ಯೇಕ ಚುಚ್ಚುಮದ್ದು ಕೋಣೆಗಳು ಮಾಡಬೇಕು.

6. ಸಾರ್ವಜನಿಕ ಆಸ್ಪತ್ರೆಯ ಲ್ಯಾಬ್ ನಲ್ಲಿ ದೊರೆಯುವ ಎಲ್ಲ ಸೌಲಭ್ಯಗಳನ್ನು ಹಾಗೂ ಅವುಗಳ ದರಪಟ್ಟಿ ಕನ್ನಡದಲ್ಲಿ ಫಲಕವನ್ನು ಅಳವಡಿಸಿ 24 ಗಂಟೆ ಸೇವೆಯನ್ನು ಒದಗಿಸಬೇಕು.

7. ಆಸ್ಪತ್ರೆಯ ಎದುರುಗಡೆ ಖಾಸಗಿ ವಾಹನಗಳ ನಿಲುಗಡೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು.

8. ತಾಯಿ ಮತ್ತು ಮಗುವಿನ ಆಸ್ಪತ್ರೆಯ ವಿವರವನ್ನು ಸಾರ್ವಜನಿಕರಿಗೆ ಸಂಪೂರ್ಣವಾಗಿ ಮಾಹಿತಿ ಒದಗಿಸಬೇಕು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...