ಬಾಗೇಪಲ್ಲಿ | ಆಧುನಿಕತೆಯಿಂದ ಮಂಕಾಗುತ್ತಿರುವ ಗ್ರಾಮೀಣ ಸಂಸ್ಕೃತಿ : ಡಿ.ಎನ್.ಕೃಷ್ಣಾರೆಡ್ಡಿ

Date:

ಗ್ರಾಮೀಣ ಪ್ರದೇಶದ ಶ್ರೀಮಂತ ಸಂಸ್ಕೃತಿಯನ್ನು ಬಿಂಬಿಸುತ್ತಿದ್ದ ಗ್ರಾಮೀಣ ಕ್ರೀಡೆ ಹಾಗೂ ಕಲೆಗಳು ಆಧುನಿಕತೆಯ ಭರಾಟೆಗೆ ಸೊರಗಿ ಹೋಗುತ್ತಿದ್ದು, ಯುವಕರಲ್ಲಿನ ನಿರುತ್ಸಾಹ ಹಾಗೂ ರಾಜಕೀಯ ಗುಂಪುಗಾರಿಕೆ ಗ್ರಾಮೀಣ ಸಂಸ್ಕೃತಿಯನ್ನು ಮಂಕಾಗಿಸುತ್ತಿದೆ ಎಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಿ.ಎನ್.ಕೃಷ್ಣಾರೆಡ್ಡಿ ಅಭಿಪ್ರಾಯಪಟ್ಟರು.

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ದೇವರೆಡ್ಡಿಪಲ್ಲಿ ಗ್ರಾಮದಲ್ಲಿ ಯುವ ಸಬಲೀಕರಣ ಇಲಾಖೆ, ಮಲ್ಲಸಂದ್ರ ವಾಲ್ಮೀಕಿ ಕ್ರೀಡಾ ಮತ್ತು ಸಾಂಸ್ಕೃತಿಕ ಅಭಿವೃದ್ಧಿ ಸಂಘ ಹಾಗೂ ದೇವರೆಡ್ಡಿಪಲ್ಲಿ ಜನತಾ ಕ್ರೀಡಾ ಯುವಕರ ಸಂಘಗಳ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಗ್ರಾಮೀಣ ಕ್ರೀಡಾ ಕೂಟವನ್ನು ಉದ್ಘಾಟಿಸಿ ಮಾತನಾಡಿದರು.

ಕೆಲವೇ ದಶಕಗಳ ಹಿಂದೆ ಗ್ರಾಮೀಣ ಪ್ರದೇಶದಲ್ಲಿ ಪ್ರಸಿದ್ದಿಯಾಗಿದ್ದ ಗ್ರಾಮೀಣ ಕ್ರೀಡೆಗಳು, ನಾಟಕಗಳು ಗ್ರಾಮಗಳಲ್ಲಿ ಸಂಭ್ರಮದ ಸನ್ನಿವೇಶವನ್ನು ಸೃಷ್ಠಿಸುತ್ತಿದ್ದು. ಗ್ರಾಮಸ್ಥರೆಲ್ಲಾ ಒಂದೇ ಕಡೆ ಸೇರಿ ಸಂಭ್ರಮಪಡುತ್ತಿದ್ದರು. ದಿನವಿಡೀ ದುಡಿಮೆಯ ದಣಿವನ್ನು ನಿವಾರಿಸಿಕೊಳ್ಳುತ್ತಿದ್ದರು. ಪ್ರಸ್ತುತ ಸಂದರ್ಭದಲ್ಲಿ ಆಧುನಿಕತೆ ಗ್ರಾಮೀಣ ಸಂಸ್ಕೃತಿಯನ್ನು ಮರೆಯಾಗುವಂತೆ ಮಾಡುತ್ತಿದೆ. ಯುವ ಜನತೆ ಬೇರೊಂದು ದಿಕ್ಕಿನಲ್ಲಿ ಸಾಗುತಿದ್ದು ಗ್ರಾಮೀಣ ಸಂಸ್ಕೃತಿ, ಕಲೆಗಳ ಬಗ್ಗೆ ಆಸಕ್ತಿಯನ್ನು ತೋರುತ್ತಿಲ್ಲ. ಇಂದು ನಡೆದ ಗ್ರಾಮೀಣ ಕ್ರೀಡಾ ಕೂಟದಲ್ಲಿ ಗ್ರಾಮಸ್ಥರು ಅತ್ಯಂತ ಉತ್ಸಾಹದಿಂದ ಭಾಗವಹಿಸಿ ಸಂಭ್ರಮಿಸಿದ್ದು ದೇವರೆಡ್ಡಿಪಲ್ಲಿ ಗ್ರಾಮದಲ್ಲಿ ಹಬ್ಬದ ವಾತಾವರಣವನ್ನು ನಿರ್ಮಿಸಿದೆ. ಗ್ರಾಮದ ಗತವೈಭವವನ್ನು ಮರುಕಳಿಸಿದಂತೆ ಮಾಡಿದೆ ಎಂದು ಹೊಗಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 09 03 at 8.18.53 AM 1

ಮಲ್ಲಸಂದ್ರ ವಾಲ್ಮೀಕಿ ಕ್ರೀಡಾ ಮತ್ತು ಸಾಂಸ್ಕೃತಿಕ ಅಭಿವೃದ್ಧಿ ಸಂಘ ಅಧ್ಯಕ್ಷ ಎಂ.ಸಿ.ಅಶ್ವತ್ಥಪ್ಪ ಮಾತನಾಡಿ, ದೇವರೆಡ್ಡಿಪಲ್ಲಿ ಒಂದು ಮಾದರಿ ಗ್ರಾಮ. ಇಲ್ಲಿನ ಜನತಾ ಯುವಕ ಸಂಘ ತನ್ನ ಚಟುವಟಿಕೆಗಳಿಂದ ರಾಜ್ಯ ಮಟ್ಟದಲ್ಲಿ ಹೆಸರುಗಳಿಸಿದಂತಹ ಉತ್ತಮ ಸಂಘ. ಗ್ರಾಮದ ಯುವಕರು ಕಲೆ ಮತ್ತು ಕ್ರೀಡೆಗೆ ತೋರುವ ಆಸಕ್ತಿ ಶ್ಲಾಘನೀಯವಾದುದು. ಸೇವಾ ಕಾರ್ಯಕ್ರಮಗಳಿಗೂ ಗ್ರಾಮಸ್ಥರು ನೀಡುವ ಸಹಕಾರ ಅಭಿನಂದನೀಯವಾದುದು ಎಂದರು.

ಗ್ರಾಮದಲ್ಲಿ ಸಂಭ್ರಮ ಮೂಡಿಸಿದ ಗ್ರಾಮಿಣ ಕ್ರೀಡಾಕೂಟ : ದೇವರೆಡ್ಡಿಪಲ್ಲಿ ಗ್ರಾಮದಲ್ಲಿ ಏರ್ಪಡಿಸಿದ್ದ ಗ್ರಾಮೀಣ ಕ್ರೀಡಾಕೂಟ ಗ್ರಾಮದಲ್ಲಿ ಸಡಗರದ ವಾತಾವರಣವನ್ನು ನಿರ್ಮಿಸಿತ್ತು. ರಂಗೋಲಿ ಸ್ಪರ್ಧೆ, ಗೋಣಿ ಚೀಲದ ಓಟ, ಹಗ್ಗಾ-ಜಗ್ಗಾಟ, ಲೆಮನ್ ಆನ್ ದಿ ಸ್ಪೂನ್, ಮಡಿಕೆ ಹೊಡೆಯುವುದು, ಮ್ಯೂಸಿಕಲ್ ಚೇರ್, ಮೂರು ಕಾಲಿನ ಓಟ ಮತ್ತಿತರ ಸ್ಪರ್ಧೆಗಳಲ್ಲಿ ಭಾಗವಹಿಸಲು ತೀವ್ರ ಪೈಪೋಟಿ ಉಂಟಾಗಿತ್ತು. ನೂರಾರು ಸಂಖ್ಯೆಯಲ್ಲಿ ಗ್ರಾಮಸ್ಥರು ವಯಸ್ಸಿನ ಬೇಧ-ಭಾವವಿಲ್ಲದೆ ಕ್ರೀಡೆಗಳಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ವಿಜೇತರಿಗೆ ಪ್ರಶಸ್ತಿ ಹಾಗು ಪ್ರಮಾಣಪತ್ರಗಳನ್ನು ವಿತರಿಸಲಾಯಿತು.

WhatsApp Image 2024 09 03 at 8.18.53 AM 2

ಗ್ರಾಪಂ ಸದಸ್ಯರಾದ ಡಿ.ಎನ್.ಸುಧಾಕರರೆಡ್ಡಿ, ನಾಗಮಣಿ ಶಿವಪ್ಪ, ಶಿಕ್ಷಕ ಲಕ್ಷ್ಮೀ ನರಸಿಂಹಪ್ಪ, ಪ್ರಗತಿ ಗ್ರಾಮೀಣ ಬ್ಯಾಂಕ್ ಶ್ರೀನಿವಾಸ್, ಡಿ.ಎನ್.ಮದ್ದಿಲೇಟಿರೆಡ್ಡಿ, ಶಿವಶಕ್ತಿ ಡ್ರೈವಿಂಗ್ ಸ್ಕೂಲ್ ಪ್ರಾಂಶುಪಾಲ ಡಿ.ಎನ್.ನಾಗರಾಜ, ಸತೀಶ್, ನರಸಿಂಹರೆಡ್ಡಿ, ಡಿ.ಎನ್.ನರಸರಾಮರೆಡ್ಡಿ , ಡಿ.ಪಿ.ಲಕ್ಷ್ಮೀಪತಿ ರೆಡ್ಡಿ, ಮಂಜುನಾಥ, ಚೌಡರೆಡ್ಡಿ, ಜಿ. ಆನಂದ, ಮುನಿರಾಜು, ನವನೀತ್, ಜಿ.ಶಂಕರಪ್ಪ, ನಂದೀಶ, ರಘು, ಕೃಷ್ಣಾರೆಡ್ಡಿ, ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...