ಸೌಹಾರ್ದದ ವಿವೇಕದಿಂದ ದೇಶವನ್ನು ಕಟ್ಟಬೇಕಾಗಿದೆ: ಎಸ್ ಜಿ ಸಿದ್ದರಾಮಯ್ಯ

Date:

“ನಮ್ಮ ಎದೆಯೊಳಗೆ ಪ್ರೀತಿ, ಸಹಬಾಳ್ವೆ, ಸಂವಿಧಾನದ ಆಶಯವಿದೆ. ನಾವು ದೊಣ್ಣೆಯನ್ನು ಕೈಯಲ್ಲಿ ಹಿಡಿಯುವವರಲ್ಲ. ಬೀದಿಯಲ್ಲಿ ಲಾಠಿ, ದೊಣ್ಣೆ ಹಿಡಿದು ಹೋಗುವುದು ಭಯೋತ್ಪಾದನೆ. ನಮ್ಮೆದೆಯೊಳಗಿರುವ ಸೌಹಾರ್ದದ ವಿವೇಕದಿಂದ ದೇಶವನ್ನು ಕಟ್ಟಬೇಕಾಗಿದೆ” ಎಂದು ಹಿರಿಯ ಸಾಹಿತಿ ಎಸ್ ಜಿ ಸಿದ್ದರಾಮಯ್ಯ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ದ್ವೇಷ ಅಳಿಯಲಿ, ಪ್ರೀತಿ ಉಳಿಯಲಿ ಎಂದು ಬೆಂಗಳೂರು ನಗರದ ಟೌನ್ ಹಾಲ್ ಮುಂಭಾಗದಲ್ಲಿ ‘ಸಂವಿಧಾನ ದೀವಿಗೆ ಭಾವೈಕ್ಯತಾ ನಡಿಗೆ – ಸೌಹಾರ್ದ ದೀಪಾವಳಿ’ಯನ್ನು, ಸೌಹಾರ್ದ ಕರ್ನಾಟಕದ ವತಿಯಿಂದ ಆಚರಿಸಲಾಯಿತು. ಕಾರ್ಪೋರೇಷನ್ ಸರ್ಕಲ್‌ನಿಂದ ಮರೆವಣಿಗೆ ಹೊರಟು ಟೌನ್ ಹಾಲ್‌ವರೆಗೂ ನಡಿಗೆ ಬಂದ ನಾಡಿನ ಹಿರಿಯ ಪ್ರಜ್ಞಾವಂತರು, ಸಾಹಿತಿಗಳು, ಗಣ್ಯರು ದ್ವೇಷ ಅಳಿಯಲಿ‌, ಪ್ರೀತಿ ಉಳಿಯಲಿ ಎಂಬ ಸಂದೇಶವನ್ನು ಸಾರಿದರು.

ಇದನ್ನು ಓದಿದ್ದೀರಾ? ರೈತರ ಅರ್ಜಿ ಕಸಕ್ಕೆ ಎಸೆದ ಸಿಎಂ ಸಿದ್ದರಾಮಯ್ಯಗೆ ಯಾವ ಶಿಕ್ಷೆ: ಜೆಡಿಎಸ್‌ ಪ್ರಶ್ನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು ಒಂದು ಕಡೆ ಸಂವಿಧಾನದ ದೀವಿಗೆಯನ್ನು ಹಿಡಿದು ಹೊರಟಿದ್ದರೆ, ಇನ್ನೊಂದು ಕಡೆ ಕೆಲ ದೊಣ್ಣೆ ನಾಯಕರು ದೊಣ್ಣೆಯನ್ನು ಹಿಡಿದು ಊರೆಲ್ಲ ಓಡಾಡುತ್ತಿದ್ದಾರೆ. ಇದು ಚರ್ಚೆಯಾಗಬೇಕು. ನಿರುದ್ಯೋಗ, ಹಸಿವಿನ ಸಮಸ್ಯೆ ಕಾಡುತ್ತಿರುವ ಸಮಯದಲ್ಲಿ, ಸಂವಿಧಾನಕ್ಕೆ ಬಹುದೊಡ್ಡ ಸಂಚಕಾರ ಬಂದಿರುವ ಹೊತ್ತಿನಲ್ಲಿ, ನಮ್ಮ ಯುವಮನಸ್ಸುಗಳು ಸಂವಿಧಾನ ವಿರೋಧಿಗಳ ಜೊತೆ ಕೈಜೋಡಿಸಿ ನಮ್ಮ ಮನೆಗೆ ನಾವೇ ಬೆಂಕಿ ಹಾಕಿಕೊಳ್ಳುತ್ತಿದ್ದೇವೆ. ಇದರಿಂದ ನಮ್ಮ ಯುವಜನರು ಹೊರಗಡೆ ಬರಬೇಕು. ಸಂವಿಧಾನದ ಮೌಲ್ಯಗಳನ್ನು ಉಳಿಸಬೇಕು” ಎಂದು ಹಿರಿಯ ಹೋರಾಟಗಾರ ಮಾವಳ್ಳಿ ಶಂಕರ್ ಹೇಳಿದರು.

“ಆರ್‌ಎಸ್ಎಸ್‌ಗೆ ನೂರು ವರ್ಷ ಆಗಿರುವುದು ಭಾರತದ ಸೌಹಾರ್ದತೆಗೆ, ಜಾತ್ಯತೀತ ತತ್ವಕ್ಕೆ ಮಾರಕ. ಅದಕ್ಕಾಗಿ ನಾವು ಮತ್ತೆ ಮತ್ತೆ ಸೌಹಾರ್ದತೆ, ಭಾವೈಕ್ಯತೆ ಉಳಿಸುವ ಬಗ್ಗೆ ಮಾತನಾಡಬೇಕು. ಯುವಕರನ್ನು, ಹೊಸತಲೆಮಾರನ್ನು ಸೌಹಾರ್ದ ನಡಿಗೆಯೆಡೆಗೆ ಕರೆತರಬೇಕಿದೆ” ಎಂದು ಚಿಂತಕ, ಶಿಕ್ಷಣತಜ್ಞ ಬಿ ಶ್ರೀಪಾದ ಭಟ್ ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...