ಮೈಸೂರು | ಕನ್ನಡ ಇರುವ ತನಕ ಎಸ್. ಎಲ್. ಭೈರಪ್ಪ ಇರುತ್ತಾರೆ : ಜಯಪ್ಪ ಹೊನ್ನಾಳಿ

Date:

ಮೈಸೂರು ನಗರದ ನ್ಯಾಯಾಲಯದ ಮುಂಭಾಗದಲ್ಲಿರುವ ಮಹಾತ್ಮ ಗಾಂಧಿ ಪುತ್ಥಳಿ ಎದುರು ಕನ್ನಡಾಂಬೆ ರಕ್ಷಣಾ ವೇದಿಕೆ ಅಧ್ಯಕ್ಷರಾದ ಬಿ.ಬಿ.ರಾಜಶೇಖರ್ ನೇತೃತ್ವದಲ್ಲಿ ಲೇಖಕರಾದ ಎಸ್.ಎಲ್.ಭೈರಪ್ಪ ಅವರ ಭಾವಚಿತ್ರ ಹಿಡಿದು, ಮೋಂಬತ್ತಿ ಹಚ್ಚಿ ಸಂತಾಪ ಸೂಚಿದರು. ಇದೇ ವೇಳೆ ಮಾತನಾಡಿದ ಸಾಹಿತಿ ಜಯಪ್ಪ ಹೊನ್ನಾಳಿ ಕನ್ನಡ ಇರುವ ತನಕ ಎಸ್ ಎಲ್ ಭೈರಪ್ಪ ಇರುತ್ತಾರೆ ಎಂದರು.

ಕನ್ನಡದ ಹಿರಿಯ ಲೇಖಕ, ಕಾದಂಬರಿಕಾರ, ಸರಸ್ವತಿ ಸಮ್ಮಾನ್ ಪುರಸ್ಕೃತರಾದ ಎಸ್.ಎಲ್. ಭೈರಪ್ಪ ನಿಧನ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ. ರಾಷ್ಟ್ರೀಯವಾದಿಯಾಗಿದ್ದರೂ ಹೊರತು ಕೋಮುವಾದಿ ಆಗಿರಲಿಲ್ಲ. ಅವರನ್ನು ಕೋಮುವಾದಿ ಎಂದು ಬಿಂಬಿಸಲಾಯಿತು ಅಷ್ಟೇ. ಅವರೊಬ್ಬ ರಾಷ್ಟ್ರಮಟ್ಟದ ಚಿಂತಕರು. ಕನ್ನಡಕ್ಕೆ ಕಿರೀಟ ಪ್ರಾಯವಾದ ಲೇಖಕರು.

25ಕ್ಕೂ ಹೆಚ್ಚು ಕಾದಂಬರಿಗಳನ್ನು ಬರೆದಿದ್ದಾರೆ. ಅವರ ಕಾದಂಬರಿಯ ಒಂದು ಸಾಲು ಓದಿದರೆ ಇಡೀ ಕಾದಂಬರಿ ಓದಬೇಕೆನ್ನುವ ಹಂಬಲ, ಕುತೂಹಲ ಮೂಡುತ್ತದೆ. ಅವರ ಹೆಸರಾಂತ ಕೃತಿಗಳಾದ ಪರ್ವ, ದಾಟು ಸೇರಿದಂತೆ ಅನೇಕ ಸೃಜನಶೀಲ ಕಾದಂಬರಿಗಳು ಇಂಗ್ಲೀಷ್ ಸೇರಿದಂತೆ ಹಲವು ಭಾಷೆಗಳಲ್ಲಿ ತರ್ಜುಮೆ ಆಗಿದೆ. ಕನ್ನಡ ಸಾಹಿತ್ಯ ಹೆಸರಾಂತ ಕಾದಂಬರಿಕಾರನನ್ನು ಕಳೆದುಕೊಂಡು ತಬ್ಬಲಿಯಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕನ್ನಡಾಂಬೆ ರಕ್ಷಣಾ ವೇದಿಕೆ ಅಧ್ಯಕ್ಷರಾದ ಬಿ.ಬಿ. ರಾಜಶೇಖರ್ ಮಾತನಾಡಿ, ಎಸ್.ಎಲ್.ಭೈರಪ್ಪ ಅವರು, ದೇಶ ಕಂಡ ಶ್ರೇಷ್ಠ ಅಪ್ರತಿಮ ಸೃಜನಶೀಲ ಲೇಖಕರು. ಆಧುನಿಕ ಕನ್ನಡ ಸಾಹಿತ್ಯದ ಜನಪ್ರಿಯತೆ ಮತ್ತು ಚಿಂತನಾಶೀಲತೆ ಕಾಯ್ದುಕೊಂಡ ಅಪೂರ್ವ ಬರಹಗಾರರಾಗಿದ್ದರು. ಅವರಿಗೆ ಪದ್ಮಭೂಷಣ, ಸರಸ್ವತಿ ಸಮ್ಮಾನ್ ಸೇರಿದಂತೆ ಹಲವಾರು ಪ್ರಶಸ್ತಿಗಳು ಲಭಿಸಿದ್ದವು. ಎಸ್.ಎಲ್. ಭೈರಪ್ಪರವರ ನಿಧನ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವನ್ನುಂಟುಮಾಡಿದೆ. ಕನ್ನಡ ಸಾಹಿತ್ಯದ ದಿಗ್ಗಜರಾಗಿದ್ದ ಎಸ್.ಎಲ್. ಭೈರಪ್ಪರವರ ಕೃತಿಗಳು ಭಾಷೆಯ ಗಡಿಯನ್ನು ದಾಟಿ ಗುಜರಾತಿ, ಹಿಂದಿ, ಸಂಸ್ಕೃತ, ಮಲಯಾಳಂ, ತಮಿಳು, ತೆಲಗು ಹಾಗೂ ಇಂಗ್ಲೀಷ್ ಭಾಷೆಗಳಿಗೂ ಅನುವಾದಗೊಂಡಿವೆ.

‘ಧರ್ಮಶ್ರೀ’ ಯಿಂದ ಹಿಡಿದು ಇತ್ತೀಚಿಗೆ ಪ್ರಕಟವಾದ ‘ಉತ್ತರಕಾಂಡ’ದವರಗೆ 20 ಕ್ಕೂ ಹೆಚ್ಚು ಮಹತ್ವಪೂರ್ಣ ಕಾದಂಬರಿಗಳನ್ನು ಭೈರಪ್ಪರವರ ಬರೆದಿದ್ದಾರೆ. ವಂಶವೃಕ್ಷ, ತಬ್ಬಲಿಯು ನೀನಾದೆ ಮಗನೇ, ನಾಯಿನೆರಳು, ಮತದಾನ ಕೃತಿಗಳು ಚಲನಚಿತ್ರಗಳಾಗಿ ರಾಷ್ಟ್ರಮಟ್ಟದ ಹತ್ತು ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿವೆ ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಪ್ಯಾಲೆಸ್ತೀನ್ ಜನರೊಂದಿಗೆ ಜಾಗತಿಕ ಐಕ್ಯತೆಯ ಸಪ್ತಾಹ; ಪ್ರತಿಭಟನಾ ಪ್ರದರ್ಶನ

ಕನ್ನಡಾಂಬೆ ರಕ್ಷಣಾ ವೇದಿಕೆಯ ರಾಜ್ಯ ಖಜಾಂಜಿ ನಂಜುಂಡ, ಮೈಸೂರು ಜಿಲ್ಲಾಧ್ಯಕ್ಷ ಸಂತೋಷ್, ಮೈಸೂರು ಮಹಿಳಾ ವಿಭಾಗದ ಜಿಲ್ಲಾಧ್ಯಕ್ಷೆ ಮಂಜುಳಾ, ಗೌರವ ಕಾರ್ಯದರ್ಶಿ ಸಿಂಧುವಳ್ಳಿ ಶಿವಕುಮಾರ್, ಅನುರಾಜ್ ಗೌಡ, ಮೈಸೂರು ಪ್ರಾಂತ್ಯ ಗೌರವಾಧ್ಯಕ್ಷರು ರವಿ ಗೌಡ, ಮಂಜುನಾಥ್, ಮಹೇಂದ್ರ, ವಿಷ್ಣು ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...