ರಾಯಚೂರು | ದೇವದಾರಿ ಗಣಿಗಾರಿಕೆ ಅನುಮತಿ ರದ್ದುಪಡಿಸಲು ಎಸ್‌.ಆರ್‌ ಹಿರೇಮಠ್ ಆಗ್ರಹ

Date:

ರಾಜ್ಯದಲ್ಲಿ ವಿವಾದಾತ್ಮಕವಾಗಿರುವ ಕೆಐಒಸಿಎಲ್ ಮತ್ತು ವಿಐಆರ್‌ಎಲ್ ಗಣಿಗಾರಿಕೆಗೆ ಅನುಮತಿ ನೀಡಿರುವುದನ್ನು ತಡೆಯುವಂತೆ ಓವರ್‌ಸೈಟ್ ಆಥಾರಿಟಿಯ ನ್ಯಾಯಮೂರ್ತಿ ಬಿ.ಸುದರ್ಶನರೆಡ್ಡಿ ಹಾಗೂ ರಾಜ್ಯದ ಕಾನೂನು ಸಚಿವರಿಗೆ ಮನವಿ ಮಾಡಲಾಗಿದೆ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್ ಹೀರೆಮಠ್ ಹೇಳಿದರು.

ರಾಯಚೂರುನಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, “ಕೇಂದ್ರ ಉಕ್ಕು ಸಚಿವಾಲಯದ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಪ್ರಮಾಣವಚನ ತೆಗೆದುಕೊಂಡ ದಿನದಂದೇ ಸಂಡೂರು ತಾಲೂಕಿನ ದೇವದಾರಿ ಗಣಿಗಾರಿಕೆಗೆ ಸಹಿ ಹಾಕುವ ಅಗತ್ಯ ಏನಿತ್ತು” ಎಂದು ಪ್ರಶ್ನಿಸಿದರು.

“ಸರ್ವೋಚ್ಚ ನ್ಯಾಯಾಲಯದ ಆದೇಶಗಳನ್ನು ಪರಾಮರ್ಶಿಸದೇ ಗಣಿಗಾರಿಕೆಗೆ ಅನುಮತಿ ನೀಡುವ ಅತುರತೆ ಏನಿತ್ತು. ಗಣಿಗಾರಿಕೆ ಅನುಮತಿ ಕೋರಿ ರಾಜ್ಯ ಸರ್ಕಾರ ಪ್ರಸ್ತಾವನೆಯಿದ್ದರೂ ಪರಿಶೀಲಸಿ ನಿರ್ಧರಿಸಬೇಕಿರುವುದು ಸಚಿವಾಲಯದ ಕರ್ತವ್ಯ. ಅದಿರು ಗಣಿಗಾರಿಕೆಯಿಂದ ಆಗುವ ಅಪಾಯಗಳನ್ನು ಈಗಾಗಲೇ ಸುಪ್ರಿಂಕೋರ್ಟ್ ಸೇರಿ ಹಲವಾರು ಪರಿಸರ ರಕ್ಷಣಾ ಸಂಸ್ಥೆಗಳು, ಸಮಿತಿಗಳು ವರದಿ ನೀಡಿವೆ. ಅಪಾಯಗಳನ್ನು ಯೋಚಿಸದೇ ಗಣಿಗಾರಿಕೆಗೆ ಅನುಮತಿ ನೀಡಲಾಗಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“20 ವರ್ಷಗಳಿಂದ ಪಶ್ಚಿಮ ಘಟ್ಟದಲ್ಲಿ ಕೆಐಒಸಿಎಲ್‌ ನಡೆಸುತ್ತಿದ್ದ ಗಣಿಗಾರಿಕೆ ಗುತ್ತಿಗೆಯನ್ನು ರದ್ದುಪಡಿಸಿದೆ. ಗಣಿಗಾರಿಕೆಯಿಂದ ಪರಿಸರ ಹಾಗೂ ಅರಣ್ಯ ಪ್ರದೇಶ ಹಾನಿಯಾಗುತ್ತಿದ್ದ ಕಾರಣಕ್ಕೆ ಗುತ್ತಿಗೆ ರದ್ದುಪಡಿಸಿದ್ದಾರೆ. ಮತ್ತೆ ಅದೇ ಕಂಪನಿಗೆ ಗಣಿಗಾರಿಕೆ ನಡೆಸಲು ಅವಕಾಶ ನೀಡಲಾಗಿದೆ. ಕೆಐಒಸಿಎಲ್‌ ಗಣಿಗಾರಿಕೆಯಿಂದ 99,330  ಮರಗಳು, ವಿಐಎಸ್‌ಎಲ್ ಗಣಿಗಾರಿಕೆಯಿಂದ 29,440 ಮರುಗಳು ನಾಶವಾಗುತ್ತವೆ. ಅಪಾರ ಪರಿಸರ ಸಂಪತ್ತು ಗಣಿಗಾರಿಕೆ ಪರ್ಯಾಯ ವ್ಯವಸ್ಥೆ ಹೇಗೆ ಸರಿದೂಗಿಸಲು ಸಾಧ್ಯ” ಎಂದರು.

“ಸುಪ್ರಿಂಕೋರ್ಟ್ ಸೂಚನೆ ಮೇರೆಗೆ ಬಳ್ಳಾರಿ, ತುಮಕೂರು, ಚಿತ್ರದುರ್ಗ ಸೇರಿ ನಾಲ್ಕು ಜಿಲ್ಲೆಗಳ ಪರಿಸರ ಪುನಶ್ಚೇತನ ಕಾರ್ಯಕ್ರಮ ಸಮರ್ಪಕ ಜಾರಿಗೊಳಿಸಲಾಗಿದೆ. ಸಮಿತಿ ವರದಿಯಂತೆ ನಾಲ್ಕು ಜಿಲ್ಲೆಗಳ‌ 283 ಗ್ರಾಮಗಳನ್ನು ಗುರುತಿಸಲಾಗಿದೆ. ಆದರೆ, ಅಧಿಕಾರಿಗಳು, ಜನಪ್ರತಿನಿಧಿಗಳು ಸೇರಿ 400 ಗ್ರಾಮಗಳನ್ನು ಗುರುತಿಸಿರುವುದು ಅವೈಜ್ಞಾನಿಕವಾಗಿದೆ. ಶಿಕ್ಷಣ, ಆರೋಗ್ಯ, ಮೂಲ ಸೌಕರ್ಯ ಸೇರಿದಂತೆ ಅಭಿವೃದ್ದಿ ಸೂಚ್ಯಂಕ ಆಧಾರದ ಮೇಲೆ ರೂಪಿತವಾಗಿರುವ ಕ್ರಿಯಾ ಯೋಜನೆಯಂತೆ ಜಾರಿಗೊಳಿಸಬೇಕು. ಕಟ್ಟಡ, ಕಾಮಗಾರಿ ಕೆಲಸಗಳನ್ನು ಕೈಗೆತ್ತಿಕೊಳ್ಳಬಾರದು” ಎಂದು ಒತ್ತಾಯಿಸಿದರು.

“ಪರಿಸರ ಪುನಶ್ಚೇತನಕ್ಕೆ ನಿಗದಿಪಡಿಸಲಾದ 25 ಸಾವಿರ ಕೋಟಿ ರೂ. ಬಳಕೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರ ಬದ್ದತೆ ತೋರಬೇಕು. ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರೊಂದಿಗೆ ಸಕರಾತ್ಮಕ ಚರ್ಚೆ ನಡೆದಿದೆ. ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲು ನಿರ್ಧರಿಸಲಾಗಿದೆ. ರಾಜ್ಯ ಸರ್ಕಾರ ಕೂಡಲೇ ಎರಡು ಗಣಿಗಾರಿಕೆ ಅನುಮತಿ ರದ್ದುಪಡಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ನೀಟ್ ರದ್ದು ಮಾಡಿದರೆ ಲಕ್ಷಾಂತರ ವಿದ್ಯಾರ್ಥಿಗಳ ಮೇಲೆ ಪರಿಣಾಮ: ಶಿಕ್ಷಣ ಸಚಿವ

ಪತ್ರಿಕಾಗೋಷ್ಠಿಯಲ್ಲಿ ಜನ ಸಂಗ್ರಾಮ ಪರಿಷತ್ ಅಧ್ಯಕ್ಷ ಜಾನವೆಸ್ಲಿ, ಖಾಜಾ ಅಸ್ಲಂ ಅಹ್ಮದ್, ಭೀಮರಾಯ ಜರದಬಂಡಿ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...