ಚಿತ್ರದುರ್ಗ | ಒಳ ಮೀಸಲಾತಿ ಜಾರಿಗೆ ಸದಾಶಿವ ಆಯೋಗದ ವರದಿ ಸಾಕು : ಚಿಂತಕ ಯಾದವ ರೆಡ್ಡಿ

Date:

ಒಳಮೀಸಲಾತಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ಒತ್ತಡಕ್ಕೆ ಮಣಿದಿದ್ದಾರೆ. ಸದಾಶಿವ ಆಯೋಗದ ವರದಿಯ ಆಧಾರದಲ್ಲೇ ಒಳಮೀಸಲಾತಿ ಜಾರಿ ಮಾಡಬಹುದು. 1901ರಿಂದ ಈವರೆಗೆ ನೀಡಿರುವ ಬೇರೆ ಬೇರೆ ಆಯೋಗದ ವರದಿಗಳು ಸುಪ್ರೀಂ ಕೋರ್ಟ್ ತೀರ್ಪಿಗಿಂತಲೂ ದೊಡ್ಡವಲ್ಲ ಎಂದು ಚಿಂತಕ ಜೆ.ಯಾದವ ರೆಡ್ಡಿ ಅಭಿಪ್ರಾಯಪಟ್ಟರು.

ಚಿತ್ರದುರ್ಗ ನಗರದ ಕ್ರೀಡಾ ಭವನದಲ್ಲಿ ಮಾದಿಗ ಮಹಾಸಭಾ, ಲಂಕೇಶ್ ವಿಚಾರ ವೇದಿಕೆ, ಬೀಕೆ-ಕೇಬಿ ಬಳಗದ ಸಹಯೋಗದಲ್ಲಿ ʼನಿವೃತ್ತ ನ್ಯಾಯಮೂರ್ತಿ ನಾಗಮೋಹನ್‍ದಾಸ್ ಆಯೋಗದ ಸಾಧ್ಯತೆ-ಸವಾಲುಗಳುʼ ಕುರಿತು ಭಾನುವಾರ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಿಲ್ಲರ್ ಆಯೋಗ, ಎಲ್.ಜಿ.ಹಾವನೂರ್ ಆಯೋಗದ ವರದಿಯನ್ನು ಕೆಲವರು ವಿರೋಧಿಸಿದ್ದುಂಟು. ಡಿ.ವಿ.ಗುಂಡಪ್ಪನವರಿಂದ ಹಿಡಿದು ಅನೇಕ ಸಾಹಿತಿಗಳು ಮೀಸಲಾತಿ ವಿರುದ್ದವಾಗಿ ಮಾತನಾಡಿದ್ದರು. ಶೇ.73 ರಷ್ಟು ಮೀಸಲಾತಿಯನ್ನು ಕರ್ನಾಟಕದಲ್ಲಿ ಮಹಾರಾಜರು ನೀಡಿದ್ದರು. ಸದಾಶಿವ ಆಯೋಗ, ಕಾಂತರಾಜ್ ಆಯೋಗದ ವಿರುದ್ದವೂ ಅಪಸ್ವರಗಳು ಕೇಳಿ ಬರುತ್ತಿವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಮಾದಿಗ ಮಹಾಸಭಾ

ಇದನ್ನೂ ಓದಿ : ಈ ದಿನ ಸಂಪಾದಕೀಯ | ಉಪಸಮರದ ಗೆಲುವು– ಈಗಲಾದರೂ ಎಚ್ಚೆತ್ತುಕೊಳ್ಳುತ್ತಾ ಕಾಂಗ್ರೆಸ್‌ ಸರ್ಕಾರ?

ದಲಿತ ಸಮುದಾಯಗಳ ಒಳಗಿನವರೇ ಕೆಲವರು ಒಳ ಮೀಸಲಾತಿ ಬಗ್ಗೆ ಅತ್ಯುಗ್ರವಾಗಿ ಮಾತನಾಡುತ್ತಿರುವುದು ನೋವಿನ ಸಂಗತಿ. ಯಾರು ಯಾರ ಮೀಸಲಾತಿಯನ್ನು ಕಸಿಯುವುದಿಲ್ಲ. ಆಯಾ ಜಾತಿಗನುಗುಣವಾಗಿ ಮೀಸಲಾತಿ ಹಂಚಿಕೆಯಾಗಬೇಕು. ಇಲ್ಲದಿದ್ದರೆ ಮುಂದೆ ಸ್ವಾಸ್ಥ್ಯ ಸಮಾಜ, ಸಮಸಮಾಜವಿರುವುದಿಲ್ಲ. ಮುಂದುವರೆದಂತೆ ಸಂಘರ್ಷಕ್ಕೆ ದಾರಿ ಮಾಡಿಕೊಟ್ಟಂತಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು.

ಮಾದಿಗ ಮಹಾಸಭಾ1

ಯಾರು ಮೀಸಲಾತಿಯನ್ನು ಬೇಕು ಎಂದು ಒಪ್ಪಿಕೊಳ್ಳುತ್ತಾರೆಯೋ, ಅವರು ಒಳಮೀಸಲಾತಿಗೆ ವಿರೋಧಿಸಿದರೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಆಶಯಗಳಿಗೆ ದ್ರೋಹವೆಸಗಿದಂತೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಒಳ ಮೀಸಲಾತಿಯನ್ನು ಶೀಘ್ರ ಜಾರಿಗೊಳಿಸಬೇಕಿತ್ತು. ನ್ಯಾ.ನಾಗಮೋಹನ್‍ದಾಸ್ ವರದಿಯ ಅವಶ್ಯಕತೆಯೇ ಇರಲಿಲ್ಲ ಎಂದು ಗುಡುಗಿದರು.

ರಾಜ್ಯ ಸರ್ಕಾರಗಳಿಗೆ ಒಳ ಮೀಸಲಾತಿ ಜಾರಿಗೊಳಿಸುವ ಅಧಿಕಾರ ಸುಪ್ರೀಂ ಕೋರ್ಟ್ ನೀಡಿದ್ದರೂ ದತ್ತಾಂಶದ ನೆಪ ಹೇಳುತ್ತಿರುವುದು ರಾಜಕೀಯ ನಾಟಕ ಎಂದು ಆಪಾದಿಸಿದರು.

ಸಾಮಾಜಿಕ, ರಾಜಕೀಯ ವಿಶ್ಲೇಷಕ ಕೋಡಿಹಳ್ಳಿ ಸಂತೋಷ್ ಮಾತನಾಡಿ, ಒಳ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿ ಮೂರು ತಿಂಗಳು ಕಳೆದಿದ್ದರೂ ರಾಜ್ಯ ಸರ್ಕಾರ ದತ್ತಾಂಶದ ನೆಪ ಮುಂದಿಟ್ಟುಕೊಂಡು ಒಳ ಮೀಸಲಾತಿಯನ್ನು ಜಾರಿಗೊಳಿಸಲು ಮೀನಾಮೇಷ ಎಣಿಸುತ್ತಿದೆ. ಮಾದಿಗ ಸಮುದಾಯ ಮೂರ್ನಾಲ್ಕು ದಶಕಗಳಿಂದಲೂ ಒಳ ಮೀಸಲಾತಿಗಾಗಿ ಹೋರಾಟ ಮಾಡಿಕೊಂಡು ಬರುತ್ತಿದೆ. ಮಾದಿಗ ಸಮುದಾಯ ಒಂಟಿಯಲ್ಲ. ಸಂಘಟನೆ ಮಾಡಿಕೊಂಡು ಹೋರಾಡುತ್ತೇವೆ. ಒಳ ಮೀಸಲಾತಿ ಅನುಷ್ಠಾನಗೊಳಿಸಲು ಇಷ್ಟವಿಲ್ಲದಿದ್ದರೆ, ಮತ್ತೆ ಕೋರ್ಟಿಗೆ ಹೋಗುತ್ತೇವೆನ್ನುವುದಾದರೆ ಹೋಗಿ ಎಂದು ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದರು.

ಮಾದಿಗ ಮಹಾಸಭಾ12

ತುಮಕೂರು ವಿಶ್ವವಿದ್ಯಾನಿಲಯದ ಉಪನ್ಯಾಸಕ ಡಾ.ನಾಗಭೂಷಣ ಬಗ್ಗನಾಡು ಮಾತನಾಡಿ, “ಕಳೆದ ನಲವತ್ತು ವರ್ಷಗಳಿಂದಲೂ ದೇಶದಲ್ಲಿ ಒಳ ಮೀಸಲಾತಿಗಾಗಿ ಹೋರಾಟಗಳು, ಚಳುವಳಿಗಳು ನಡೆಯುತ್ತಲಿವೆ. ಕೊಟ್ಟ ಮೀಸಲಾತಿಯನ್ನು ಹಂಚಿ ತಿನ್ನಲು ಒಳ ಮೀಸಲಾತಿ ನೀಡುವುದಕ್ಕೆ ಅರ್ಧ ಶತಮಾನವಾಗಿದೆ. ಇದಕ್ಕಾಗಿ ಹೋರಾಟ ನಡೆಸಿದ ಅನೇಕರು ನಮ್ಮನ್ನೆಲ್ಲಾ ಅಗಲಿದ್ದಾರೆ ಎಂದರು.

ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎನ್ನುವ ಸಮಾನತೆಯ ಚಿಂತನೆಯನ್ನಿಟ್ಟುಕೊಂಡು ಸಂವಿಧಾನ ರಚಿಸಿ ದೇಶಕ್ಕೆ ಕೊಡುಗೆ ನೀಡಿರುವ ಡಾ.ಬಿ.ಆರ್.ಅಂಬೇಡ್ಕರ್‌ ಅವರ ಚಿಂತನೆಗಳನ್ನು ಹೊತ್ತವರು ಅವರ ಆಶಯಗಳನ್ನು ಏಕೆ ಮರೆತಿದ್ದಾರೆನ್ನುವುದೇ ಯಕ್ಷ ಪ್ರಶ್ನೆಯಾಗಿದೆ. ಸುಪ್ರೀಂ ತೀರ್ಪು ನೀಡಿದ್ದರೂ ಒಳಮೀಸಲಾತಿ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಜಾಣೆ ನಡೆ ಪ್ರದರ್ಶಿಸುತ್ತಿದೆ. 75 ವರ್ಷಗಳ ಕಾಲ ಮೀಸಲಾತಿ ಉಂಡವರು ಒಳ ಮೀಸಲಾತಿ ಬಗ್ಗೆ ಏಕೆ ಧ್ವನಿ ಎತ್ತುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದೇ ವೇಳೆ ಹಲವು ಗಣ್ಯರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಇದನ್ನೂ ಓದಿ : ಚಿತ್ರದುರ್ಗ | ಅಕ್ರಮ ಮದ್ಯ ಸಾಗಾಟ: ವ್ಯಕ್ತಿ ಮತ್ತು ದ್ವಿಚಕ್ರ ವಾಹನ ಅಧಿಕಾರಿಗಳ ವಶಕ್ಕೆ

ಕಾರ್ಯಕ್ರಮದಲ್ಲಿ ಚಿಂತಕ ಶಿವಸುಂದರ್, ಹಿರಿಯ ಪತ್ರಕರ್ತ ಎಂ.ಎನ್.ಅಹೋಬಲಪತಿ, ಹಿರಿಯ ಹೋರಾಟಗಾರ ಬಿ.ಪಿ.ಪ್ರಕಾಶ್‍ಮೂರ್ತಿ, ಹುಲ್ಲೂರು ಕುಮಾರ್‌ ಸ್ವಾಮಿ, ಲಂಕೇಶ್ ವಿಚಾರ ವೇದಿಕೆಯ ಸಂಚಾಲಕ ಜಡೆಕುಂಟೆ ಮಂಜುನಾಥ್, ಕೊಟ್ಟ ಶಂಕರ್, ಮಲ್ಲಿಕಾರ್ಜುನ್, ಆರ್.ಹಲಸಂಗಿ, ಬಿ.ಎಂ.ನಿರಂಜನ್, ಎಂ.ಆರ್.ಶಿವರಾಜ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಆರ್.ನರಸಿಂಹರಾಜ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...