ಬೀದರ್‌ | ಅಪಘಾತ ತಗ್ಗಿಸಲು ʼರಸ್ತೆ ಸುರಕ್ಷತಾ ಓಟʼ: ಎಸ್‌ಪಿ ಚನ್ನಬಸವಣ್ಣ

Date:

  • ಜಿಲ್ಲೆಯಲ್ಲಿ ಕಳೆದ ವರ್ಷ 332, ಪ್ರಸಕ್ತ ವರ್ಷ 210 ಜನ ರಸ್ತೆ ಅಪಘಾತದಲ್ಲಿ ಮರಣ
  • ಪ್ರತಿ ಕುಟುಂಬದ ಸದಸ್ಯರು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವಂತೆ ಸಲಹೆ

ಬೀದರ ಜಿಲ್ಲೆಯಲ್ಲಿ ನಡೆಯುತ್ತಿರುವ ರಸ್ತೆ ಅಪಘಾತ ಪ್ರಮಾಣ ತಗ್ಗಿಸುವ ನಿಟ್ಟಿನಲ್ಲಿ, ಜನರಿಗೆ ರಸ್ತೆ ಸುರಕ್ಷತಾ ನಿಯಮ ಪಾಲಿಸುವಂತೆ ಪ್ರೇರೆಪಿಸುವ ಉದ್ದೇಶದಿಂದ ಜಿಲ್ಲೆಯ ವಿವಿಧ ಸಂಘ-ಸಂಸ್ತೆಗಳ ಸಹಕಾರದೊಂದಿಗೆ ರಸ್ತೆ ಸುರಕ್ಷತಾ ಓಟ ಏರ್ಪಡಿಸಲಾಗಿದೆ ಎಂದು ಬೀದರ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್. ಹೇಳಿದರು.

ರವಿವಾರ ಬೀದರ ಐತಿಹಾಸಿಕ ಕೋಟೆ ಆವರಣದಲ್ಲಿ ಜಿಲ್ಲೆಯಲ್ಲಿ ರಸ್ತೆ ಅಪಘಾತ ಪ್ರಮಾಣ ತಗ್ಗಿಸುವ ಉದ್ದೇಶದಿಂದ ಆಯೋಜಿಸಿದ ರಸ್ತೆ ಸುರಕ್ಷತಾ ಓಟ ಕಾರ್ಯಕ್ರಮದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿ ಮಾತನಾಡಿದರು.

“ಜಿಲ್ಲೆಯಲ್ಲಿ ಕಳೆದ ವರ್ಷ 332, ಪ್ರಸಕ್ತ ವರ್ಷ 210 ಜನ ರಸ್ತೆ ಅಪಘಾತದಲ್ಲಿ ಮರಣ ಹೊಂದಿದ್ದಾರೆ. ಇವರ ಸಾವಿಗೆ ಕಾರಣ ಕೆದಕಿದಾಗ ಇವರು ರಸ್ತೆ ಸುರಕ್ಷತಾ ನಿಯಮಗಳಾದ ಹೆಲ್ಮೆಟ್ ಧರಿಸದೆ ಇರುವುದು, ಕಾರು ಚಲಾಯಿಸುವಾಗಿ ಸೀಟ್‌ಬೆಲ್ಟ್ ಧರಿಸದೆ ಇರುವುದು ಮುಖ್ಯಕಾರಣ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಇಂದು ರಸ್ತೆ ಸುರಕ್ಷತಾ ಓಟ ಆಯೋಜನೆ ಮಾಡಲಾಗಿದೆ.ಈ ಓಟದಲ್ಲಿ ಭಾಗವಹಿಸಿದ ಪ್ರತಿಯೊಬ್ಬರು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವದರ ಜೊತೆಗೆ ತಮ್ಮ ಕುಟುಂಬದ ಪ್ರತಿ ಸದಸ್ಯರಿಗೂ ನಿಯಮಗಳನ್ನು ಪಾಲಿಸುವಂತೆ ತಿಳಿಹೇಳಬೇಕು” ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಓಟದಲ್ಲಿ 6 ಸಾವಿರಕ್ಕೂ ಅಧಿಕ ಜನ ಭಾಗಿ:

“ಜಿಲ್ಲೆಯ ಸಾರ್ವಜನಿಕರು, ಸಂಘ-ಸಂಸ್ಥೆಯ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು, ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 6 ಸಾವಿರಕ್ಕೂ ಹೆಚ್ಚು ಜನ ಇಂದಿನ ರಸ್ತೆ ಸುರಕ್ಷತಾ ಓಟದಲ್ಲಿ ಭಾಗವಹಿಸಿ ಓಟಕ್ಕೆ ಮೇರಗು ತಂದ ಎಲ್ಲರಿಗೂ ಬೀದರ ಜಿಲ್ಲಾ ಪೊಲೀಸ್ ವತಿಯಿಂದ ಅಭಿನಂದನೆಗಳು ಸಲ್ಲಿಸಿದರು. ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವದರೊಂದಿಗೆ ತಮ್ಮ ಪ್ರಾಣವನ್ನು ಕಾಪಾಡಿಕೊಳ್ಳುವದರ ಜೊತೆಗೆ ಪೊಲೀಸ್ ಇಲಾಖೆಗೆ ಸಹಕಾರ ನೀಡಬೇಕೆಂದು” ಕೋರಿದರು.

road2

ಓಟದಲ್ಲಿ ವಿಜೇತರಿಗೆ ಬಹುಮಾನ ವಿತರಣೆ:

ಈ ರಸ್ತೆ ಸುರಕ್ಷಾತ ಓಟವು 2.5 ಕಿ.ಮಿ., 5 ಕಿ.ಮಿ, ಹಾಗೂ 10 ಕಿ.ಮಿ ವಿಧಗಳಲ್ಲಿ ನಡೆಯಿತು. ಓಟವು ಬೀದರನ ಐತಿಹಾಸಿಕ ಕೋಟೆಯಿಂದ ಪ್ರಾರಂಭವಾಗಿ ಬೀದರ ನಗರದ ವಿವಿಧ ಬೀದಿಗಳಿಂದ ಸಾಗಿ ಮತ್ತೆ ಕೋಟೆ ಆವರಣಕ್ಕೆ ಬಂದು ತಲುಪಿತು. ಈ ಓಟದಲ್ಲಿ ಪ್ರಥಮ, ದ್ವೀತಿಯ, ತೃತೀಯ ಬಹುಮಾನ ವಿಜೇತರಾದ 10 ಕಿ.ಮಿ ಪರುಷ ವಿಭಾಗದಲ್ಲಿ ಭೀಮಾಶಂಕರ (ಪ್ರಥಮ), ಸದಾನಂದ ಮೇತ್ರೆ (ದ್ವಿತೀಯ), ರಮೇಶ (ತೃತೀಯ), 5 ಕಿ.ಮಿ ಪುರುಷ ವಿಭಾಗದಲ್ಲಿ ಮಲ್ಲಿಕಾರ್ಜುನ ಪುಂಡಲಿಕ್ (ಪ್ರಥಮ), ಮಹೇಶ ಭೀಮು ರಾಠೋಡ್ (ದ್ವೀತಿಯ), ದತ್ತು ಪರಶುರಾಮ (ತೃತೀಯ), 10 ಕಿ.ಮಿ ಮಹಿಳಾ ವಿಭಾಗದಲ್ಲಿ ಅಂಜಲಿ (ಪ್ರಥಮ), 5 ಕಿ.ಮಿ ಮಹಿಳಾ ವಿಭಾದಲ್ಲಿ ಐಶ್ವರ್ಯ, ಪೂಜಾ ಜಾಧವ (ದ್ವೀತಿಯ), ಶೃತಿ ಚಿದ್ರೆ (ತೃತೀಯ) ಇವರಿಗೆ ಬಹುಮಾನ ವಿತರಿಸಲಾಯಿತು.

ಈ ಸುದ್ದಿ ಓದಿದ್ದೀರಾ ? ಬೀದರ್‌ | ಕಳವು ಪ್ರಕರಣ: 9 ಆರೋಪಿಗಳ ಬಂಧನ; 28 ಲಕ್ಷ ಮೌಲ್ಯದ ವಸ್ತುಗಳು ಜಪ್ತಿ

ಈ ರಸ್ತೆ ಸುರಕ್ಷತಾ ಓಟ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಬೀದರ ಉಪ ಅರಣ್ಯ ಸಂರಕ್ಷಣಾಧಿಕಾರಿ ವಾನತಿ.ಎಂ.ಎಮ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಹೇಶ ಮೇಘಣ್ಣನವರ, ಬೀದರ ಪೊಲೀಸ ಉಪ-ಅಧೀಕ್ಷರ ಕೆ.ಎಂ ಸತೀಶ, ಗುರುನಾಥ ಕೊಳ್ಳುರ, ಅಬ್ದುಲ್ ಖದಿರ್, ಸೇರಿದಂತೆ ಈ ಓಟ ಕಾರ್ಯಕ್ರಮಕ್ಕೆ ಕೈಜೋಡಿಸಿದ ಬೀದರನ ವಿವಿಧ ಸಂಘ-ಸAಸ್ಥೆಯ ಮುಖ್ಯಸ್ಥರು ಹಾಗೂ ಸದಸ್ಯರು, ಸಾರ್ವಜನಿಕರು, ವಿವಿಧ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು, ವಿವಿಧ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...