ಉಡುಪಿ | ಶಾಸಕ ಯಶ್ಪಾಲ್ ಸುವರ್ಣರವರ ಮೇಲೆ ಕಠಿಣ ಸಾಂವಿಧಾನಿಕ ಕ್ರಮ ಜರುಗಿಸಿ – ಕೆ ಫಣಿರಾಜ್

Date:

ತಮ್ಮ ಶಾಸಕ ಸ್ಥಾನದ ಸಂವಿಧಾನಿಕ ಮರ್ಯಾದೆಯನ್ನು ಮೀರಿ ವರ್ತಿಸಿರುವ ಉಡುಪಿಯ ಶಾಸಕ ಯಶ್ಪಾಲ್ ಸುವರ್ಣರ ನಡೆಗೆ ತೀವ್ರ ಖಂಡನೀಯ. ಅವರ ಮೇಲೆ ಕಠಿಣ ಸಾಂವಿಧಾನಿಕ ಕ್ರಮ ಜರುಗಿಸಬೇಕೆಂದು ಉಡುಪಿ ಸಹಬಾಳ್ವೆ ಸಂಘಟನೆಯು ಕರ್ನಾಟಕ ವಿಧಾನಸಭಾಧ್ಯಕ್ಷರನ್ನು ಒತ್ತಾಯಿಸಿದೆ.

ಯಾವುದೇ ಕ್ಷೇತ್ರದ ಜನಪ್ರತಿನಿಧಿಗಳು ತಾವು ಸಂವಿಧಾನಬದ್ಧವಾಗಿ ನಡೆದುಕೊಳ್ಳುತ್ತೇವೆ ಎಂಬ ಪ್ರಮಾಣ ಮಾಡಿದ ಮೇಲಷ್ಟೇ ತಮ್ಮ ಸಂವಿಧಾನಿಕ ಸ್ಥಾನಕ್ಕೆ ಅರ್ಹರಾಗುತ್ತಾರೆ. ಹಾಗೆ ಪ್ರಮಾಣವಚನಗೈದು, ಸಂವಿಧಾನ ವಿರುದ್ಧ ನಡಾವಳಿ ತೋರಿದರೆ, ಅಂತಹವರು ಖಂಡಿತಕ್ಕೂ ತಮ್ಮ ಸ್ಥಾನಕ್ಕೆ ಅನರ್ಹರಾಗುತ್ತಾರೆ. ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಸದಾ ತಮ್ಮ ಸಾಂವಿಧಾನಿಕ ಸ್ಥಾನದ ಹದ್ದು ಮೀರಿ ವರ್ತಿಸುವ ಚಾಳಿ ಬೆಳಸಿಕೊಂಡಿದ್ದಾರೆ. ಹಲವಾರು ಸಂದರ್ಭಗಳಲ್ಲಿ ಅವರು ಸಾಮಾಜಿಕ ಶಾಂತಿ ಸೌಹಾರ್ದ ಕದಡುವಂತಹ ವರ್ತನೆಗಳನ್ನು ತೋರುತ್ತಲೇ ಬಂದಿದ್ದಾರೆ. ಆದರೆ ಆ.24ರಂದು ಅವರು ತಮ್ಮ ಶಾಸಕ ಸ್ಥಾನದ ಮರ್ಯಾದೆಯನ್ನು ಗಾಳಿಗೆ ತೂರಿ, ಅಪ್ಪಟ ರೌಡಿಯಂತೆ ವರ್ತಿಸಿದ್ದಾರೆ. ಯೂಟ್ಯುಬರ್ ಸಮೀರ್ ಎಂ.ಡಿ. ಕುರಿತು ಮಾಧ್ಯಮಗಳ ಮುಂದೆ ’ಆತ ಉಡುಪಿಗೆ ಬಂದಿದ್ದರೆ ಮಲ್ಪೆ ಬೀಚಲ್ಲಿ ಆತನನ್ನು ಫುಟ್ಬಾಲ್ ಆಡುತ್ತಿದ್ದೆವು. ಯಾವ ಸರಕಾರವಿದ್ದರೂ ಸರಿ, ಆತನಿಗೆ ತಕ್ಕ ಪಾಠ ಕಲಿಸದೇ ಬಿಡುವುದಿಲ್ಲ’ ಎಂಬ ಭಯೋತ್ಪಾದಕ ಮಾತುಗಳನ್ನು ಸಾರ್ವಜನಿಕವಾಗಿ ಆಡಿದ್ದಾರೆ. ಸಂವಿಧಾನಬದ್ಧ ಪ್ರಜಾಪ್ರಭುತ್ವದಲ್ಲಿ ಯಾವುದೇ ನಾಗರಿಕನೂ ಈ ಬಗೆಯ ವರ್ತನೆ ತೋರುವುದು ಅಪರಾಧವಾಗಿದೆ. ಅದರಲ್ಲೂ ಸಂವಿಧಾನಿಕ ಸ್ಥಾನದಲ್ಲಿರುವ ವ್ಯಕ್ತಿಯು ಈ ಬಗೆಯಲ್ಲಿ ವರ್ತಿಸುವುದು ಅಕ್ಷಮ್ಯ ಅಪರಾಧವಾಗಿದೆ. ಈ ವರ್ತನೆಯ ಮೂಲಕ ಅವರು ಸಂವಿಧಾನಕ್ಕೂ, ಅವರು ಪ್ರತಿನಿಧಿಸುವ ಕ್ಷೇತ್ರದ ಪ್ರಜೆಗಳಿಗೂ ಅವಮಾನ ಮಾಡಿದ್ದಾರೆ. ಇಂತಹ ವ್ಯಕ್ತಿಗಳು ಸಂವಿಧಾನಿಕ ಸ್ಥಾನದಲ್ಲಿ ಯಾವ ಕಾರಣಕ್ಕೂ ಮುಂದುವರಿಯಬಾರದು ಸಹಬಾಳ್ವೆ ಹೇಳಿದೆ. ವಿಧಾನಸಭಾ ಸ್ಪೀಕರ್ ತಕ್ಷಣವೇ, ತಮ್ಮ ಸ್ಥಾನದ ಪರಮಾಧಿಕಾರ ಪ್ರಯೋಗಿಸಿ, ಯಶ್ಪಾಲ್ ಸುವರ್ಣರ ಮೇಲೆ ದಂಡನಾ ಕ್ರಮ ಕೈಗೊಳ್ಳಬೇಕೆಂದು ಸಹಬಾಳ್ವೆ ಉಡುಪಿ ಪ್ರಧಾನ ಸಂಚಾಲಕ ಕೆ.ಫಣಿರಾಜ್ ಪ್ರಕಟನೆಯಲ್ಲಿ ಆಗ್ರಹಿಸಿದ್ದಾರೆ.

ಈ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಯವರವರ ಮೂಲಕ ಕರ್ನಾಟಕ ವಿಧಾನಸಭಾಧ್ಯಕ್ಷರನ್ನು ಒತ್ತಾಯಿಸಿ ಸಹಬಾಳ್ವೆ ವತಿಯಿಂದ ಮನವಿಯನ್ನು ನೀಡಲಾಗದೆ..

WhatsApp Image 2025 08 26 at 7.40.21 AM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...