ಉಡುಪಿ | ಸೈಫ್‌ ಕೊಲೆ, ಆತನ ಬಸ್ಸಿನಲ್ಲಿ ಚಾಲಕರಾಗಿ ದುಡಿಯುತ್ತಿದ್ದ ಮೂವರಿಂದ ಕೃತ್ಯ : ಎಸ್‌ ಪಿ ಹರಿರಾಮ್ ಶಂಕರ್

Date:

ಎಕೆಎಂಎಸ್ ಬಸ್ ಮಾಲಕ ಸೈಫುದ್ದೀನ್ ನನ್ನು ಮೂವರು ದುಷ್ಕರ್ಮಿಗಳು ಮಾರಕಾಯಧಗಳಿಂದ ಹತ್ಯೆ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಉಡುಪಿ‌ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ತಿಳಿಸಿದ್ದಾರೆ.

ಕೊಲೆ ನಡೆದ ಕೊಡವೂರು ಸಾಲ್ಮರದಲ್ಲಿರುವ ಮನೆಗೆ ಭೇಟಿ ನೀಡಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದ ಅವರು. ಈ ಕೃತ್ಯವನ್ನು ಆತನ ಬಸ್ಸಿನಲ್ಲಿ ಚಾಲಕರಾಗಿ ದುಡಿಯುತ್ತಿದ್ದ ಮೂವರು ಆರೋಪಿಗಳು ಮಾಡಿರುವ ಬಗ್ಗೆ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಸೈಫುದ್ದಿನ್ ವಿರುದ್ಧ ಒಟ್ಟು 18 ಪ್ರಕರಣಗಳು ದಾಖಲಾಗಿದ್ದು ಉಡುಪಿ ಮತ್ತು ಮಲ್ಪೆ ಪೊಲೀಸ್ ಠಾಣೆಗಳಲ್ಲಿ ರೌಡಿಶೀಟರ್ ಆಗಿದ್ದಾರೆ. ಎರಡು ಕೊಲೆ ಪ್ರಕರಣದ ನೇರ ಆರೋಪಿಯಾಗಿದ್ದಾನೆ ಎಂದರು.

fffa

ಬೆಳಗಿನ ಜಾವ 10ರಿಂದ 11 ಗಂಟೆಯ ನಡುವೆ ದುಷ್ಕೃತ್ಯ ನಡೆದಿದೆ. ಮೂರು ಜನ ಆರೋಪಿಗಳು ಏಕಕಾಲದಲ್ಲಿ ದಾಳಿ ಮಾಡಿದ್ದಾರೆ. ಆರೋಪಿಗಳು AKMS ಖಾಸಗಿ ಬಸ್ ಸಂಸ್ಥೆಯಲ್ಲಿ ಉದ್ಯೋಗಿಗಳಾಗಿದ್ದಾರೆ. ಕೊಲೆಗೆ ಕಾರಣ ಮತ್ತು ಆರೋಪಿಗಳ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ ಎಂದರು. ಕೊಲೆಗೆ ನಿಖರ ಕಾರಣ ತನಿಖೆಯಿಂದ ಬಹಿರಂಗವಾಗಬೇಕಾಗಿದೆ. ಚಾಕು ಮತ್ತು ತಲವಾರ್ ನಿಂದ ದಾಳಿ ಮಾಡಿದ್ದಾರೆ. ದೇಹದ ಹಲವೆಡೆ ಇರಿದ ಗಾಯಗಳಿವೆ ಎಂದು ಅವರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...