ಬೀದರ್‌ | ಜಿಲ್ಲೆಗೆ ಸೈನಿಕ್‌ ಶಾಲೆ ಮಂಜೂರು; ಶೀಘ್ರದಲ್ಲೇ ಶಂಕುಸ್ಥಾಪನೆ: ಕೇಂದ್ರ ಸಚಿವ ಭಗವಂತ ಖೂಬಾ

Date:

  • ದೇಶದ 23 ನಗರಗಳಲ್ಲಿ ಸೇರಿದಂತೆ ರಾಜ್ಯದ ಏಕೈಕ ಬೀದರ್‌ ಜಿಲ್ಲೆಯಲ್ಲಿ ಸೈನಿಕ್‌ ಶಾಲೆ ಆರಂಭವಾಗಲಿದೆ.
  • ಜಿಲ್ಲೆಗೆ ಸೈನಿಕ್‌ ಶಾಲೆ ಮಂಜೂರಾತಿಯಾಗಿದ್ದು, ಎಂದಿಗೂ ಮರೆಯಲಾರದ ಐತಿಹಾಸಿಕ ದಿನವಾಗಿದೆ.

ಕೇಂದ್ರ ಸರ್ಕಾರದಿಂದ ದೇಶದಲ್ಲೆ ಪ್ರತಿಷ್ಠಿತ ಶಾಲೆಗಳ ಸಾಲಿನಲ್ಲಿರುವ ಸೈನಿಕ್ ಶಾಲೆ ಬೀದರ್‌ ಜಿಲ್ಲೆಗೆ ಮಂಜೂರಾತಿಯಾಗಿದೆ. ಅತಿ ಶೀಘ್ರದಲ್ಲೇ ಶಂಕುಸ್ಥಾಪನೆ ನೆರವೆರಿಸಿ ಮುಂದಿನ ವರ್ಷದಿಂದ ತರಗತಿಗಳು ಪ್ರಾರಂಭಿಸಲು ಸಿದ್ದತೆ ಮಾಡಿಕೊಳ್ಳಲಾಗುವುದು ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದ್ದಾರೆ.

“ದೇಶದ 23 ನಗರಗಳಲ್ಲಿ ಈ ಶಾಲೆಯೂ ಪ್ರಾರಂಭವಾಗಲಿದೆ, ಅದರಲ್ಲಿ ನಮ್ಮ ರಾಜ್ಯದ ಏಕೈಕ ಬೀದರ ಜಿಲ್ಲೆಗೆ ಮಾತ್ರ ಸೈನಿಕ ಶಾಲೆ ಮಂಜೂರಾಗಿದೆ. ಎಂದಿಗೂ ಮರೆಯಲಾರದ ಬೀದರ್‌ ಜಿಲ್ಲೆಗೆ ಐತಿಹಾಸಿಕ ದಿನವಾಗಿದೆ. ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ, ಬೀದರ ನಗರದ ಎಚ್.ಕೆ.ಇ ಸೊಸೈಟಿ ಅಡಿಯಲ್ಲಿ ನಡೆಯುತ್ತಿರುವ ನ್ಯಾಷನಲ್ ಇಂಗ್ಲಿಷ್ ಮೀಡಿಯಂ ಪಬ್ಲಿಕ್ ಶಾಲೆಯಲ್ಲಿ (ಬಿ.ವ್ಹಿ.ಬಿ ಕಾಲೇಜು ಆವರಣ) ಪ್ರಾರಂಭವಾಗಲಿದೆ. ಸುಮಾರು 8 ಎಕ್ಕರೆಗಳಲ್ಲಿ ಶಾಲೆ ನಿರ್ಮಾಣವಾಗಲಿದೆ, ಹಾಸ್ಟೆಲ್ ಸೇರಿದಂತೆ ಇನ್ನಿತರೆ ಸೌಕರ್ಯಕ್ಕಾಗಿ ಸುಮಾರು 24 ಎಕ್ಕರೆ ಜಮೀನು ಬಳಸಿಕೊಳಲಾಗುವುದು” ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ಸೈನಿಕ ಶಾಲೆ ನಮ್ಮ ಲೋಕಸಭಾ ಕ್ಷೇತ್ರದ ಹಿರಿಮೆಯನ್ನು ಹೆಚ್ಚಿಸಲಿದೆ, ಜೊತೆಗೆ ಸೈನಿಕ ಶಾಲೆಗಳ ಪ್ರಾಥಮಿಕ
ಉದ್ದೇಶ ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ, ಮಾನಸಿಕವಾಗಿ ಮತ್ತು ದೈಹಿಕವಾಗಿ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ಭಾರತೀಯ ನೌಕಾ ಅಕಾಡೆಮಿಗೆ ಪ್ರವೇಶಿಸಲು ಸಿದ್ಧಪಡಿಸುವುದು. ಈ ನಿಟ್ಟಿನಲ್ಲಿ ನಮ್ಮ ಭಾಗದ ಮಕ್ಕಳು ಸಹ ಭವಿಷ್ಯದಲ್ಲಿ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ಭಾರತೀಯ ನೌಕಾ ಅಕಾಡೆಮಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭರ್ತಿಯಾಗಲು ಈ ಶಾಲೆಯಿಂದ ಅನುಕೂಲವಾಗಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕಲ್ಯಾಣ ಕರ್ನಾಟಕ | ಹೆಸರು ಬದಲಾದರೂ ಹಸನಾಗದ ಬದುಕು

“ಬೀದರನಲ್ಲಿ ಸೈನಿಕ್ ಶಾಲೆಗಾಗಿ ಎಚ್.ಕೆ.ಇ ಸೊಸೈಟಿಯವರು ಸಹ ಅಗತ್ಯ ಸಹಕಾರ ನೀಡಿದ್ದಾರೆ, ಕಳೆದ ವರ್ಷ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರಿಗೆ ಭೇಟಿಯಾಗಿ, ಸದರಿ ಶಾಲೆಗಾಗಿ ಪ್ರಸ್ತಾವನೆ ಸಲ್ಲಿಸಲಾಗಿತ್ತು, ಮಂಜೂರಾತಿ ಮಾಡಿಕೊಡಬೇಕೆಂದು ನಾನು ಹಾಗೂ ಎಚ್.ಕೆ.ಇ. ಸೊಸೈಟಿ ಅಧ್ಯಕ್ಷರು ಮನವಿ ಮಾಡಿದ್ದೇವು, ಅದರಂತೆ ಈ ಸಾಲಿನಲ್ಲಿ ಬೀದರ ಜಿಲ್ಲೆಗೆ ಸೈನಿಕ ಶಾಲೆ ಮಂಜೂರಾತಿಯಾಗಿದೆ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...