ಸಕಲೇಶಪುರ | ಕಾಡಾನೆ ಸಮಸ್ಯೆಗೆ ಬಿಜೆಪಿ ಸರ್ಕಾರವೇ ಕಾರಣ: ಯಾದ್‌ಗಾರ್‌ ಇಬ್ರಾಹಿಂ

Date:

ಕಾಡಾನೆ ಸಮಸ್ಯೆಗೆ ಬಿಜೆಪಿ ಸರ್ಕಾರ ಕಾರಣವೇ ಹೊರತು, ಇಲ್ಲಿಯ ಶಾಸಕರಲ್ಲ ಎಂದು ಜೆಡಿಎಸ್ ಮುಖಂಡ ಯಾದ್‌ಗಾರ್‌ ಇಬ್ರಾಹಿಂ ಆರೋಪಿಸಿದರು.

ಹಾಸನ ಜಿಲ್ಲೆ ಸಕಲೇಶಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಾಡಾನೆ ಹಾಗೂ ಹಲವು ಗಂಭೀರ ಸಮಸ್ಯೆಗಳ ಬಗ್ಗೆ ಪ್ರತಿ ವಿಧಾನಸಭಾ ಅಧಿವೇಶನದಲ್ಲಿಯೂ ಸರ್ಕಾರದ ಗಮನಕ್ಕೆ ತರಲಾಗಿದೆ. ಆದರೆ, ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಧೋರಣೆಯಿಂದಾಗಿ ಕಾಡಾನೆ ಸಮಸ್ಯೆ ಹಾಗೂ ಇತರೆ ಸಮಸ್ಯೆಗಳಿಗೆ ಈವರೆಗೆ ಶಾಶ್ವತ ಪರಿಹಾರ ದೊರಕಿಲ್ಲ” ಎಂದು ಹೇಳಿದರು.

‘ಸಕಲೇಶಪುರ–ಆಲೂರು–ಕಟ್ಟಾಯ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಎಚ್‌.ಕೆ. ಕುಮಾರಸ್ವಾಮಿ ಅವಧಿಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗಿಲ್ಲ. ಕುಮಾರಸ್ವಾಮಿ ಬೇಲೂರು ಹಾಗೂ ಸಕಲೇಶಪುರ ವಿಧಾನಸಭಾ ಕ್ಷೇತ್ರದಲ್ಲಿ ತಲಾ ಮೂರು ಬಾರಿ ಗೆದ್ದಿರುವುದೇ ಸಜ್ಜನ ರಾಜಕಾರಣಿ ಎಂಬುದಕ್ಕೆ ಸಾಕ್ಷಿ. ಕ್ಷೇತ್ರದಲ್ಲಿ ಯಾವುದೇ ಕೆಲಸ ಆಗಿಲ್ಲವೆಂದು ವಿರೋಧ ಪಕ್ಷಗಳು ಮಾಡುತ್ತಿರುವ ಆರೋಪದಲ್ಲಿ ಹುರುಳಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಕಲೇಶಪುರ ಕ್ಷೇತ್ರ ಎರಡು ತಾಲೂಕು, ಒಂದು ಹೋಬಳಿ ಕೇಂದ್ರವನ್ನು ಒಳಗೊಂಡು ಭೌಗೋಳಿಕವಾಗಿ ಸುಮಾರು 120 ಕಿ.ಮೀ. ವಿಸ್ತೀರ್ಣ ಹೊಂದಿದೆ. ಎಲ್ಲ ಗ್ರಾಮಗಳಲ್ಲಿಯೂ ಒಂದಲ್ಲಾ ಒಂದು ಅಭಿವೃದ್ಧಿ ಕೆಲಸಗಳು ಆಗಿವೆ. ಪಕ್ಕದ ಮೂಡಿಗೆರೆ, ಬೇಲೂರು, ಕೊಡಗು, ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಪರ್ಕ ಕಲ್ಪಿಸುವಂತಹ ಎಲ್ಲ ರಾಜ್ಯ ಹೆದ್ದಾರಿಗಳು ಅಭಿವೃದ್ಧಿಯಾಗಿವೆ” ಎಂದರು.

ಈ ಸುದ್ದಿ ಓದಿದ್ದೀರಾ? ಗದಗ | ಬಿಜೆಪಿ ಸಮಾವೇಶದಲ್ಲಿ ನಷ್ಟ ಅನುಭವಿಸಿದ್ದ ವ್ಯಾಪಾರಿಗೆ ₹35,000 ಪರಿಹಾರ

“ಹಲವು ಗ್ರಾಮಗಳಿಗೆ ಸೇತುವೆಗಳು, ರಸ್ತೆಗಳು, ಶಾಲಾ ಕಾಲೇಜುಗಳ ಕಟ್ಟಡಗಳು, ಮಿನಿ ಬಸ್ ನಿಲ್ದಾಣಗಳು, ತಡೆಗೋಡೆಗಳು, ಸಮುದಾಯ ಭವನಗಳು, ಹೈಮಾಸ್ಟ್ ವಿದ್ಯುತ್‌ ದೀಪಗಳೂ ಸೇರಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಿವೆ” ಎಂದು ಯಾದ್‌ಗಾರ್‌ ಇಬ್ರಾಹಿಂ ತಿಳಿಸಿದರು.

ಪುರಸಭಾ ಸದಸ್ಯ ಸಮೀರ್ ಖಾನ್‌, ಇಸ್ರಾರ್‌, ವಕೀಲ ಅಕ್ರಂ, ಮಿಲಾಫ್‌ ಖಲೀಲ್, ಆನೇಮಹಲ್‌ ಹಸೈನಾರ್, ಅಬ್ಬು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...