ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

Date:

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ ಕೈ ಜೋಡಿಸಿರುವುದು ತುಂಬಾ ತೃಪ್ತಿದಾಯಕವಾಗಿದೆ. ಈ ನಶೆ ಎಂಬುದು ಅನಾದಿ ಕಾಲದಿಂದಲೂ ನಮ್ಮ ಜತೆಗಿರುವ ಸಂಗತಿ. ಇದನ್ನು ಹಿತ ಮಿತದಿಂದ ಸನ್ಯಾಸಿಗಳು ಬಳಸುತ್ತಿದ್ದರು. ಆದರೆ ಪ್ರಸ್ತುತದಲ್ಲಿ ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ ಎಂದು ಗಾಂಧಿವಾದಿ ಪ್ರಸನ್ನ ಅಭಿಪ್ರಾಯ ವ್ಯಕ್ತಪಡಿಸಿದರು.

ಹಾಸನ ಜಿಲ್ಲೆಯ ಸಕಲೇಶಪುರ ನಗರದಲ್ಲಿ ಹಮ್ಮಿಕೊಂಡಿದ್ದ ʼಡ್ರಗ್ಸ್‌ ಮುಕ್ತ ಸಕಲೇಶಪುರʼ ಎರಡನೇ ವರ್ಷದ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಯಂತ್ರ ನಾಗರಿಕತೆಯ ಒಂದು ಲಕ್ಷಣ, ವೇಗ ಆವೇಗ, ಹಿಂಸೆ, ಅಸಮಾಧಾನ ಅಸಹನೆ ಎಲ್ಲವನ್ನೂ ಮೀರಲು ಮಾದಕತೆಗೆ ವಾಲುತ್ತಿದ್ದಾರೆ. ಮೊಬೈಲ್‌ ಬಳಕೆ ಕೂಡ ಒಂದು ಮಾದಕತೆ. ಬದುಕನ್ನು ಸಂಭ್ರಮಿಸಬೇಕಾದರೆ ಮಕ್ಕಳ ಹಿತರಕ್ಷಣೆ ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಜಾಗ್ರತರಾಗಬೇಕು. ಚಳವಳಿಗಾರರು ಮುನ್ನುಗ್ಗಬೇಕು, ಮನೆಯಲ್ಲಿ ಪೋಷಕರೂ ಕೂಡ ಮಕ್ಕಳಿಗೆ ಹೆಚ್ಚು ಸಮಯ ಕೊಡುವ ಮೂಲಕ ಅವರೊಟ್ಟಿಗೆ ತೊಡಗಿಸಿಕೊಳ್ಳಬೇಕು. ಎಲ್ಲ ಧರ್ಮಗಳೂ ಕೂಡ ವ್ಯಸನ ಮುಕ್ತವಾಗಿರುವುದನ್ನೇ ಬೋಧಿಸುತ್ತವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇವರನ್ನು ಪೀಠದಿಂದ ಕೆಳಗಿಟ್ಟು, ಅಮಲನ್ನು ಪೀಠದ ಮೇಲೆ ಕೂರಿಸಿದ್ದೇವೆ. ದೇವರು ದೇವರಾದರೆ, ಡ್ರಗ್ಸ್‌ ಒಂದು ಸೈತಾನ್‌ ಇದ್ದಂತೆ. ಎಲ್ಲ ಅಧಿಕಾರಿಗಳು ಹಾಗೂ ರಾಜಕಾರಣಿಗಳು, ಸಾರ್ವಜನಿಕರು ಎಚ್ಚೆತ್ತುಕೊಂಡು ಡ್ರಗ್ಸ್‌ ಪೆಡ್ಲರ್‌ಗಳ ಹೆಡೆಮುರಿ ಕಟ್ಟುವ ಕೆಲಸವನ್ನು ಮಾಡಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಅತಿಥಿಗಳು ಉಪವಿಭಾಗಾಧಿಕಾರಿ ಎಚ್‌ ಡಿ ರಾಜೇಶ್‌, ತಹಶೀಲ್ದಾರ್‌ ಸುಪ್ರೀತ, ಡಿವೈಎಸ್‌ಪಿ ಪ್ರಮೋದ್‌ ಕುಮಾರ್‌, ಕಾರ್ಯನಿರ್ವಹಣಾಧಿಕಾರಿ ಗಂಗಾಧರ್‌, ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪ, ‌ಧರ್ಮಸ್ಥಳ ನಶಾ ಮುಕ್ತ ಕೇಂದ್ರದ ಡಾ. ನವೀನ್‌ ಚಂದ್ರಶೇಕರ್ ಸೇರಿದಂತೆ ಬಹುತೇಕ ಸ್ಥಳೀಯರು ಇದ್ದರು. ಪತ್ರಕರ್ತ ಮಲ್ನಾಡ್‌ ಮೆಹಬೂಬ್‌ ಸ್ವಾಗತಿಸಿದರು. ಜೈ ಭೀಮ್‌ ಮಂಜು ಕಾರ್ಯಕ್ರಮ ನಿರೂಪಣೆ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...