ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

Date:

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು ತಡೆಯಬಹುದು. ಬಡಬಗ್ಗರ ಕುಟುಂಬಗಳು ಸೇರಿದಂತೆ ಯುವಜನರ ಭವಿಷ್ಯಕ್ಕೆ ಉತ್ತಮ ಸಮಾಜ ನಿರ್ಮಾಣವಾಗಲು ಮದ್ಯ ಸೇರಿದಂತೆ ಇತರೆ ವ್ಯಸನ ನಿಷೇಧಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆರ್ಥಿಕ ಯೋಜನೆ ನೀತಿ ಆಯೋಗದ ಉಪಾಧ್ಯಕ್ಷ ಹಾಗೂ ಡ್ರಗ್ಸ್‌ ಮುಕ್ತ ಕರ್ನಾಟಕ ಆಂದೋಲನದ ಪ್ರಮುಖರಾದ ಬಿ ಆರ್‌ ಪಾಟೀಲ್‌ ಅಭಿಪ್ರಾಯಪಟ್ಟರು.

ಹಾಸನ ಜಿಲ್ಲೆಯ ಸಕಲೇಶಪುರ ನಗರದಲ್ಲಿ ಮಾಜಿ ಶಾಸಕ ಎಚ್‌ ಎಂ ವಿಶ್ವನಾಥ್‌ ನೇತೃತ್ವದೊಂದಿಗೆ ಹಮ್ಮಿಕೊಂಡಿದ್ದ ʼಡ್ರಗ್ಸ್‌ ಮುಕ್ತ ಸಕಲೇಶಪುರʼ ಎರಡನೇ ವರ್ಷದ ಆಂದೋಲನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ವ್ಯಸನ ಮುಕ್ತ ಕಾರ್ಯಕ್ರಮ ಬಹಳ ಪ್ರಮುಖವಾದಂತ ಕಾರ್ಯಕ್ರಮ. ಅದಕ್ಕಾಗಿ ಸಕಲೇಶಪುರದ ಜನತೆ ಸಂಪೂರ್ಣವಾದ ಬೆಂಬಲವನ್ನು ನೀಡಿದಾಗ ಮಾತ್ರ ವ್ಯಸನ, ಡ್ರಗ್ಸ್‌ ಮುಕ್ತಗೊಳಿಸಲು ಸಾಧ್ಯ. ಕೇಂದ್ರದಿಂದ ಸುತ್ತೋಲೆ ಬಂದಿದ್ದು, ಮಾದಕ ಮುಕ್ತ ಸಮಾಜಕ್ಕೆ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿರುವುದು ಸಂತಸದ ವಿಷಯ. ಸಕಲೇಶಪುರದ ಜನತೆ ನಶಾಮುಕ್ತ ಮಾಡಲು ಹೊರಟಿರುವುದು ಶ್ಲಾಘನೀಯ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ಭಾಗದ ದಲಿತರ ಓಣಿಗಳಿಗೆ ಹೋದರೆ ಅಲ್ಲಿಯ ಹೆಣ್ಣುಮಕ್ಕಳು ನಿಮ್ಮ ಯಾವುದೇ ರೀತಿಯ ಗೋದಿ, ಹಣ, ಸೀರೆ ಏನೂ ನಮಗೆ ಬೇಡ. ನಮ್ಮ ಮನೆಯ ಗಂಡುಮಕ್ಕಳು ವ್ಯಸನಕ್ಕೆ ದಾಸರಾಗದಂತೆ ತಡೆಯಿರೆಂದು ತಾಯಂದಿರು ಬೇಡಿಕೊಳ್ಳುವಾಗ ನಮಗೆ ಕರುಳು ಕಿತ್ತುಬರುವಂತಾಗುತ್ತದೆ” ಎಂದು ಹೇಳಿದರು.

“ಅದೇ ನಿಟ್ಟಿನಲ್ಲಿ ನಾನು ನನ್ನ ಕ್ಷೇತ್ರದಲ್ಲಿ ಈ ಬಗ್ಗೆ ಕಠಿಣ ಕ್ರಮಕ್ಕೆ ಮುಂದಾದಾಗ, ಹೆಚ್ಚಿನ ಮದ್ಯ ಮಾರಾಟವಾಗುವುದಿಲ್ಲ ಅಲ್ಲಿನ ಎಸ್‌ಪಿಗೆ ನೋಟಿಸ್‌ ಬಂದಿದ್ದೂ ಇದೆ. ಮುಂದಿನ ದಿನಗಳಲ್ಲಿ ಹೀಗಾಗದೆ ಅಧಿಕಾರಿಗಳಿಗೆ ಸಂಪೂರ್ಣ ಬೆಂಬಲ ನೀಡುವ ಮೂಲಕ ವ್ಯಸನ ಮುಕ್ತ ಆಂದೋಲನಕ್ಕೆ ಪ್ರೋತ್ಸಾಹ ನೀಡಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ಅತಿಥಿಗಳಾದ ಉಪವಿಭಾಗಾಧಿಕಾರಿ ಎಚ್‌ ಡಿ ರಾಜೇಶ್‌, ತಹಶೀಲ್ದಾರ್‌ ಸುಪ್ರೀತ, ಡಿವೈಎಸ್‌ಪಿ ಪ್ರಮೋದ್‌ ಕುಮಾರ್‌, ಕಾರ್ಯ ನಿರ್ವಹಣಾಧಿಕಾರಿ ಗಂಗಾಧರ್‌, ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪ, ‌ಧರ್ಮಸ್ಥಳ ನಶಾ ಮುಕ್ತ ಕೇಂದ್ರದ ಡಾ. ನವೀನ್‌ ಚಂದ್ರಶೇಕರ್ ಸೇರಿದಂತೆ‌ ಪತ್ರಕರ್ತ ಮಲ್ನಾಡ್‌ ಮೆಹಬೂಬ್ ಬಹುತೇಕ ಸಾರ್ವಜನಿಕರು ಇದ್ದರು. ಜೈ ಭೀಮ್‌ ಮಂಜು ನಿರೂಪಣೆ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...