ಸಕಲೇಶಪುರ | ಕಾಂಗ್ರೆಸ್‌ನಿಂದ ಸ್ಥಳೀಯ ಮುಖಂಡರ ಕಡೆಗಣನೆ; ಬಂಡಾಯ ಅಭ್ಯರ್ಥಿ ಜೆ ಸಿ ರವಿ ಆರೋಪ

Date:

  • ʼಸಕಲೇಶಪುರ ಕ್ಷೇತ್ರಕ್ಕೆ ಮುರಳಿ ಮೋಹನ್ ಕೊಡುಗೆ ಏನೂ ಇಲ್ಲ‌ʼ
  • ʼಸಕಲೇಶಪುರ ಕ್ಷೇತ್ರದಲ್ಲಿ 68 ಸಾವಿರ ದಲಿತ ಮತದಾರರಿದ್ದಾರೆ

ಹಾಸನ ಜಿಲ್ಲೆಯಲ್ಲಿ ನಾಲ್ಕು ಲಕ್ಷ ಮಂದಿ ದಲಿತ ಮತದಾರರು ಇದ್ದರೂ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾದ ಸಕಲೇಶಪುರದಿಂದ ಹೊರ ರಾಜ್ಯದ ವ್ಯಕ್ತಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಿದೆ. ಈ ಕಾರಣಕ್ಕಾಗಿ ನಾನು ಬಂಡಾಯ ಅಭ್ಯರ್ಥಿಯಾಗಿ ಚುನಾವಣಾ ಕಣದಲ್ಲಿ ಉಳಿದಿದ್ದೇನೆ ಎಂದು ಜೆ ಸಿ ರವಿ ಹೇಳಿದರು.

ಸಕಲೇಶಪುರದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, “ಸಕಲೇಶಪುರ – ಆಲೂರು – ಕಟ್ಟಾಯ (ಎಸ್‌ಸಿ) ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಅಂದಾಜು 68 ಸಾವಿರ ಮಂದಿ ದಲಿತ ಸಮುದಾಯದ ಮತದಾರಿದ್ದಾರೆ. ಅವರಲ್ಲಿ ವಿದ್ಯಾವಂತರು, ಹೋರಾಟಗಾರರು, ಶಾಸಕರಾಗಲು ಅರ್ಹತೆ ಇರುವ ಸಾಕಷ್ಟು ಮಂದಿ ಇದ್ದಾರೆ” ಎಂದರು.

“ಜಿಲ್ಲಾ ವ್ಯಾಪ್ತಿಯಲ್ಲಿ ಅರ್ಹತೆ ಇರುವವರು ಹಲವರಿದ್ದರೂ, ಪಕ್ಷದಲ್ಲಿ ದಶಕಗಳಿಂದ ದುಡಿದವರನ್ನು ಕಡೆಗಣಿಸಿ ಮುರಳಿ ಮೋಹನ್ ಅವರಿಗೆ ಟಿಕೆಟ್ ನೀಡಿರುವ ಉದ್ದೇಶವೇನು” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುರಳಿ ಮೋಹನ್‌ ಅವರು ಕ್ಷೇತ್ರದಲ್ಲಾಗಲಿ, ಜಿಲ್ಲೆಯಲ್ಲಾಗಲಿ ಕಾಂಗ್ರೆಸ್ ಕಟ್ಟಿ ಬೆಳೆಸಿಲ್ಲ. ಕ್ಷೇತ್ರಕ್ಕೆ ಅವರ ಕೊಡುಗೆ ಏನೂ ಇಲ್ಲ. ಕೇವಲ ಮೂರು ವರ್ಷದಿಂದ ಓಡಾಡಿಕೊಂಡು ಇರುವ ಇವರಿಗೆ ಟಿಕೆಟ್ ನೀಡುವುದಾದರೆ 30 ರಿಂದ 40 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷಕ್ಕೆ ದುಡಿದಿರುವ ಈ ಜಿಲ್ಲೆಯ ದಲಿತ ಸಮುದಾಯದ ನಾಯಕರ ಗತಿ ಏನು?” ಎಂದು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ಹಾಸನ ಕ್ಷೇತ್ರ | ದಾಸ ಒಕ್ಕಲಿಗರ ನಡುವಿನ ಕಾದಾಟವಾದರೂ, ಮುಸ್ಲಿಂ ಮತದಾರರೆ ನಿರ್ಣಾಯಕ

“ಹಾಸನ ಜಿಲ್ಲೆಯ ದಲಿತ ಕಾಂಗ್ರೆಸ್ ಮುಖಂಡರು ಯಾರೂ ಚುನಾವಣೆಯಲ್ಲಿ ಸ್ಪರ್ಧಿಸಲು ಸಮರ್ಥರಿಲ್ಲ ಎಂದು ತಿಳಿದಿರುವ ಹೈಕಮಾಂಡ್‌ ಸ್ವಾಭಿಮಾನಿ ಕಾಂಗ್ರೆಸ್ ಕಾರ್ಯಕರ್ತರ ಮನಸ್ಸಿಗೆ ಧಕ್ಕೆ ತಂದಿದೆ. ದಲಿತರನ್ನು ಕೇವಲ ಕಾಂಗ್ರೆಸ್ ಮತದಾಳು ಎಂದು ತಿಳಿದಿರುವ ಹೈಕಮಾಂಡ್‌ಗೆ ನಮ್ಮಲ್ಲಿ ಸಮರ್ಥ ನಾಯಕರಿದ್ದಾರೆಂದು ತೋರಿಸಬೇಕಿದೆ” ಎಂದರು.

“ಆದ್ದರಿಂದ ಹಾಸನ ಜಿಲ್ಲೆಯ ದಲಿತ ಸಮುದಾಯದ ಎಲ್ಲ ಮುಖಂಡರು, ಕಾರ್ಯಕರ್ತರ ಪರವಾಗಿ ಹಾಗೂ ಈ ಕ್ಷೇತ್ರದ ದಲಿತರಿಗೆ ಅನ್ಯಾಯ ಮಾಡಿರುವ ಕಾಂಗ್ರೆಸ್‌ ಪಕ್ಷದ ಹೈಕಮಾಂಡ್‌ಗೆ ಸಡ್ಡು ಹೊಡೆದು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿದ್ದೇನೆ” ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್‌ ಮುಖಂಡರಾದ ಮಣಿಕಂಠ, ಆನಂದ, ಶಂಕ್ರಪ್ಪ, ಸೋಮಣ್ಣ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...