ಹಾಸನ | ಹೆದ್ದಾರಿ ಪಕ್ಕದಲ್ಲೇ ಪಟಾಕಿ ಮಾರಾಟಕ್ಕೆ ಅವಕಾಶ: ಹ್ಯೂಮನ್ ರೈಟ್ಸ್ ಡಿಫೆನ್ಸ್ ಆರ್ಗನೈಸೇಷನ್ ವಿರೋಧ

Date:

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ಕ್ಕೆ ಹೊಂದಿಕೊಂಡಿರುವ ರಸ್ತೆಯಲ್ಲಿ ಪಟಾಕಿ ಮಾರಾಟ ಮಾಡಲು ಕೊಟ್ಟಿರುವ ಜಾಗ ತೆರವುಗೊಳಿಸಿ ಬದಲಿ ವ್ಯವಸ್ಥೆ ಕಲ್ಪಿಸಬೇಕು ಎಂದು ಹ್ಯೂಮನ್ ರೈಟ್ಸ್ ಡಿಫೆನ್ಸ್ ಆರ್ಗನೈಸೇಷನ್ ಎಂದು ಒತ್ತಾಯಿಸಿದೆ.

ಈ ಸಂಬಂಧ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಉಪವಿಭಾಗಾಧಿಕಾರಿಗಳಿಗೆ ಹ್ಯೂಮನ್ ರೈಟ್ಸ್ ಡಿಫೆನ್ಸ್ ಆರ್ಗನೈಸೇಷನ್ ವತಿಯಿಂದ ಮನವಿ ಮಾಡಲಾಯಿತು.

ಸರಕಾರದ ನಿಯಮದ ಪ್ರಕಾರ ಸಿಡಿಮದ್ದುಗಳ ಮಾರಾಟ ಮಾಡಲು ಯಾವುದೇ ಜನ ಪ್ರದೇಶದಲ್ಲಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಪಟಾಕಿ ಮಾಡುವ ನಿಯಮ ಇಲ್ಲದಿದ್ದರೂ ಸಹ ಸಕಲೇಶಪುರ ತಾಲೂಕಿನಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಹೆದ್ದಾರಿ 75ರ ರಸ್ತೆಯ ಪಕ್ಕದಲ್ಲಿ ಪಟಾಕಿಯನ್ನು ಮಾರಾಟ ಮಾಡಲು ಸ್ಥಳವನ್ನು ನಿಗದಿಪಡಿಸಿರುವುದು ಸರಿಯಲ್ಲ ಎಂದು ಮುಖಂಡರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸರ್ಕಾರವು ಸಾರ್ವಜನಿಕರಿಗೆ ಪಟಾಕಿಯನ್ನು ಖರೀದಿಸಲು ಸ್ಥಳ ನಿಗದಿಪಡಿಸುವ ಸಮಯದಲ್ಲಿ ಸಾರ್ವಜನಿಕರಿಗೆ ತೊಂದರೆ ಆಗದಂತಹ ಸ್ಥಳವನ್ನು ಗುರುತಿಸಬೇಕಾಗಿರುತ್ತದೆ. ಸಕಲೇಶಪುರ ತಾಲೂಕಿನಲ್ಲಿ ಪಟಾಕಿ ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಟ್ಟಿರುವ ಸ್ಥಳವು ರಾಷ್ಟ್ರೀಯ ಹೆದ್ದಾರಿ 75 ಕ್ಕೆ ಹೊಂದಿಕೊಂಡಿರುವುದರಿಂದ ಸಾರ್ವಜನಿಕ ಪಾದಚಾರಿಗಳಿಗೆ ತೊಂದರೆ ಆಗುತ್ತದೆ ಎಂದು ತಿಳಿಸಿದರು.

ಪಟಾಕಿ ಮಾರಾಟಕ್ಕೆ ಕೊಟ್ಟಿರುವ ಸ್ಥಳವು 100 ಮೀಟರ್ ಒಳಗೊಂಡಿರುವ ವಾಸವಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ವಾಸವಿ ಪ್ರೌಢಶಾಲೆ ಇರುವುದರಿಂದ ಸಾರ್ವಜನಿಕವಾಗಿ ತೊಂದರೆ ಆಗುತ್ತದೆ. ಪಟಾಕಿಯನ್ನು ಮಾರಾಟ ಮಾಡುತ್ತಿರುವ ಅಂಗಡಿ ಮಳಿಗೆಗಳನ್ನು ತೆರವುಗೊಳಿಸಿ ಅಂಗಡಿ ಮಳಿಗೆಗಳನ್ನು ತೆರವುಗೊಳಿಸಿ ಸಾರ್ವಜನಿಕರ ಜೀವನಕ್ಕೆ ಯಾವುದೇ ತೊಂದರೆಯಾಗದಂತೆ ಬದಲಿ ಸೂಕ್ತ ಸ್ಥಳವನ್ನು ನಿಗದಿಪಡಿಸಬೇಕು ಎಂದು ಹ್ಯೂಮನ್ ರೈಟ್ಸ್ ಡಿಫೆನ್ಸ್ ಆರ್ಗನೈಸೇಷನ್ ಅಧಿಕಾರಿಗಳಲ್ಲಿ ಮನವಿಯ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿದ್ದೀರಾ: ತೆಲಂಗಾಣ | ಮಗ ಮೃತಪಟ್ಟಿರುವುದು ತಿಳಿಯದೆ 4 ದಿನ ಶವದೊಂದಿಗೆ ಕಳೆದ ಅಂಧ ದಂಪತಿ!

ಒಂದು ವೇಳೆ ಈ ಪಟಾಕಿ ಮಾರಾಟದಿಂದ ಸಾರ್ವಜನಿಕರಿಗೆ ಯಾವುದೇ ರೀತಿಯ ಅನಾಹುತವಾದರೆ ತಾಲೂಕು ಆಡಳಿತವೇ ಸಂಪೂರ್ಣ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಈ ಸಂದರ್ಭದಲ್ಲಿ ಹ್ಯೂಮನ್ ರೈಟ್ಸ್ ಡಿಫೆನ್ಸ್ ಆರ್ಗನೈಸೇಷನ್ ಹಾಸನ ಜಿಲಾಧ್ಯಕ್ಷ ಜೀವನ್ ಗೌಡ, ತಾಲೂಕು ಅಧ್ಯಕ್ಷ ವಿಜಯ್ ಕುಮಾರ್, ಉಪಾಧ್ಯಕ್ಷ ಪ್ರದೀಪ್ ಮಾವಿನಹಳ್ಳಿ, ಮಹೇಶ್, ಬಾಲರಾಜ್, ಸ್ಮಿಥನ್, ಮಂಜು, ಪ್ರದೀಪ್ ಇನ್ನಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...