ಉಡುಪಿ | ಸಾಲಿಗ್ರಾಮ ಪಾರಂಪಳ್ಳಿಯಲ್ಲಿ ಘನ ತ್ಯಾಜ್ಯ ಘಟಕದ ಉದ್ಘಾಟನೆಗೆ ಸ್ಥಳೀಯರ ವಿರೋಧ – ರಾತ್ರೋ ರಾತ್ರಿ ಪ್ರತಿಭಟನೆ ಆರಂಭ

Date:

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಾರಂಪಳ್ಳಿ ಗ್ರಾಮದ ಸರ್ವೇ ನಂ. 104/24, 25ರಲ್ಲಿ ನಿರ್ಮಿತವಾಗಿರುವ ಘನ ತ್ಯಾಜ್ಯ ಘಟಕದ ಉದ್ಘಾಟನೆ ನಾಳೆ (ಅಕ್ಟೋಬರ್ 25) ನಡೆಯಲಿದ್ದು, ಇದಕ್ಕೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

WhatsApp Image 2025 10 24 at 10.31.22 AM

ಗ್ರಾಮಸ್ಥರು ರಾತ್ರೋ ರಾತ್ರಿ ಘಟಕದ ಮುಂಭಾಗದಲ್ಲೇ ಕೂತು ಪ್ರತಿಭಟನೆ ಆರಂಭಿಸಿದ್ದು, ನಾಳೆ ಸಂಜೆವರೆಗೂ ಶಾಂತಿಯುತ ಪ್ರತಿಭಟನೆ ಮುಂದುವರಿಯಲಿದೆ ಎಂದು ಪ್ರತಿಭಟನೆಯ ನೇತೃತ್ವ ವಹಿಸಿರುವ ಕೋಟ ನಾಗೇಂದ್ರ ಪುತ್ರನ್‌ ತಿಳಿಸಿದ್ದಾರೆ.

ಮಾಧ್ಯಮದ ಜೊತೆ ಮಾತನಾಡಿದ ಅವರು, ಕಳೆದ 5-6 ತಿಂಗಳಿಂದ ಸ್ಥಳೀಯರು ಈ ಘಟಕದ ವಿರುದ್ಧ ನಿರಂತರವಾಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದರೂ, ಅಧಿಕಾರಿಗಳು ಮತ್ತು ಪಟ್ಟಣ ಪಂಚಾಯತ್ ಸಾರ್ವಜನಿಕರ ಅಭಿಪ್ರಾಯವನ್ನು ಕಡೆಗಣಿಸಿ ಉದ್ಘಾಟನೆಗೆ ಮುಂದಾಗಿದ್ದಾರೆ ಎಂದು ಆರೋಪಿಸಿದರು. “ಈ ಘಟಕ ಸುತ್ತಮುತ್ತಲಿನ ಕೃಷಿಭೂಮಿಗೆ ಹಾನಿ ಉಂಟುಮಾಡುವ ಜೊತೆಗೆ ಪರಿಸರ ಮಾಲಿನ್ಯ ಮತ್ತು ಸಾಂಕ್ರಾಮಿಕ ರೋಗಗಳ ಸಾಧ್ಯತೆ ಇದೆ. ಸಾರ್ವಜನಿಕರ ಜೀವಮಾನಕ್ಕೆ ಅಪಾಯ ಉಂಟುಮಾಡುವಂತ ಈ ಯೋಜನೆಯನ್ನು ತಕ್ಷಣ ನಿಲ್ಲಿಸಬೇಕು,” ಎಂದು ಅವರು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 10 24 at 10.31.05 AM

ಈಗಾಗಲೇ ಪ್ರತಿಭಟನೆಗೆ ನೂರಾರು ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗಿಯಾಗಿದ್ದು, ರಾತ್ರಿ ಪೂರ್ತಿ ಪ್ರತಿಭಟನೆ ಮುಂದುವರಿಯುತ್ತದೆ. ನಾಳೆ ಬೆಳಿಗ್ಗೆ 8 ಗಂಟೆಗೆ ಇನ್ನಷ್ಟು ಗ್ರಾಮಸ್ಥರು ಸೇರಿ ಪ್ರತಿಭಟನೆಯನ್ನು ಬಲಪಡಿಸುವ ನಿರೀಕ್ಷೆಯಿದೆ. ಸಂಜೆ 5-00 ಗಂಟೆಯವರೆಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆಯನ್ನು ನಡೆಸುತ್ತೇವೆ ಎಂದು ಹೇಳಿದರು.

WhatsApp Image 2025 10 24 at 10.31.23 AM

ಸಾಮಾಜಿಕ ಹೋರಾಟಗಾರ ದಿನೇಶ್ ಗಾಣಿಗ ಮಾತನಾಡಿ, “ಈ ಪ್ರದೇಶವು ಪರಿಸರ ಸಂವೇದನಾಶೀಲವಾದ ‘CRZ’ ವ್ಯಾಪ್ತಿಗೆ ಒಳಪಡುವುದರಿಂದ ಇಲ್ಲಿ ಯಾವುದೇ ಕಟ್ಟಡ ನಿರ್ಮಾಣ ಕಾನೂನಿನ ಪ್ರಕಾರ ಸಾಧ್ಯವಿಲ್ಲ. ಇದೇ ಸ್ಥಳದಲ್ಲಿ ಹಿಂದೆ ಮೀನು ಸಂಸ್ಕರಣ ಘಟಕವನ್ನು ಆರಂಭಿಸಲು ಪ್ರಯತ್ನಿಸಿದಾಗಲೂ ಸಾರ್ವಜನಿಕರ ವಿರೋಧದಿಂದ ಅದು ಸ್ಥಗಿತಗೊಂಡಿತ್ತು. ಇಂತಹ ಪ್ರದೇಶದಲ್ಲಿ ತ್ಯಾಜ್ಯ ಘಟಕ ಸ್ಥಾಪನೆ ಅಕ್ರಮವಾಗಿದೆ,” ಎಂದು ಹೇಳಿದರು.

WhatsApp Image 2025 10 24 at 10.31.04 AM 2

ಗ್ರಾಮಸ್ಥರ ಶಾಂತಿಯುತ ಪ್ರತಿಭಟನೆಯ ಮಧ್ಯೆ ಅಧಿಕಾರಿಗಳು ಮತ್ತು ಪಟ್ಟಣ ಪಂಚಾಯತ್‌ ವತಿಯಿಂದ ಘಟಕ ಉದ್ಘಾಟನೆ ನಡೆಯುತ್ತದೆಯೇ ಎಂಬುದು ಈಗ ಕುತೂಹಲಕ್ಕೆ ಕಾರಣವಾಗಿದೆ.

ಎ೫ಡ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...