ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಯ ವತಿಯಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ

Date:

ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆ ವತಿಯಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಸಾಮಾಜಿಕ ಕಾರ್ಯಕರ್ತರಾದ ಪೀರು ಸಾಹೇಬ್ ಧ್ವಜಾರೋಹಣ ನಡೆಸಿ ಶುಭ ಹಾರೈಸಿದರು.

ನಂತರ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಮುಹಮ್ಮದೀಯ ಎಜುಕೇಶನ್ ಟ್ರಸ್ಟ್’ನ ಪ್ರಧಾನ ಕಾರ್ಯದರ್ಶಿ ಅಕ್ಬರ್ ಅಲಿ, “ಈ ದೇಶವು ಸ್ವಾತಂತ್ರ್ಯಗೊಂಡು 79 ವರ್ಷ ಕಳೆದಿದೆ. ಈ ದೇಶದ ಸ್ವಾತಂತ್ರ್ಯಕ್ಕಾಗಿ, ಗಡಿ, ಧರ್ಮ, ಭಾಷೆಯ ಬೇಧ ಮರೆತು ಸರ್ವರು ಒಗ್ಗಟ್ಟಾಗಿ ಹೋರಾಟ ನಡೆಸಿ ಬ್ರಿಟಿಷರ ಗುಲಾಮಗಿರಿಯಿಂದ ಸ್ವತಂತ್ರರಾದೆವು. ಆದರೆ ಇಂದು ಗಡಿ, ಭಾಷೆ, ಹಿಂದೂ-ಮುಸ್ಲಿಮ್ ಹೆಸರಿನಲ್ಲಿ ದೇಶವನ್ನು ವಿಭಜಿಸುವ ಪ್ರಯತ್ನಗಳು ನಡೆಯುತ್ತಿದ್ದು ಇದು ಆಘಾತಕಾರಿಯಾಗಿದೆ” ಎಂದರು.

“ಈ ದೇಶದಲ್ಲಿ ಇಂದು ಕೂಡ ಬಡತನದ ಕಾರಣ ಸರಿಯಾದ ಆಹಾರ, ಬಟ್ಟೆ, ಸೂರಿಲ್ಲದೆ ಬದುಕುತ್ತಿರುವುದನ್ನು ನೋಡಿದಾಗ ಆಡಳಿತ ವರ್ಗದ ಮೇಲೆ ಹಲವು ಪ್ರಶ್ನೆಗಳು ಸಹಜವಾಗಿ ಏಳುತ್ತದೆ. ಸರಕಾರವನ್ನು ಪ್ರಶ್ನಿಸಿದವರನ್ನು ಜೈಲಿನಲ್ಲಿ ಇಡಲಾಗಿದೆ. ಆಡಳಿತ ಸುಧಾರಣೆಗೆ, ಈ ದೇಶದ ಭವಿಷ್ಯದ ಹಿತದೃಷ್ಟಿಯಿಂದ ಮಾತನಾಡಿದವರನ್ನು ಬಂಧಿಸಿಡಲಾಗಿದೆ. ಇಂತಹ ವಿಷಮ ಪರಿಸ್ಥಿತಿಯಿಂದ ಹೊರಬಂದು ಸ್ವಾತಂತ್ರ್ಯ ನಿಜ ಆಶಯದಂತೆ ಮುನ್ನಡೆಯುವಂತಾಗಲಿ” ಎಂದು ಆಶಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಶಾಲೆಯ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಅತಿಥಿಗಳನ್ನು ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳು ದೇಶ ಭಕ್ತಿ ಗೀತೆಗಳನ್ನು ಹಾಡಿದರು.

ಈ ಸಂದರ್ಭದಲ್ಲಿ ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ಇದ್ರಿಸ್ ಹೂಡೆ, ಟ್ರಸ್ಠಿ ಉಮರ್ ಉಸ್ತಾದ್,ಸಂಸ್ಥೆಯ ಆಡಾಳಿತಾಧಿಕಾರಿಯಾದ ಅಸ್ಲಮ್ ಹೈಕಾಡಿ, ಅಕಾಡೆಮಿಕ್ ಮುಖ್ಯಸ್ಥರಾದ ಹಸೀಬ್ ತರಫ್ದಾರ್, ಇಸ್ಲಾಮಿಕ್ ಸ್ಟಡೀಸ್ ಮುಖ್ಯಸ್ಥ ಮೌಲನ ಶಹೀದ್ ನದ್ವಿ, ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶಬೀನಾ, ಪಿಯುಸಿಯ ಪ್ರಾಂಶುಪಾಲರಾದ ದಿವ್ಯ ಪೈ, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಸುನಂದಾ, ಹಿರಿಯ ಪ್ರಾಥಮಿಕ ಶಾಲೆಯ ಸಹಾಯಕ ಮುಖ್ಯೋಪಾಧ್ಯಾಯರಾದ ಯಾಸ್ಮೀನ್ , ಕಿರಿಯ ಪ್ರಾಥಮಿಕ ಶಾಲೆಯ ಸಹಾಯಕ ಮುಖ್ಯೋಪಾಧ್ಯಾಯರಾದ ಸಾದಾತ್ ಹಾಗೂ ಶಿಕ್ಷಕರು, ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಹನಿಯಾ ಮರ್ಯಮ್ ನಿರೂಪಿಸಿದರು. ವಿದ್ಯಾರ್ಥಿನಿ ಟಿ.ಎಚ್.ಮುಸ್ಕನ್ ಸ್ವಾಗತಿಸಿದರು. ಶಿಫಾ ಶೆರಿನ್ ಧನ್ಯವಾದವಿತ್ತರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...