ಜನಪ್ರತಿನಿಧಿಗಳು ಸಂವಿಧಾನ ಅರ್ಥೈಸಿಕೊಂಡಿದ್ದರೆ ದೇಶ ಕಲ್ಯಾಣ ನಾಡಾಗುತ್ತಿತ್ತು: ಸಾಣೇಹಳ್ಳಿ ಸ್ವಾಮೀಜಿ

Date:

ನಮ್ಮ ಜನಪ್ರತಿನಿಧಿಗಳು ಸಂವಿಧಾನದ ಆಶಯಗಳನ್ನು ಅರ್ಥ ಮಾಡಿಕೊಂಡಿದ್ದರೆ, ನಮ್ಮ ದೇಶ ಕಲ್ಯಾಣ ನಾಡಾಗುತ್ತಿತ್ತು. ಜನರ ಸಂಕಷ್ಟಗಳನ್ನು ಬಗೆಹರಿಸಬಹುದಾಗಿತ್ತು. ಆದರೆ, ಸಂವಿಧಾನ ರಚನೆಯಾಗಿ 75 ವರ್ಷಗಳಾದರೂ ಇನ್ನೂ ನಮ್ಮ ಗ್ರಾಮೀಣ ಪ್ರದೇಶಗಳು ಅಭಿವೃದ್ಧಿಯಾಗದೇ ಇರುವುದು ವಿಷಾದದ ಸಂಗತಿ ಎಂದು ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಸಾಣೇಹಳ್ಳಿಯಲ್ಲಿ ಆಯೋಜಿಸಿದ್ದ ಸಂವಿಧಾನ ಜಾಗೃತ ಜಾಥಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಸಂವಿಧಾನ ಜಾರಿಗೆ ಬಂದು 75 ವರ್ಷಗಳಾದವು. 75 ವರ್ಷಗಳ ಸಿಂಹಾವಲೋಕನ ಮಾಡಿ, ನಮ್ಮ ಸಂವಿಧಾನಕ್ಕೆ ಅನುಗುಣವಾಗಿ ನಮ್ಮ ರಾಜಕೀಯ ನೇತಾರರು, ಜನಪ್ರತಿನಿಧಿಗಳು ನಡೆದುಕೊಳ್ಳುತ್ತಿದ್ದಾರೆಯೇ ಎಂದು ಪ್ರಶ್ನಿಸಿದರೆ, ಉತ್ತರ ಹೇಳೋದು ತುಂಬಾ ಕಷ್ಟ. ನಾವು ಆಯ್ಕೆ ಮಾಡಿ ಕಳಿಸುವಂಥ ಬಹುತೇಕ ಜನಪ್ರತಿನಿಧಿಗಳಿಗೆ ಸಂವಿಧಾನದ ಪರಿಚಯವೇ ಇಲ್ಲ. ಇಡೀ ಸಂವಿಧಾನವನ್ನು ಓದಿಕೊಂಡ ಜನಪ್ರತಿನಿಧಿಗಳು ಬೆರಳೆಣಿಕೆಯಷ್ಟು ಮಾತ್ರ” ಎಂದರು.

“ಜನಪ್ರನಿಧಿಯಾಗಲಿಕ್ಕೆ ಅರ್ಹತೆ ಇರಬೇಕು. ಅದರ ಬದಲಾಗಿ ಈಗ ಪ್ರಧಾನವಾಗಿರುವುದು ಜಾತಿ, ಹಣ, ಅಧಿಕಾರ. ಹಾಗಾಗಿ ಅವಿದ್ಯಾವಂತರು ಕೂಡ ನಮ್ಮ ಜನಪ್ರತಿನಿಧಿಗಳಾಗಿರುವ ನಿದರ್ಶನಗಳು ಬೇಕಾದಷ್ಟಿವೆ. ಅವಿದ್ಯಾವಂತರು ಜನಪ್ರನಿಧಿಗಳಾದಾಗ ಹೇಗೆ ನಮ್ಮ ಸಂವಿಧಾನವನ್ನು ಅಧ್ಯಯನ ಮಾಡಲಿಕ್ಕೆ ಸಾಧ್ಯ. ನಮ್ಮ ಹಕ್ಕು, ಕರ್ತವ್ಯ, ಜವಾಬ್ದಾರಿಗಳೇನು. ಆಡಳಿತ ನಿರ್ವಹಿಸುವಾಗ ಹೇಗೆ ನಾವು ವರ್ತನೆ ಮಾಡಬೇಕು ಎನ್ನುವ ಅಂಶಗಳು ಪರಿಚಯವಿರದೇ ಮನಸ್ಸಿಗೆ ಬಂದ ಹಾಗೆ ನಡೆದುಕೊಳ್ಳುತ್ತಿದ್ದಾರೆ” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರೈತರ ಬೇಡಿಕೆಗಳು ಈಡೇರಿಲ್ಲ. ಹರಿಯಾಣ, ಪಂಜಾಬ್ ರಾಜ್ಯದ ಭಾಗದ ರೈತರು ನಮಗೆ ಬೆಲೆಯನ್ನು ನಮ್ಮ ಆಶಯಗಳನ್ನು ಈಡೇರಿಸಿ ಎಂದು ಬಹುದೊಡ್ಡ ಹೋರಾಟಕ್ಕೆ ಸನ್ನದ್ಧರಾಗಿ ಬಂದರೆ ಆ ಹೋರಾಟವನ್ನು ತಡೆಗಟ್ಟಲಿಕ್ಕೆ ಏನು ಬೇಕೋ ಆ ವ್ಯವಸ್ಥೆಯನ್ನು ಸರಕಾರ ಮಾಡಿತು. ಇದು ಪ್ರಜಾಪ್ರಭುತ್ವದ ಸೋಲು. ಹಾಗಾಗಿ ಪ್ರಜೆಗಳು ಯೋಗ್ಯ ಜನಪ್ರತಿನಿಧಿಯನ್ನು ಆಯ್ಕೆ ಮಾಡಿದರೆ ಒಳ್ಳೆಯ ಆಡಳಿತವನ್ನು ಕೊಡಲಿಕ್ಕೆ ಸಾಧ್ಯ. ಆದರ್ಶ ಜನಪ್ರತಿನಿಧಿ ಇಲ್ಲದಿದ್ದರೆ ಆದರ್ಶ ರಾಜ್ಯವೂ ಇಲ್ಲ. ಸಂವಿಧಾನದ ಜಾಗೃತ ಅಭಿಯಾನ ಎಲ್ಲ ಅಭಿಯಾನದಂತೆ ಆಗಬಾರದು. ಅಭಿಯಾನದ ಮೂಲಕ ಪಂಚಾಯಿತಿಯವರು, ಗ್ರಾಮ ವಿದ್ಯಾರ್ಥಿಗಳು, ಸಾರ್ವಜನಿಕರು ಸ್ವಲ್ಪಮಟ್ಟಿಗಾದರೂ ಸಂವಿಧಾನದ ಆಶಯಗಳನ್ನು ಅರ್ಥಮಾಡಿಕೊಂಡರೆ ಚುನಾವಣೆಗಳಲ್ಲಿ ಇದ್ದವರಲ್ಲಿ ಯೋಗ್ಯರನ್ನು ಆಯ್ಕೆ ಮಾಡಲಿಕ್ಕೆ ಅವಕಾಶವಾಗುವುದು. ಸಂವಿಧಾನದ ಆಶಯಗಳಿಗೆ ಧಕ್ಕೆ ಬಾರದ ಹಾಗೆ ನಡೆದುಕೊಳ್ಳಬೇಕು” ಎಂದು ಕರೆ ನೀಡಿದರು.

“ಸಂವಿಧಾನದ ಆಶಯಗಳನ್ನು 12ನೆಯ ಶತಮಾನದಲ್ಲೇ ಜಾರಿಗೆ ತಂದಿದ್ದರು. ಕರ್ನಾಟಕ ಸರಕಾರ ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಅಂತ ಒಂದು ನಿರ್ಣಯ ಮಾಡಿದೆ. ಸಾಂಸ್ಕೃತಿಕ ನಾಯಕನ ಭಾವಚಿತ್ರವನ್ನು ಎಲ್ಲ ಶಾಲಾ, ಕಾಲೇಜು, ಸರಕಾರಿ ಆಡಳಿತ ಕಛೇರಿ, ಮಠ ಮಂದಿರಗಳಲಿ ಹಾಕಬೇಕು ಎನ್ನುವ ನಿರ್ಣಯವನ್ನು ಸರಕಾರಿ ಮಾಡಿರುವಂಥದ್ದು ಅಭಿನಂದನಾರ್ಹ. ಬಸವಣ್ಣ ಅಂದಾಕ್ಷಣ ಕಿರೀಟ ಬಸವಣ್ಣ ಅಂತ ಹೇಳ್ತಾರೆ. ಆದರೆ ಬಸವಣ್ಣನವರಿಗೆ ಕಿರೀಟದ ಬಗ್ಗೆ ವ್ಯಾಮೋಹ ಇರಲಿಲ್ಲ. ಸರಕಾರ ತುಂಬಾ ಯೋಚನೆ ಮಾಡಿ ತಾಳೆಗರಿಯಲ್ಲಿ ಬರೆಯುವಂಥ ಬಸವಣ್ಣನ ಭಾವಚಿತ್ರ ಹಾಕಬೇಕೆಂದು ಜಾರಿಯಲ್ಲಿ ತಂದಿದೆ. ಹಾಗಾಗಿ 17 ತಾರೀಖು ಅದೊಂದು ಸಂಭ್ರಮದ ದಿನಾಚರಣೆ ಆಗಬೇಕು. ಅವತ್ತು ಬಸವಣ್ಣನವರ ವಚನ ಓದುವುದು. ಚರ್ಚೆ ಮಾಡುವುದು, ಬಸವತತ್ವವನ್ನು ತಿಳಿದುಕೊಳ್ಳುವ ಕೆಲಸ ಆಗಬೇಕು. ಸಾಣೇಹಳ್ಳಿಯ ಮಠದಲ್ಲೂ ದಿನಾಂಕ 17 ರಂದು ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕನ ಭಾವಚಿತ್ರವಿಟ್ಟು ಅದಕ್ಕೆ ಪುಷ್ಪವನ್ನು ಅರ್ಪಿಸಿ ವಚನಗಳನ್ನು ಓದಿ ಕಾರ್ಯಕ್ರಮ ನಡೆಸಲಾಗುವುದು” ಎಂದರು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಶಶಿಧರ, ಉಪನ್ಯಾಸಕ ಕಾಂತರಾಜ್, ತಾಲೂಕು ನೌಕರರ ಸಂಘದ ಅಧ್ಯಕ್ಷ ಗಂಗಾಧರ, ಗ್ರಾಮ ಪಂಚಾಯತಿ ಅಧ್ಯಕ್ಷೆ ಪ್ರೇಮ ಬಸವರಾಜ್, ಪಿಡಿಓ ಸ್ವಾಮಿ, ನಿವೃತ್ತ ಶಿಕ್ಷಕ ವೀರಭದ್ರಪ್ಪ . ಮಲ್ಲಿಕಾರ್ಜುನ್ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...