2019ರಲ್ಲೇ ಪೀಠ ತ್ಯಾಗದ ಬಗ್ಗೆ ಪತ್ರ ಬರೆದಿದ್ದ ಸಾಣೇಹಳ್ಳಿ ಶ್ರೀ

Date:

ಸಿರಿಗೆರೆ ಶ್ರೀ ತರಳಬಾಳು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹಾಗೂ ಸಾಣೇಹಳ್ಳಿ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಪೀಠದಿಂದ ನಿವೃತ್ತಿ ಘೋಷಿಸಿ ಮುಂದಿನ ಮರಿ ಅಥವಾ ಉತ್ತರಾಧಿಕಾರಿ ಘೋಷಣೆ ಮಾಡಬೇಕು. ಶ್ರೀಮಠದ ಏಕವ್ಯಕ್ತಿ ಡೀಡ್ ರದ್ದುಪಡಿಸಿ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿಗಳ ಮೂಲ ಬೈಲಾ ಯಥವತ್ತಾಗಿ ಜಾರಿಗೊಳಿಸಬೇಕು ಎಂದು ಸಾದು ಲಿಂಗಾಯತ ಸಮಾಜ ನಿರ್ಣಯ ದಾವಣಗೆರೆಯಲ್ಲಿ ಭಾನುವಾರ ಸಭೆ ನಡೆಸಿ, ಕೈಗೊಂಡಿದೆ.

ಆದರೆ, 2019ರಲ್ಲೇ ಪೀಠ ತ್ಯಾಗದ ಬಗ್ಗೆ ಸಾಣೇಹಳ್ಳಿ ಶ್ರೀ ಪತ್ರ ಬರೆದಿರುವ ವಿಚಾರ ಮುನ್ನೆಲೆಗೆ ಬಂದಿದೆ.

ಸಾಣೇಹಳ್ಳಿ ಶ್ರೀಗಳು 2019ರ ನಾಟಕೋತ್ಸವದಲ್ಲಿ ತಮ್ಮನ್ನು ಪೀಠದ ಜವಾಬ್ದಾರಿಯಿಂದ ಬಿಡುಗಡೆಗೊಳಿಸಬೇಕೆಂದು ಸಂಘಕ್ಕೆ ಹಾಗೂ ಮೂಲ ಪೀಠಾಧಿಪತಿಗಳಿಗೆ ಪತ್ರ ಬರೆದಿದ್ದರು. ಈ ವಿಚಾರವು ಭಾನುವಾರ ದಾವಣಗೆರೆ ಹೊರವಲಯದ ಅಪೂರ್ವ ರೆಸಾರ್ಟ್‌ನಲ್ಲಿ ಅಖಿಲ ಭಾರತ ವೀರ‍ಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ, ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲೂ ಪ್ರಸ್ತಾಪವಾಗಿರುವುದಾಗಿ ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಾವಣಗೆರೆಯಲ್ಲಿ ನಿನ್ನೆ “ತರಳಬಾಳು ಪೀಠ: ಅಂದು- ಇಂದು ಮುಂದು” ಎಂಬ ವಾಕ್ಯದಡಿ ಶ್ರೀಮಠದ ಸದ್ಭಕ್ತರ ಸಮಾಲೋಚನಾ ಸಭೆ ನಡೆಸಲಾಗಿದೆ.

pro 1

ಶಿವಕುಮಾರ ಶ್ರೀಗಳು ವಿಲ್ ಮಾಡಿರುವಂತೆ ಹಾಗೂ ಬೈಲಾ ಪ್ರಕಾರ ಬದಲಾವಣೆ ಮಾಡಿ ಹೊಸ ಪೀಠಾಧಿಪತಿಗಳ ನೇಮಕ ಆಗಬೇಕು. ಚಿತ್ರದುರ್ಗದ ಸಿರಿಗೆರೆ ಪೀಠಾಧಿಪತಿ ಹಾಗೂ ಸಾಣೇಹಳ್ಳಿಯ ಪೀಠಾಧಿಪತಿಗಳ ಬದಲಾವಣೆ ಆಗಬೇಕು. ಈಗಿರುವ ಇಬ್ಬರೂ ಶ್ರೀಗಳು ನಿವೃತ್ತಿ ಘೋಷಿಸಬೇಕು. 60 ವರ್ಷ ದಾಟಿದ ಬಳಿಕ ಪೀಠಾಧಿಪತಿ ಸ್ಥಾನ ಬಿಟ್ಟುಕೊಡಬೇಕೆಂಬ ನಿರ್ಣಯಕ್ಕೆ ಇಬ್ಬರೂ ಶ್ರೀಗಳು ಬದ್ಧರಾಗಬೇಕು ಎಂಬ ನಿರ್ಣಯವನ್ನು ಸಾದು ಲಿಂಗಾಯತ ಒಕ್ಕೂಟ ಅಂಗೀಕರಿಸಿದೆ.

1001199892

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ್ದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, “ಈ ಹಿಂದೆಯೇ ಸಿರಿಗೆರೆ ಶ್ರೀಗಳು ಪೀಠ ತ್ಯಜಿಸುವ ಮಾತನಾಡಿದ್ದರು. ಆದರೆ, ಭಕ್ತರ ಒಕ್ಕೊರಲ ಒತ್ತಾಯದ ಮೇರೆಗೆ ಮುಂದುವರಿದಿದ್ದರು. ಶ್ರೀಗಳೇ ಬೇಡ ಎಂದರೂ ಮುಗ್ಧ ಭಕ್ತರು ಇದಕ್ಕೆ ತಡೆಯೊಡ್ಡಿದ್ದರು. ಇಂಥ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಶ್ರೀಗಳ ಮನವೊಲಿಸಿದ್ದರು. ಈಗ ಹಳೆಯ ಕಥೆ ಇದು. ಮೂರು ದಶಕಗಳ ಹಿಂದೆ ಮಾಡಿಸಿಕೊಂಡ ವ್ಯಕ್ತಿಯೊಬ್ಬರ ಡೀಡ್ ವಿಚಾರವೂ ಯಾರಿಗೂ ಗೊತ್ತಿರಲಿಲ್ಲ. ಈಗ ವಿಚಾರ ಬೆಳಕಿಗೆ ಬಂದಿದ್ದು, ಕೋರ್ಟ್ ನಲ್ಲಿ ಈ ವಿಷಯ ಇದೆ” ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಆಗಸ್ಟ್ 18ರಂದು ಸಿರಿಗೆರೆ ಶ್ರೀಗಳನ್ನು ಭೇಟಿ ಮಾಡಿ ಒಕ್ಕೂಟದ ನಿರ್ಣಯ ತಿಳಿಸೋಣ. ಈ ತೀರ್ಮಾನಕ್ಕೆ ಬದ್ಧರಾದರೆ ಸರಿ, ಇಲ್ಲದಿದ್ದರೆ ಒಕ್ಕೂಟದ ಮುಂದಿನ ನಡೆ ಏನಾಗಿರಬೇಕು ಎಂಬ ಕುರಿತಂತೆ ಸುದೀರ್ಘವಾಗಿ ಮತ್ತೊಮ್ಮೆ ಸಮಾಲೋಚನೆ ನಡೆಸಿ ಅಂತಿಮ ತೀರ್ಮಾನಕ್ಕೆ ಬರೋಣ ಎಂದು ಹೇಳಿದರು. ಇದಕ್ಕೆ ಎಲ್ಲರೂ ಒಪ್ಪಿಗೆ ಸೂಚಿಸಿದರು ಎನ್ನಲಾಗಿದೆ.

ಸಿರಿಗೆರೆ ಮಠಕ್ಕೆ ಕೋಟ್ಯಂತರ ಭಕ್ತರು ದೇಣಿಗೆ ನೀಡಿದ್ದಾರೆ. ಆದರೆ, ಸುಮಾರು 400 ಕೋಟಿ ಹಣ ಭಕ್ತರ ಕಾಣಿಕೆ ರೂಪದಲ್ಲಿ ಬಂದಿದ್ದು, ಒಬ್ಬ ವ್ಯಕ್ತಿಯ ಹೆಸರಲ್ಲಿದ್ದರೆ ಯಾರೂ ಒಪ್ಪಲು ಸಾಧ್ಯ. ಯಾವ ಸಮುದಾಯ, ಸಮಾಜವೂ ಒಪ್ಪುವುದಿಲ್ಲ. ಈ ವಿಚಾರ ದೊಡ್ಡದು ಮಾಡುವುದು ಬೇಡ. ಶಾಂತಿಯುತವಾಗಿ ಚರ್ಚಿಸಿ ಬಗೆಹರಿಸೋಣ ಎಂದು ಶಾಮನೂರು ಶಿವಶಂಕರಪ್ಪ ಸಲಹೆ ನೀಡಿದ್ದಾರೆ.

ಸಭೆಯಲ್ಲಿ ಮಾಜಿ ಸಚಿವ ಎಸ್ ಎ. ರವೀಂದ್ರನಾಥ್, ಮಾಜಿ ಸಚಿವ ಬಿ. ಸಿ. ಪಾಟೀಲ್, ಹರಿಹರ ಶಾಸಕ ಬಿ.ಪಿ.ಹರೀಶ್, ಸಮಾಜದ ಮುಖಂಡರಾದ ಅಣಬೇರು ರಾಜಣ್ಣ, ಹೆಚ್. ಎನ್. ಶೇಖರಪ್ಪ, ಚೇತನ ಎಲೇಬೇತೂರು, ಮಹೇಶ ಪಲ್ಲಾಗಟ್ಟೆ, ಎಂಎಲ್‌ಸಿ ರುದ್ರೇ ಗೌಡ, ಮಾಜಿ ಶಾಸಕರಾದ ವಡ್ನಾಳ್ ರಾಜಣ್ಣ, ಟಿ.ಗುರುಸಿದ್ದನಗೌಡ, ಮಾಡಾಳ್ ಮಲ್ಲಿಕಾರ್ಜುನ್, ಜೆ.ಆರ್‌.ಷಣ್ಮುಗಪ್ಪ, ಎಚ್.ಎನ್.ಚಂದ್ರಶೇಖರಪ್ಪ, ಬೆನಕಪ್ಪ, ಪ್ರೊ.ಸಿದ್ದಪ್ಪ ಮತ್ತಿತರರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...