ಕೊಪ್ಪಳ | ದಲಿತರ ಮೇಲಿನ ದೌರ್ಜನ್ಯ ವಿರೋಧಿಸಿ ʼಸಂಗನಹಾಲ ಚಲೋʼ

Date:

ಕ್ಷೌರ ಮಾಡಲು ನಿರಾಕರಿಸಿ ದಲಿತ ಯುವಕನ ಕೊಲೆ ಪ್ರಕರಣ ಖಂಡಿಸಿ ಸೆ.17 ಮತ್ತು 18 ರಂದು ಸಮಾನ ಬದುಕಿನತ್ತ ಅರಿವಿನ ಜಾಥಾ ಮೂಲಕ ’ಸಂಗನಹಾಲ ಚಲೋʼ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಸಂಗನಹಾಲ ಚಲೋ ಸಂಚಾಲಕ ಬಸವರಾಜ ಸೂಳಿಬಾವಿ ಹೇಳಿದರು.

ಕೊಪ್ಪಳದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ʼಸಂಗನಹಾಲ ಚಲೋ ಅಂಗವಾಗಿ ಸೆ.17 ರಂದು ಕೊಪ್ಪಳ ಜಿಲ್ಲಾಡಳಿತ ಕಚೇರಿಯಿಂದ ಸಂಗನಹಾಲ ಗ್ರಾಮದವರೆಗೆ ಜಾಥಾ ಹಾಗೂ ಸಂಗನಹಾಲ ಗ್ರಾಮದಲ್ಲಿ ಸೆ.18 ರಂದು ಸೌಹಾರ್ದತೆ ಸಮಾವೇಶ ಹಮ್ಮಿಕೊಳ್ಳಲಾಗಿದೆʼ ಎಂದು ಮಾಹಿತಿ ನೀಡಿದರು.

ಕೊಪ್ಪಳ ಜಿಲ್ಲೆಯನ್ನು ದಲಿತರ ದೌರ್ಜನ್ಯ ಪೀಡಿತ ಜಿಲ್ಲೆ ಎಂದು ಘೋಷಿಸಬೇಕು. ಸರ್ಕಾರ ಜಿಲ್ಲೆಯ ದಲಿತರ ಸಮುದಾಯಗಳಿಗೆ ಸೂಕ್ತ ರಕ್ಷಣೆ ಒದಗಿಸುವ ವ್ಯವಸ್ಥೆ ಮಾಡಬೇಕು. ಸ್ವಾಲಂಬಿಗಳಾಗಿ ಬದುಕಲು ಜನರಿಗೆ ಉದ್ಯೋಗ ಅವಕಾಶಗಳನ್ನು ಸೃಷ್ಟಿಸಬೇಕು. ಕಲ್ಯಾಣ ಕರ್ನಾಟಕ ಜನರ ಕಲ್ಯಾಣಕ್ಕಾಗಿ ಸರ್ಕಾರ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ಕೊಡಬೇಕುʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮತ ರಾಜಕಾರಣಕ್ಕಾಗಿ ಘೋಷಿಸಿದ ಕಲ್ಯಾಣ ಕರ್ನಾಟಕ ಹೆಸರು ಹಿಂಪಡೆದು ಚಾರಿತ್ರಿಕವಾಗಿ ಸರಿಯಾಗಿರುವ ʼಹೈದರಾಬಾದ ಕರ್ನಾಟಕʼ ಹೆಸರನ್ನು ಪುನರ್ ಘೋಷಣೆಯಾಗಬೇಕು. ಹಳೆ ಹೆಸರು ಈ ಭಾಗದ ಜನರ ವಿಮೋಚನೆಯ ಹೋರಾಟದ ಜತೆಗೆ ತಳಕು ಹಾಕಿಕೊಂಡಿದೆ. ಅಸ್ಪೃಶ್ಯತೆಯ ನಿವಾರಣೆಗೆ ಶಾಶ್ವತ ಪರಿಹಾರವನ್ನು ಹುಡುಕಬೇಕಾಗಿದೆ. ದಲಿತರ ಮೇಲೆ ಹಲ್ಲೆ, ಗಲಭೆಗಳು ನಡೆದಾಗ ಹಲ್ಲೆಗೊಳಗಾದವರ ಮೇಲೆ ಪ್ರತಿ ದೂರು ದಾಖಲಿಸುವ ಪ್ರವೃತ್ತಿ ನಿಲ್ಲಬೇಕು. ಈ ಹಿಂದೆ ದಾಖಲಾಗಿರುವ ಎಲ್ಲಾ ಕೌಂಟರ್ ಕೇಸ್‌ಗಳನ್ನು ಸರ್ಕಾರ ಹಿಂಪಡೆಯಬೇಕುʼ ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ನಾವು ತಲ್ವಾರ್ ಹಿಡಿಯುತ್ತೇವೆ; ಪ್ರತಾಪ್ ಸಿಂಹ ಮತ್ತೊಂದು ವಿವಾದಾತ್ಮಕ ಹೇಳಿಕೆ

ಮುಖಂಡರಾದ ಅಲ್ಲಮಪ್ರಭು ಬೆಟ್ಟದೂರು, ಬಸವರಾಜ್ ಶೀಲವಂತರ್, ಮುದ್ದಣ್ಣ ಸಂಗನಹಾಲ, ಶುಕರಾಜ್ ತಾಳಿಕೇರಿ, ವೆಂಕಟೇಶ್ , ಹನುಮೇಶ್, ಸಂಜಯ್ ದಾಸ್ , ಮಹಾಂತೇಶ್ ಕೊತಬಾಳ, ಶಿವಪ್ಪ ಹಡಪದ ಸೇರಿದಂತೆ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...